ಬೆಳಗಾವಿ: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಚಿತ್ರವಿರುವ ಕುಕ್ಕರ್ ಗಳನ್ನು ತುಂಬಿದ್ದ ಲಾರಿಯನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಯಾಗಿದ್ದಾರೆ. ಆದರೆ ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣ ಈ ರೀತಿಯ ಆಮಿಷಗಳಿಗೆ ಆಸ್ಪದವಿಲ್ಲ. ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಲಕ್ಷ್ಮೀ ಹೆಬ್ಬಾಳ್ಕರ್ ಕೆಲ ದಿನಗಳ ಹಿಂದೆ ಗಿಫ್ಟ್ ಬಾಕ್ಸ್ ಕೂಡಾ ನೀಡಿದ್ದರು ಎಂದು ಸುದ್ದಿಯಾಗಿತ್ತು.
ಮಾಹಿತಿಗಳ ಪ್ರಕಾರ ಬೆಳಗಾವಿ ಜಿಲ್ಲಾಧಿಕಾರಿ ಮನೆ ಮುಂಭಾಗದಲ್ಲಿ ಈ ಘಟನೆ ಜರುಗಿದೆ ಎನ್ನಲಾಗಿದೆ .
ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಯಾಗಿದ್ದಾರೆ. ಆದರೆ ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣ ಈ ರೀತಿಯ ಆಮಿಷಗಳಿಗೆ ಆಸ್ಪದವಿಲ್ಲ. ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಲಕ್ಷ್ಮೀ ಹೆಬ್ಬಾಳ್ಕರ್ ಕೆಲ ದಿನಗಳ ಹಿಂದೆ ಗಿಫ್ಟ್ ಬಾಕ್ಸ್ ಕೂಡಾ ನೀಡಿದ್ದರು ಎಂದು ಸುದ್ದಿಯಾಗಿತ್ತು.
ಮಾಹಿತಿಗಳ ಪ್ರಕಾರ ಬೆಳಗಾವಿ ಜಿಲ್ಲಾಧಿಕಾರಿ ಮನೆ ಮುಂಭಾಗದಲ್ಲಿ ಈ ಘಟನೆ ಜರುಗಿದೆ ಎನ್ನಲಾಗಿದೆ .