ಆ್ಯಪ್ನಗರ

ಪ್ರತಿ ತಿಂಗಳ ಒಂದು ಶನಿವಾರ ಮಕ್ಕಳಿಗೆ ಬ್ಯಾಗ್‌ ರಹಿತ ದಿನ ಆಚರಣೆ : ಮಾರ್ಗಸೂಚಿ ಬಿಡುಗಡೆ

ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಈ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳು ಒಂದು ಶನಿವಾರದಂದು ಸಂಭ್ರಮ ಶನಿವಾರ ಬ್ಯಾಗ್‌ ರಹಿತ ದಿನವನ್ನು ಆಚರಿಸಲು ಸೂಚಿಸಲಾಗಿದೆ.

Vijaya Karnataka Web 29 Oct 2022, 7:05 pm

ಹೈಲೈಟ್ಸ್‌:

  • ರಾಜ್ಯದ ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್.
  • ಪ್ರತಿ ತಿಂಗಳ ಒಂದು ಶನಿವಾರ ಮಕ್ಕಳಿಗೆ ಬ್ಯಾಗ್‌ ರಹಿತ ದಿನ ಆಚರಣೆ.
  • ಬ್ಯಾಗ್‌ ರಹಿತ ದಿನ ಆಚರಣೆ ಕುರಿತು ಮಾರ್ಗಸೂಚಿ ಬಿಡುಗಡೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web students will go without school bags on Saturday guidelines Released at dsert karnataka gov in
ಪ್ರತಿ ತಿಂಗಳ ಒಂದು ಶನಿವಾರ ಮಕ್ಕಳಿಗೆ ಬ್ಯಾಗ್‌ ರಹಿತ ದಿನ ಆಚರಣೆ : ಮಾರ್ಗಸೂಚಿ ಬಿಡುಗಡೆ

ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳ ಒಂದು ಶನಿವಾರದಂದು ಬ್ಯಾಗ್ ರಹಿತ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಇದೀಗ ಅದರ ಮುಂದುವರೆದ ಭಾಗವಾಗಿ ಬ್ಯಾಗ್ ರಹಿತ ದಿನದ ಆಚರಣೆ ಸಂಬಂಧ ಶಾಲಾ ಶಿಕ್ಷಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಈ ಕುರಿತು ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿ ತಿಂಗಳು ಒಂದು ಶನಿವಾರದಂದು ಸಂಭ್ರಮ ಶನಿವಾರ ಬ್ಯಾಗ್‌ ರಹಿತ ದಿನವನ್ನು ಆಚರಿಸಲು ಸೂಚಿಸಲಾಗಿದೆ.

ಈ ದಿನಂದು ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗಾಗಿ ವಿವಿಧ ಹತ್ತು ವಿಷಯಗಳಲ್ಲಿ ಸ್ವಯಂ ವಿವರಣಾತ್ಮಕ ಚಿತ್ರ ಸಹಿತ ಚಟುವಟಿಕೆ ಪುಸ್ತಕಗಳನ್ನು ಹಾಗೂ ಅವುಗಲನ್ನು ತರಗತಿಗಳಲ್ಲಿ ನಿರ್ವಹಿಸಲು ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ಸಿದ್ಧಪಡಿಸಲಾಗಿದೆ.

'ಕರ್ನಾಟಕ ರತ್ನ' ಪ್ರಶಸ್ತಿ ವಿಶೇಷತೆ ಹಾಗೂ ಪುರಸ್ಕೃತರ ಪಟ್ಟಿ ಇಲ್ಲಿದೆ..
ಈಗಾಗಲೇ ಕಲಿಕಾ ಚೇತರಿಕೆ ಉಪಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಲ್ಲಿ ಅನ್ವಯಿಕ ಕಲಿಕಾ ಮನೋಭಾವವನ್ನು ಪ್ರೋತ್ಸಾಹಿಸುವಂತೆ, ಕಲಿಕಾ ಹಾಳೆಗಳಲ್ಲಿ ಚಟುವಟಿಕೆಗಳನ್ನು ನೀಡಲಾಗಿದೆ. ಈ ಕಲಿಕಾ ಹಾಳೆಗಳಲ್ಲಿನ ಚಟುವಟಿಕೆಗಳಿಗೆ ಪೂರಕವಾಗಿ 'ಸಂಭ್ರಮ ಶನಿವಾರ' ಚಟುವಟಿಕಾ ಪುಸ್ತಕಗಳನ್ನು ರೂಪಿಸಿರುವುದರಿಂದ ಪ್ರತಿ ತಿಂಗಳಲ್ಲಿ ಒಂದು ಶನಿವಾರದಂದು ಬ್ಯಾಗ್ ರಹಿತ ದಿನವನ್ನು ಆಚರಿಸುವುದು.

ವಿಶೇಷವಾಗಿ ಮಾಸಿಕ ಸಮಾಲೋಚನಾ ಸಭೆಗಳು ನಡೆಯುವ ದಿನಗಳಂದು ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ ಕಡಿಮೆಯಿರುವ ಸಂದರ್ಭದಲ್ಲಿ ಈ ಸಾಹಿತ್ಯವನ್ನು ಬಳಸಿಕೊಂಡು 'ಸಂಭ್ರಮ ಶನಿವಾರ' ವನ್ನು ಆಚರಿಸಬಹುದಾಗಿದೆ. ಈ ಸಂಬಂಧ ವಿದ್ಯಾರ್ಥಿ ಚಟುವಟಿಕೆ ಪುಸ್ತಕಗಳನ್ನು ಹಾಗೂ ಶಿಕ್ಷಕರ ಕೈಪಿಡಿಯನ್ನು ಡಿಎಸ್‌ಇಆರ್‌ಟಿ (DSERT) ವೆಬ್‌ಸೈಟ್‌ https://dsert.kar.nic.in ಅಪ್‌ಲೋಡ್‌ಮಾಡಲಾಗಿದೆ.

ಆದಿತ್ಯ ಬಿರ್ಲಾ ವಿದ್ಯಾರ್ಥಿವೇತನ : 1 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ 30 ಸಾವಿರ ಸ್ಕಾಲರ್‌ಶಿಪ್
ಸದರಿ ಕಲಿಕಾ ಸಾಮಾಗ್ರಿಗಳನ್ನು ಉಪಯೋಗಿಸುವಂತೆ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಎಲ್ಲಾ ಶಿಕ್ಷಕರಿಗೆ ಮಾಹಿತಿ ಒದಗಿಸುವಂತೆ ಪ್ರಕಟಣೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.

ರಾಷ್ಟ್ರೋತ್ಥಾನ ಪರಿಷತ್ ವತಿಯಿಂದ ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌