Please enable javascript.ಬಿಜೆಪಿ ಜನರಿಗೆ ಮೋಸ ಮಾಡುತ್ತಿದೆ :ಲಕ್ಷ್ಮೀ - ಬಿಜೆಪಿ ಜನರಿಗೆ ಮೋಸ ಮಾಡುತ್ತಿದೆ :ಲಕ್ಷ್ಮೀ - Vijay Karnataka

ಬಿಜೆಪಿ ಜನರಿಗೆ ಮೋಸ ಮಾಡುತ್ತಿದೆ :ಲಕ್ಷ್ಮೀ

ವಿಕ ಸುದ್ದಿಲೋಕ 7 Jul 2014, 4:59 am
Subscribe

ಬೆಳಗಾವಿ :ದೇಶದ ಜನರಿಗೆ ಅಂಗೈಯಲ್ಲಿ ಅರಮನೆ ತೋರಿಸಿ ಅಧಿಕಾರ ಪಡೆದಿರುವ ಕೇಂದ್ರದ ಮೋದಿ ಸರಕಾರ ಜನರಿಗೆ ಮೋಸ ಮಾಡುತ್ತಿದೆ. ಅಧಿಕಾರ ಕೊಟ್ಟರೆ ಬೆಲೆ ಏರಿಕೆಯನ್ನು ಕ್ಷಣಾರ್ಧದಲ್ಲೇ ನಿಯಂತ್ರಿಸುತ್ತೇವೆ ಎಂದು ಹೇಳಿಕೊಂಡಿದ್ದ ಬಿಜೆಪಿ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಲಾಗದೆ ಬಂಡವಾಳಶಾಹಿಗಳ ಮರ್ಜಿ ಕಾಯುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಆರೋಪಿಸಿದರು.

ಬಿಜೆಪಿ ಜನರಿಗೆ ಮೋಸ ಮಾಡುತ್ತಿದೆ :ಲಕ್ಷ್ಮೀ
ಬೆಳಗಾವಿ :ದೇಶದ ಜನರಿಗೆ ಅಂಗೈಯಲ್ಲಿ ಅರಮನೆ ತೋರಿಸಿ ಅಧಿಕಾರ ಪಡೆದಿರುವ ಕೇಂದ್ರದ ಮೋದಿ ಸರಕಾರ ಜನರಿಗೆ ಮೋಸ ಮಾಡುತ್ತಿದೆ. ಅಧಿಕಾರ ಕೊಟ್ಟರೆ ಬೆಲೆ ಏರಿಕೆಯನ್ನು ಕ್ಷಣಾರ್ಧದಲ್ಲೇ ನಿಯಂತ್ರಿಸುತ್ತೇವೆ ಎಂದು ಹೇಳಿಕೊಂಡಿದ್ದ ಬಿಜೆಪಿ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಲಾಗದೆ ಬಂಡವಾಳಶಾಹಿಗಳ ಮರ್ಜಿ ಕಾಯುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಆರೋಪಿಸಿದರು.

ನಗರದ ಕ್ಲಬ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಹಿರೇಬಾಗೆವಾಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಕೇಂದ್ರದಲ್ಲಿರುವ ಮೋದಿ ಸರಕಾರಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವ ಇಚ್ಛಾ ಶಕ್ತಿ ಇಲ್ಲ. ಬಂಡವಾಳಶಾಹಿಗಳ, ಉದ್ಯಮಿಗಳ ಬೆಂಬಲದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಈಗ ಬೆಲೆ ನಿಯಂತ್ರಿಸಲು ಯಾವುದೇ ಕ್ರಮ ಕೈಗೊಳ್ಳದೆ ಬಂಡವಾಳಶಾಹಿಗಳ ಋಣ ತೀರಿಸಿ ಸಾಮಾನ್ಯ ಜನರಿಗೆ ಮೋಸ ಮಾಡುತ್ತಿದೆ ಎಂದು ದೂರಿದರು.

ಕೇಂದ್ರದ ಪ್ರತಿ ವೈಫಲ್ಯಗಳನ್ನು ಖಂಡಿಸಿ ಜನಪರ ಹೊರಾಟ ನಡೆಸಿ ಜನರ ಹಿತ ಕಾಯಲು ಕಾಂಗ್ರೆಸ್ ಕಾರ್ಯಕರ್ತರು ಸನ್ನದ್ಧರಾಗಬೇಕು. ಗ್ರಾಮ ಮಟ್ಟದಲ್ಲಿ ಪಕ್ಷದ ಸಂಘಟನೆ ಮಾಡುವುದರ ಜತೆಗೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.

ಹಿರೇಬಾಗೇವಾಡಿ ಬ್ಲಾಕ್ ಅಧ್ಯಕ್ಷ ಸಿ.ಸಿ. ಪಾಟೀಲ, ನಿಂಗನಗೌಡ ಪಾಟೀಲ, ಶಂಕರಗೌಡ ಪಾಟೀಲ, ವಿನಯ ನಾವಲಗಟ್ಟಿ, ಧರೀಗೌಡ ಪಾಟೀಲ, ಅಡಿವೇಶ ಇಟಗಿ, ನಾಗೇಶ ದೇಸಾಯಿ ಮಾತನಾಡಿ ಪಕ್ಷದ ಸಂಘಟನೆ ಕುರಿತು ಸಲಹೆ ಸೂಚನೆ ನಿಡಿದರು.

ಕುತುಬುದ್ದೀನ್ ಸನದಿ, ಮಲ್ಲೇಶ ರಾಮಚನ್ನವರ, ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ