ಆ್ಯಪ್ನಗರ

ಆದರ್ಶ ವಿದ್ಯಾಲಯದಲ್ಲಿ 2024ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಮೇ.7 ಕೊನೆ ದಿನ: ಆಯ್ಕೆಪಟ್ಟಿ, ಕಟ್‌ಆಫ್‌ ಅಂಕ ಪ್ರಕಟ

2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಆದರ್ಶ ವಿದ್ಯಾಲಯಗಳಲ್ಲಿ 6ನೇ ಕ್ಲಾಸ್‌ಗೆ ಪ್ರವೇಶ ಸಂಬಂಧ, ಅರ್ಹತಾ ಪಟ್ಟಿ, ಕಟ್‌ಆಫ್‌ ಅಂಕ, ಪ್ರವೇಶ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಕುರಿತ ಅಪ್‌ಡೇಟ್ಸ್‌ ಅನ್ನು ಇಲ್ಲಿ ನೋಡಬಹುದು.

Authored byಸುನೀಲ್ ಬಿ ಎನ್ | Vijaya Karnataka Web 2 May 2024, 1:24 pm

ಹೈಲೈಟ್ಸ್‌:

  • ಆದರ್ಶ ವಿದ್ಯಾಲಯ ಪ್ರವೇಶ ವೇಳಾಪಟ್ಟಿ ಪ್ರಕಟ.
  • ಮೊದಲ ಸುತ್ತಿನ ಅರ್ಹತಾ ಪಟ್ಟಿಯೂ ಬಿಡುಗಡೆ.
  • ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆ ಅಂಕಗಳು, ಕಟ್‌ಆಫ್‌ ಅಂಕಗಳು ಪ್ರಕಟ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಆದರ್ಶ ವಿದ್ಯಾಲಯ ಪ್ರವೇಶ ವೇಳಾಪಟ್ಟಿ ಪ್ರಕಟ.
adarsha vidyalaya 2024 25th academic year 6th class admission time table 2024 selection list released
ಕರ್ನಾಟಕದಲ್ಲಿನ ಆದರ್ಶ ವಿದ್ಯಾಲಯ ಮಾದರಿ ಶಾಲೆಗಳಲ್ಲಿ ಪ್ರತಿ ವರ್ಷ ಪ್ರವೇಶ ಪರೀಕ್ಷೆ ಮೂಲಕ 6ನೇ ತರಗತಿಗೆ ಅಡ್ಮಿಷನ್‌ ನೀಡಲಾಗುತ್ತದೆ. ಅದರಂತೆ 2024-25 ನೇ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಸಂಬಂಧ ಮೊದಲ ಸುತ್ತಿನ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜತೆಗೆ ಈ ವಿದ್ಯಾರ್ಥಿಗಳು ಅಡ್ಮಿಷನ್ ಪಡೆಯಲು ಮೇ 07, 2024 ರವರೆಗೆ ಅವಕಾಶ ನೀಡಲಾಗಿದೆ.
2024-25 ನೇ ಶೈಕ್ಷಣಿಕ ಸಾಲಿಗೆ ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿಗೆ ಪ್ರವೇಶ ಪರೀಕ್ಷೆಯನ್ನು ನಡೆಸಲು ಕಳೆದ ಫೆಬ್ರುವರಿ ತಿಂಗಳಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಹಾಗೂ ಮಾರ್ಚ್ 03, 2024 ರಂದು ಪ್ರವೇಶ ಪರೀಕ್ಷೆಯನ್ನು ನಡೆಸಿತ್ತು. ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ದಿನಾಂಕ 26-03-2024 ರಂದು ಪ್ರಕಟಿಸಲಾಗಿತ್ತು.

ಆಯ್ಕೆಪಟ್ಟಿ, ಕಟ್‌ಆಫ್‌ ಅಂಕ ಪ್ರಕಟ

ಪ್ರಸ್ತುತ ಮೊದಲ ಸುತ್ತಿನಲ್ಲಿ 2024-25 ನೇ ಶೈಕ್ಷಣಿಕ ಸಾಲಿಗೆ ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿಗೆ ಪ್ರವೇಶಕ್ಕೆ ಆಯ್ಕೆ ಆದ ವಿದ್ಯಾರ್ಥಿಗಳ ಲಿಸ್ಟ್‌ ಅನ್ನು ಪ್ರಕಟಿಸಲಾಗಿದೆ. ಜತೆಗೆ ಸದರಿ ಪಟ್ಟಿಗೆ ಪರಿಗಣಿಸಲಾದ ಕೊನೆ ವಿದ್ಯಾರ್ಥಿಯ (ವರ್ಗಾವಾರು) ಕಟ್‌ ಆಫ್‌ ಅಂಕಗಳನ್ನು ಸಹ ಬಿಡುಗಡೆ ಮಾಡಲಾಗಿದೆ.

ವಿದ್ಯಾರ್ಥಿಗಳು ಹಾಗೂ ಪೋಷಕರು ಜಿಲ್ಲಾವಾರು ಕಟ್‌ಆಫ್‌ ಅಂಕಗಳನ್ನು ಚೆಕ್‌ ಮಾಡಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿರಿ.

Cut Off Marks

ಪ್ರವೇಶಾತಿ ವೇಳಾಪಟ್ಟಿ

ಮೊದಲ ಸುತ್ತಿನಲ್ಲಿ ಅರ್ಹತೆ ಪಡೆದ ವಿದ್ಯಾರ್ಥಿಗಳು ಮೀಸಲಾತಿ ಆಧಾರದ ಮೇಲೆ 6ನೇ ತರಗತಿಗೆ ಪ್ರವೇಶ ಪಡೆಯಲು ದಿನಾಂಕಗಳು: ಏಪ್ರಿಲ್ 29 ರಿಂದ ಮೇ 07, 2024 ರವರೆಗೆ.
ಮೊದಲ ಸುತ್ತಿನ ದಾಖಲಾತಿ ನಂತರ ಉಳಿಕೆ ಸೀಟುಗಳಿಗೆ ಮೀಸಲಾತಿ ಅನ್ವಯ ಸೀಟುಗಳ ಪ್ರಕಟಣೆ ದಿನಾಂಕ: 15-05-2024
2ನೇ ಸುತ್ತಿನ ಅರ್ಹತೆಯ ವಿದ್ಯಾರ್ಥಿಗಳು ಅಡ್ಮಿಷನ್ ಪಡೆಯಲು ದಿನಾಂಕಗಳು : ಮೇ 20 ರಿಂದ 28, 2024
ಮೂರನೇ ಸುತ್ತಿಗೆ ಸೀಟುಗಳ ಪ್ರಕಟಣೆ ದಿನಾಂಕ : 04-06-2024
3ನೇ ಸುತ್ತಿನ ಅರ್ಹ ವಿದ್ಯಾರ್ಥಿಗಳು ಅಡ್ಮಿಷನ್ ಪಡೆಯಲು ದಿನಾಂಕಗಳು : ಜೂನ್ 10 ರಿಂದ 18, 2024.
ಲೇಖಕರ ಬಗ್ಗೆ
ಸುನೀಲ್ ಬಿ ಎನ್
"ಸುನೀಲ್ ಬಿ ಎನ್ ರವರು ಅನುಭವಿ ಬರಹಗಾರರಾಗಿದ್ದು, ಕಳೆದ 7 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು 2015 ರಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ನಂತರ ಹಲವು ಡೊಮೈನ್‌ಗಳಲ್ಲಿ ಕೆಲಸ ಮಾಡುವ ಮೂಲಕ ತಮ್ಮ ವೃತ್ತಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡಿದ್ದಾರೆ. ಸುನೀಲ್ ರವರು ವೈವಿಧ್ಯಮಯ ಪರಿಣತಿಯನ್ನು ಹೊಂದಿದ್ದು, ತಂತ್ರಜ್ಞಾನ, ಸಿನಿಮಾ, ಉದ್ಯೋಗ, ಶಿಕ್ಷಣ, ಜೀವನಶೈಲಿ ಸೇರಿದಂತೆ ಸುದ್ದಿ ವಿಭಾಗದಲ್ಲೂ ಕೆಲಸದ ಅನುಭವ ಹೊಂದಿದ್ದಾರೆ. ಕಳೆದ 3.6 ವರ್ಷಗಳಿಂದ ಸುನೀಲ್‌ ರವರು ಉದ್ಯೋಗ ಮತ್ತು ಶಿಕ್ಷಣ ವಿಭಾಗದಲ್ಲಿ ತಮ್ಮ ಬರವಣಿಗೆ ಕೃಷಿಯನ್ನು ಕೇಂದ್ರೀಕರಿಸಿದ್ದು, ಈ ವಿಷಯಗಳಲ್ಲಿ ಉದ್ಯಮದ ಸೂಕ್ಷ್ಮ ವ್ಯತ್ಯಾಸಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ಬೆಳೆಸಿಕೊಂಡಿದ್ದಾರೆ. ಈ ಎರಡು ಡೊಮೇನ್‌ಗಳಲ್ಲಿನ ಬೆಳವಣಿಗೆ ಹಾಗೂ ಬದಲಾವಣೆ ಕುರಿತು ಲೇಟೆಸ್ಟ್‌ ಮಾಹಿತಿಗಳನ್ನು ರಚಿಸುವ ಮೂಲಕ ಓದುಗರಿಗೆ ಸಹಾಯ ಮಾಡುವ ಹಾಗೂ ಅವರಿಗೆ ಉಪಯುಕ್ತ ಮಾಹಿತಿ ನೀಡುವಲ್ಲಿ ಸದಾ ಉತ್ಸುಕರಾಗಿ ಕೆಲಸ ಮಾಡುತ್ತಿದ್ದಾರೆ. ಬರವಣಿಗೆ ಹೊರತಾಗಿ, ಸುನೀಲ್‌ ಬಿ ಎನ್‌ ರವರು ಹಲವು ಉತ್ತಮ ಹವ್ಯಾಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬಿಡುವಿನ ವೇಳೆ ಪ್ರಯಾಣಿಸಲು ಹಾಗೂ ಹೊಸ ಸ್ಥಳಗಳನ್ನು ಅನ್ವೇಷಿಸಲು ಇಷ್ಟಪಡುತ್ತಾರೆ. ಪ್ರಯಾಣವನ್ನು ಶಿಕ್ಷಣದ ಒಂದು ಭಾಗ ಎಂದುಕೊಂಡಿರುವ ಇವರು, ತಮ್ಮ ಈ ಹವ್ಯಾಸದಿಂದ ಅವರ ದೃಷ್ಟಿಕೋನವನ್ನು ವಿಸ್ತರಿಸಲು ಮತ್ತು ವಿಭಿನ್ನ ಸಂಸ್ಕೃತಿಗಳ ಉತ್ತಮ ತಿಳುವಳಿಕೆಯನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಭಾವಿಸಿದ್ದಾರೆ. ಅತ್ಯಾಸಕ್ತಿಯ ಓದುಗರು ಆಗಿದ್ದು ಕಥೆ, ಕಾದಂಬರಿ, ನಾಟಕಗಳ ಪುಸ್ತಕಗಳನ್ನು ಓದುವುದನ್ನು ಇಷ್ಟಪಡುತ್ತಾರೆ. ಬಿಡುವಿನ ವೇಳೆ ಚೆಸ್‌ ಆಡುವುದು ಮತ್ತು ಕೃಷಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕವು ವಿಶ್ರಾಂತಿ ಪಡೆಯುತ್ತಾರೆ. "... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌