ಆ್ಯಪ್ನಗರ

Karnataka UGCET 2024 ಫಲಿತಾಂಶ ಚೆಕ್‌ ಮಾಡುವ ವಿಧಾನ ಇಲ್ಲಿದೆ..

KCET 2024 Result Date, Time : ಕರ್ನಾಟಕ ಕಾಮನ್ ಎಂಟ್ರ್ಯಾನ್ಸ್‌ ಟೆಸ್ಟ್‌ ರಿಸಲ್ಟ್‌ ಬಿಡುಗಡೆ ಯಾವಾಗ ಎಂದು ಕಾದು ಕುಳಿತಿರುವ ವಿದ್ಯಾರ್ಥಿಗಳಿಗೆ ಉತ್ತರ ಇಲ್ಲಿದೆ. ಹಾಗೂ ರಿಸಲ್ಟ್‌ ಚೆಕ್‌ ಮಾಡುವ ವಿಧಾನವನ್ನು ಇಲ್ಲಿ ತಿಳಿಸಲಾಗಿದೆ. ಸಿಇಟಿ ಫಲಿತಾಂಶದ ನಂತರ ಕೌನ್ಸಿಲಿಂಗ್ ವೇಳಾಪಟ್ಟಿ ಬಿಡುಗಡೆ ಮಾಡಲಾಗುತ್ತದೆ.

Authored byಸುನೀಲ್ ಬಿ ಎನ್ | Vijaya Karnataka Web 18 May 2024, 9:55 am

ಹೈಲೈಟ್ಸ್‌:

  • ಸಿಇಟಿ 2024 ರಿಸಲ್ಟ್‌ ಯಾವಾಗ?
  • ಸಿಇಟಿ ರಿಸಲ್ಟ್‌ ಚೆಕ್‌ ಮಾಡುವುದು ಹೇಗೆ?
  • ಈ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web UGCET 2024 Result Date
karnataka cet 2024 result link
2024-25ನೇ ಸಾಲಿನ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಅರ್ಹತಾ ಪರೀಕ್ಷೆಯಾದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ರಿಸಲ್ಟ್‌ ಬಿಡುಗಡೆಯ ದಿನಗಣನೆ ಆರಂಭವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 18, 19 ರಂದು ನಡೆಸಿದ್ದ ಯುಜಿಸಿಇಟಿ ಪರೀಕ್ಷೆಯ ಫಲಿತಾಂಶವು ಮೇ 20 ರಂದು ಪ್ರಕಟವಾಗಲಿದೆ. ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ತಮ್ಮ ಯುಜಿಸಿಇಟಿ ರಿಜಿಸ್ಟರ್ ನಂಬರ್ ಹಾಗೂ ತಮ್ಮ ಜನ್ಮ ದಿನಾಂಕ ಮಾಹಿತಿ ನೀಡಿ ಲಾಗಿನ್ ಆಗುವ ಮೂಲಕ ರಿಸಲ್ಟ್‌ ಚೆಕ್‌ ಮಾಡಬಹುದು.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ 2024) ಫಲಿತಾಂಶ ದಿನಾಂಕ: 20-05-2024
ಯುಜಿಸಿಇಟಿ 2024 ಫಲಿತಾಂಶ ಚೆಕ್‌ ಮಾಡಲು ವೆಬ್‌ ವಿಳಾಸ : https://cetonline.karnataka.gov.in/kea/ugcet2024


ಕೆಇಎ ಏಪ್ರಿಲ್ 18, 19 ರಂದು ನಡೆಸಿದ್ದ ಸಿಇಟಿ ಪರೀಕ್ಷೆಯನ್ನು 3.49 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.

ಕೆಸಿಇಟಿ ಬರೆದ 12th ಪಾಸ್ ವಿದ್ಯಾರ್ಥಿಗಳಿಗೆ ವಿಶೇಷ ಸೂಚನೆ

ಪ್ರಸಕ್ತ ವರ್ಷದ ಯುಜಿಸಿಇಟಿ ಬರೆದ 12ನೇ ತರಗತಿ / ದ್ವಿತೀಯ ಪಿಯುಸಿ ಪಾಸಾದ ವಿವಿಧ ಬೋರ್ಡ್‌ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಸಿಇಟಿ ಲಾಗಿನ್‌ನಲ್ಲಿ ದಾಖಲಿಸಲು ಕೆಇಎ ಸೂಚನೆ ನೀಡಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ, ದಿನಾಂಕಗಳ ಕುರಿತು ತಿಳಿಯಲು ಕೆಳಗಿನ ಲಿಂಕ್‌ ಕ್ಲಿಕ್ ಮಾಡಿ ಓದಿರಿ.

ಯುಜಿಸಿಇಟಿ 2024 ಕುರಿತು ಮಹತ್ವದ ಮಾಹಿತಿ: 12ನೇ ಕ್ಲಾಸ್ ಪಾಸಾದವರು ಅಂಕ ದಾಖಲಿಸಲು ಲಿಂಕ್ ಬಿಡುಗಡೆ

ಯುಜಿಸಿಇಟಿ 2024 ರಿಸಲ್ಟ್‌ ಚೆಕ್‌ ಮಾಡುವ ವಿಧಾನ

- ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿ ಅಫೀಶಿಯಲ್ ವೆಬ್‌ಸೈಟ್‌ https://cetonline.karnataka.gov.in/kea/ ಗೆ ಭೇಟಿ ನೀಡಿ.
- ಓಪನ್ ಆದ ವೆಬ್‌ಪುಟದಲ್ಲಿ 'ಪ್ರವೇಶ >> ಯುಜಿಸಿಇಟಿ 2024' ಆಯ್ಕೆ ಮಾಡಿ. ಅಥವಾ
- ಇತ್ತೀಚಿನ ಪ್ರಕಟಣೆಗಳು ಎಂದಿರುವ ಕೆಳಗಡೆ ' ಯುಜಿಸಿಇಟಿ 2024' ಫಲಿತಾಂಶದ ಲಿಂಕ್ ನೀಡಲಾಗಿರುತ್ತದೆ. ಕ್ಲಿಕ್ ಮಾಡಿ.
- ಕೆಇಎ'ಯ ಹೊಸ ಪೇಜ್‌ ತೆರೆಯುತ್ತದೆ.
- ಈ ಪೇಜ್‌ನಲ್ಲಿ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ನೀಡಿ, 'Submit' ಎಂಬಲ್ಲಿ ಕ್ಲಿಕ್ ಮಾಡಿ.
- ಫಲಿತಾಂಶ ಪ್ರದರ್ಶಿತವಾಗುತ್ತದೆ. ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ನೆನಪಿರಲಿ: ಸಿಇಟಿ ಫಲಿತಾಂಶದ ನಂತರ Engineering, ಇತರೆ ಕೋರ್ಸ್‌ ಪ್ರವೇಶಕ್ಕೆ ಸರ್ಕಾರದಿಂದ ಈ ಸಾಲ ಸಿಗಲಿದೆ!

ಸೀಟು ಹಂಚಿಕೆ ಯಾವಾಗ?
ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌ ಮುಂತಾದ ಎಲ್ಲ ಕೋರ್ಸ್‌ಗಳಿಗೆ ಯುಜಿಸಿಇಟಿ ಫಲಿತಾಂಶದ ನಂತರ ಮೊದಲನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಹಾಗೂ ಇತರೆ ಪ್ರಕ್ರಿಯೆಗಳ ಕುರಿತು ನೋಟಿಸ್‌ ಬಿಡುಗಡೆ ಆಗಲಿದೆ. ಅಭ್ಯರ್ಥಿಗಳು ಮೊದಲ ಸುತ್ತಿನ ಪ್ರವೇಶಾತಿ ಪಡೆದ ನಂತರ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಬಿಡುಗಡೆ ಆಗಲಿದೆ. ಇದೇ ರೀತಿ ಒಟ್ಟು 5 ಸುತ್ತಿನಲ್ಲಿ ಸೀಟು ಹಂಚಿಕೆ ಆಗಲಿದ್ದು, ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.

ಭಾರಿ ವಿವಾದಕ್ಕೆ ಕಾರಣವಾಗಿದ್ದ 2024 ಯುಜಿಸಿಇಟಿ

ಬಿಇ ಮತ್ತು ವೃತ್ತಿಪರ ಶಿಕ್ಷಣಗಳ ಪ್ರವೇಶ ಅರ್ಹತಾ ಪರೀಕ್ಷೆ ಕೆಸಿಇಟಿ 2024 ರಲ್ಲಿ ಸುಮಾರು 50 ಪಠ್ಯೇತರ ಪ್ರಶ್ನೆಗಳನ್ನು ಕೇಳಲಾಗಿದ್ದ ಕಾರಣ ಈ ಸಲ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಈ ಸಮಸ್ಯೆ ನಿವಾರಣೆಗಾಗಿ ಉನ್ನತ ಶಿಕ್ಷಣ ಇಲಾಖೆ ತಜ್ಞರ ಸಮಿತಿ ರಚಿಸಿ, ಪರಿಹಾರಗಳನ್ನು ಕೇಳಿತ್ತು. ಅದಕ್ಕೆ ವರದಿ ಸಿಕ್ಕಿದ್ದು, ಅದರ ಆಧಾರದಲ್ಲಿ ಉನ್ನತ ಶಿಕ್ಷಣ ಇಲಾಖೆ ಕೆಲವು ಮಹತ್ವದ ಆದೇಶಗಳನ್ನು ಇತ್ತೀಚೆಗೆ ಪ್ರಕಟಿಸಿತ್ತು. ಪಠ್ಯೇತರ ಪ್ರಶ್ನೆಗಳನ್ನು ಕೈಬಿಡುವ ಜತೆಗೆ, ಇತರೆ ಹಲವು ಆದೇಶ ನೀಡಲಾಗಿತ್ತು.
ಲೇಖಕರ ಬಗ್ಗೆ
ಸುನೀಲ್ ಬಿ ಎನ್
"ಸುನೀಲ್ ಬಿ ಎನ್ ರವರು ಅನುಭವಿ ಬರಹಗಾರರಾಗಿದ್ದು, ಕಳೆದ 7 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು 2015 ರಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ನಂತರ ಹಲವು ಡೊಮೈನ್‌ಗಳಲ್ಲಿ ಕೆಲಸ ಮಾಡುವ ಮೂಲಕ ತಮ್ಮ ವೃತ್ತಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡಿದ್ದಾರೆ. ಸುನೀಲ್ ರವರು ವೈವಿಧ್ಯಮಯ ಪರಿಣತಿಯನ್ನು ಹೊಂದಿದ್ದು, ತಂತ್ರಜ್ಞಾನ, ಸಿನಿಮಾ, ಉದ್ಯೋಗ, ಶಿಕ್ಷಣ, ಜೀವನಶೈಲಿ ಸೇರಿದಂತೆ ಸುದ್ದಿ ವಿಭಾಗದಲ್ಲೂ ಕೆಲಸದ ಅನುಭವ ಹೊಂದಿದ್ದಾರೆ. ಕಳೆದ 3.6 ವರ್ಷಗಳಿಂದ ಸುನೀಲ್‌ ರವರು ಉದ್ಯೋಗ ಮತ್ತು ಶಿಕ್ಷಣ ವಿಭಾಗದಲ್ಲಿ ತಮ್ಮ ಬರವಣಿಗೆ ಕೃಷಿಯನ್ನು ಕೇಂದ್ರೀಕರಿಸಿದ್ದು, ಈ ವಿಷಯಗಳಲ್ಲಿ ಉದ್ಯಮದ ಸೂಕ್ಷ್ಮ ವ್ಯತ್ಯಾಸಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ಬೆಳೆಸಿಕೊಂಡಿದ್ದಾರೆ. ಈ ಎರಡು ಡೊಮೇನ್‌ಗಳಲ್ಲಿನ ಬೆಳವಣಿಗೆ ಹಾಗೂ ಬದಲಾವಣೆ ಕುರಿತು ಲೇಟೆಸ್ಟ್‌ ಮಾಹಿತಿಗಳನ್ನು ರಚಿಸುವ ಮೂಲಕ ಓದುಗರಿಗೆ ಸಹಾಯ ಮಾಡುವ ಹಾಗೂ ಅವರಿಗೆ ಉಪಯುಕ್ತ ಮಾಹಿತಿ ನೀಡುವಲ್ಲಿ ಸದಾ ಉತ್ಸುಕರಾಗಿ ಕೆಲಸ ಮಾಡುತ್ತಿದ್ದಾರೆ. ಬರವಣಿಗೆ ಹೊರತಾಗಿ, ಸುನೀಲ್‌ ಬಿ ಎನ್‌ ರವರು ಹಲವು ಉತ್ತಮ ಹವ್ಯಾಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬಿಡುವಿನ ವೇಳೆ ಪ್ರಯಾಣಿಸಲು ಹಾಗೂ ಹೊಸ ಸ್ಥಳಗಳನ್ನು ಅನ್ವೇಷಿಸಲು ಇಷ್ಟಪಡುತ್ತಾರೆ. ಪ್ರಯಾಣವನ್ನು ಶಿಕ್ಷಣದ ಒಂದು ಭಾಗ ಎಂದುಕೊಂಡಿರುವ ಇವರು, ತಮ್ಮ ಈ ಹವ್ಯಾಸದಿಂದ ಅವರ ದೃಷ್ಟಿಕೋನವನ್ನು ವಿಸ್ತರಿಸಲು ಮತ್ತು ವಿಭಿನ್ನ ಸಂಸ್ಕೃತಿಗಳ ಉತ್ತಮ ತಿಳುವಳಿಕೆಯನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಭಾವಿಸಿದ್ದಾರೆ. ಅತ್ಯಾಸಕ್ತಿಯ ಓದುಗರು ಆಗಿದ್ದು ಕಥೆ, ಕಾದಂಬರಿ, ನಾಟಕಗಳ ಪುಸ್ತಕಗಳನ್ನು ಓದುವುದನ್ನು ಇಷ್ಟಪಡುತ್ತಾರೆ. ಬಿಡುವಿನ ವೇಳೆ ಚೆಸ್‌ ಆಡುವುದು ಮತ್ತು ಕೃಷಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕವು ವಿಶ್ರಾಂತಿ ಪಡೆಯುತ್ತಾರೆ. "... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌