Please enable javascript.Ksou Admission 2023 End Date,ಕರ್ನಾಟಕ ರಾಜ್ಯ ಮುಕ್ತ ವಿವಿಯ ಪ್ರವೇಶಾತಿಗೆ ಆಗಸ್ಟ್ 31 ಕೊನೆ ‌ದಿನ - august 31st is end date to apply online for ksou degree master degree courses admission 2023 - Vijay Karnataka

ಕರ್ನಾಟಕ ರಾಜ್ಯ ಮುಕ್ತ ವಿವಿಯ ಪ್ರವೇಶಾತಿಗೆ ಆಗಸ್ಟ್ 31 ಕೊನೆ ‌ದಿನ

Authored byಸುನೀಲ್ ಬಿ ಎನ್ | Vijaya Karnataka Web 21 Aug 2023, 5:03 pm
Subscribe

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ವಿವಿಧ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಿ ಕಳೆದ ತಿಂಗಳು ನೋಟಿಫಿಕೇಶನ್‌ ಬಿಡುಗಡೆ ಮಾಡಿತ್ತು. ಇದೀಗ ಅರ್ಜಿ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಆಸಕ್ತರು ಆಗಸ್ಟ್‌ 31 ರೊಳಗೆ ಅರ್ಜಿ ಹಾಕಿರಿ.

ಹೈಲೈಟ್ಸ್‌:

  • ಕೆಎಸ್‌ಒಯು ನಲ್ಲಿ ವಿವಿಧ ಕೋರ್ಸ್‌ಗಳಿಗೆ ಪ್ರವೇಶ.
  • ಅರ್ಜಿಗೆ ಆಗಸ್ಟ್‌ 31 ಕೊನೆ ದಿನ.
  • ಕೋರ್ಸ್‌ವಾರು ಶುಲ್ಕ ಮಾಹಿತಿ ಇಲ್ಲಿದೆ.
ksou admission 2023 end date
ksou admission 2023 end date
ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕ, ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ (General,, IT)., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್‌.ಐ.ಎಸ್ಸಿ., {ಎಂ.ಬಿ.ಎ., ಎಂ.ಸಿ.ಎ(AICTE Approved)}., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.
ಕೆಎಸ್‌ಒಯು ಯುಜಿಸಿಯಿಂದ ಮಾನ್ಯತೆ ಪಡೆದಿದೆ ಮತ್ತು ನ್ಯಾಕ್ ನಿಂದ "ಎ ಪ್ಲಸ್" ಮಾನ್ಯತೆ ಪಡೆದಿದ್ದು, ಈ ಮೇಲಿನ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್‌ 31 ಕೊನೆ ದಿನವಾಗಿದೆ. ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳು ಎರಡು ಒಂದೇ ಸಮನಾದ ಅರ್ಹತೆ ಇದ್ದು, ಆಸಕ್ತರು ಬೇಗ ಬೇಗ ಅರ್ಜಿ ಸಲ್ಲಿಸಿ.

ಮುಕ್ತ ವಿವಿಯಲ್ಲಿ ಪ್ರವೇಶಾತಿ ಪಡೆಯುವ ಎಸ್‌ಸಿ / ಎಸ್‌ಟಿ / ಒಬಿಸಿ / ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ SSP ಮು‌ಖಾಂತರ ವಿದ್ಯಾರ್ಥಿ ವೇತನ ಪಡೆಯಬಹುದು ಎಂದು ಕೆಎಸ್‌ಒಯು ತುಮಕೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ. ಲೋಕೇಶ ಆರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.

ವಿದ್ಯಾ ಲಕ್ಷ್ಮೀ ಶೈಕ್ಷಣಿಕ ಸಾಲ 2023: ಅರ್ಹತೆ, ಅರ್ಜಿ ವಿಧಾನ, ಬೇಕಾದ ದಾಖಲೆಗಳ ಮಾಹಿತಿ ಇಲ್ಲಿವೆ..

ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ
ಬಿ.ಎ-ರೂ.7,700/-.
ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-11,500/-.
ಬಿ.ಕಾಂ.-ರೂ.8,200/-.
ಬಿ.ಸಿ.ಎ/ಬಿ.ಎಸ್ಸಿ-ರೂ.22,500/-.
ಬಿ.ಎಸ್.ಡಬ್ಲ್ಯೂ-ರೂ.12,000/-.
ಎಂ.ಎ-ರೂ.9,800/-.
ಎಂ.ಎಸ್ಸಿ/ಎಂ.ಬಿ.ಎ/ಎಂ.ಸಿ.ಎ-ರೂ.28,000/-.
ಎಂ.ಕಾಂ-ರೂ.11,500/-.
ಎಂ.ಸಿ.ಜೆ-ರೂ.15,100/-.
ಎಂ.ಎಸ್.ಡಬ್ಲ್ಯೂ-ರೂ.20,000/-.
ಎಂ.ಎಲ್.ಐ.ಎಸ್ಸಿ-ರೂ.17,000/-.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಪ್ರಥಮ ವರ್ಷದ ಪ್ರವೇಶಾತಿಗೆ 2023ರ ಆಗಸ್ಟ್ 31ಕೊನೆಯ ದಿನಾಂಕ.

ಐಬಿಪಿಎಸ್ ನಿಂದ 4451 PO, MT, SO ಹುದ್ದೆ ನೇಮಕ: ಆನ್‌ಲೈನ್‌ ಅರ್ಜಿಗೆ ಇಂದೇ ಕೊನೆ ದಿನ

ಇತರೆ ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105.

ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದು.

ಪಿಜಿ ವೈದ್ಯಕೀಯ, ದಂತವೈದ್ಯಕೀಯ, ಡಿಎನ್‌ಬಿ ಸೀಟ್‌ ಮ್ಯಾಟ್ರಿಕ್ಸ್‌, ಪ್ರವೇಶಾತಿ ವೇಳಾಪಟ್ಟಿ ಬಿಡುಗಡೆ
ಸುನೀಲ್ ಬಿ ಎನ್
ಲೇಖಕರ ಬಗ್ಗೆ
ಸುನೀಲ್ ಬಿ ಎನ್
"ಸುನೀಲ್ ಬಿ ಎನ್ ರವರು ಅನುಭವಿ ಬರಹಗಾರರಾಗಿದ್ದು, ಕಳೆದ 7 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು 2015 ರಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ನಂತರ ಹಲವು ಡೊಮೈನ್‌ಗಳಲ್ಲಿ ಕೆಲಸ ಮಾಡುವ ಮೂಲಕ ತಮ್ಮ ವೃತ್ತಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡಿದ್ದಾರೆ. ಸುನೀಲ್ ರವರು ವೈವಿಧ್ಯಮಯ ಪರಿಣತಿಯನ್ನು ಹೊಂದಿದ್ದು, ತಂತ್ರಜ್ಞಾನ, ಸಿನಿಮಾ, ಉದ್ಯೋಗ, ಶಿಕ್ಷಣ, ಜೀವನಶೈಲಿ ಸೇರಿದಂತೆ ಸುದ್ದಿ ವಿಭಾಗದಲ್ಲೂ ಕೆಲಸದ ಅನುಭವ ಹೊಂದಿದ್ದಾರೆ. ಕಳೆದ 3.6 ವರ್ಷಗಳಿಂದ ಸುನೀಲ್‌ ರವರು ಉದ್ಯೋಗ ಮತ್ತು ಶಿಕ್ಷಣ ವಿಭಾಗದಲ್ಲಿ ತಮ್ಮ ಬರವಣಿಗೆ ಕೃಷಿಯನ್ನು ಕೇಂದ್ರೀಕರಿಸಿದ್ದು, ಈ ವಿಷಯಗಳಲ್ಲಿ ಉದ್ಯಮದ ಸೂಕ್ಷ್ಮ ವ್ಯತ್ಯಾಸಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ಬೆಳೆಸಿಕೊಂಡಿದ್ದಾರೆ. ಈ ಎರಡು ಡೊಮೇನ್‌ಗಳಲ್ಲಿನ ಬೆಳವಣಿಗೆ ಹಾಗೂ ಬದಲಾವಣೆ ಕುರಿತು ಲೇಟೆಸ್ಟ್‌ ಮಾಹಿತಿಗಳನ್ನು ರಚಿಸುವ ಮೂಲಕ ಓದುಗರಿಗೆ ಸಹಾಯ ಮಾಡುವ ಹಾಗೂ ಅವರಿಗೆ ಉಪಯುಕ್ತ ಮಾಹಿತಿ ನೀಡುವಲ್ಲಿ ಸದಾ ಉತ್ಸುಕರಾಗಿ ಕೆಲಸ ಮಾಡುತ್ತಿದ್ದಾರೆ. ಬರವಣಿಗೆ ಹೊರತಾಗಿ, ಸುನೀಲ್‌ ಬಿ ಎನ್‌ ರವರು ಹಲವು ಉತ್ತಮ ಹವ್ಯಾಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬಿಡುವಿನ ವೇಳೆ ಪ್ರಯಾಣಿಸಲು ಹಾಗೂ ಹೊಸ ಸ್ಥಳಗಳನ್ನು ಅನ್ವೇಷಿಸಲು ಇಷ್ಟಪಡುತ್ತಾರೆ. ಪ್ರಯಾಣವನ್ನು ಶಿಕ್ಷಣದ ಒಂದು ಭಾಗ ಎಂದುಕೊಂಡಿರುವ ಇವರು, ತಮ್ಮ ಈ ಹವ್ಯಾಸದಿಂದ ಅವರ ದೃಷ್ಟಿಕೋನವನ್ನು ವಿಸ್ತರಿಸಲು ಮತ್ತು ವಿಭಿನ್ನ ಸಂಸ್ಕೃತಿಗಳ ಉತ್ತಮ ತಿಳುವಳಿಕೆಯನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಭಾವಿಸಿದ್ದಾರೆ. ಅತ್ಯಾಸಕ್ತಿಯ ಓದುಗರು ಆಗಿದ್ದು ಕಥೆ, ಕಾದಂಬರಿ, ನಾಟಕಗಳ ಪುಸ್ತಕಗಳನ್ನು ಓದುವುದನ್ನು ಇಷ್ಟಪಡುತ್ತಾರೆ. ಬಿಡುವಿನ ವೇಳೆ ಚೆಸ್‌ ಆಡುವುದು ಮತ್ತು ಕೃಷಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕವು ವಿಶ್ರಾಂತಿ ಪಡೆಯುತ್ತಾರೆ. "... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ