Please enable javascript.ನಂಜನಗೂಡು: ಸಾಂಪ್ರದಾಯಿಕ ಉಡುಪಿನಲ್ಲಿ ರಸ್ತೆಗಿಳಿದ ಅಧಿಕಾರಿಗಳು, ಮತದಾನದ ಕುರಿತು ಜಾಗೃತಿ - voters awareness campaign in mysuru nanjangud by government officials with bike rally and traditional dress - Vijay Karnataka

ನಂಜನಗೂಡು: ಸಾಂಪ್ರದಾಯಿಕ ಉಡುಪಿನಲ್ಲಿ ರಸ್ತೆಗಿಳಿದ ಅಧಿಕಾರಿಗಳು, ಮತದಾನದ ಕುರಿತು ಜಾಗೃತಿ

ಹೇಮಂತ್ ಕುಮಾರ್ ಎಸ್ | Vijaya Karnataka Web 28 Mar 2023, 10:03 am
Embed

ನಂಜನಗೂಡು: ಕೆಲವೇ ದಿನಗಳಲ್ಲಿ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಲಿದೆ. ಪಾರದರ್ಶಕ ಚುನಾವಣೆಗೆ ಆಯೋಗ ಸಿದ್ಧತೆ ನಡೆಸುತ್ತಿದೆ. ಈ ನಡುವೆ ಸರ್ಕಾರಿ ಅಧಿಕಾರಿಗಳು ವಿಶಿಷ್ಟ ರೀತಿಯಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಿದ್ದಾರೆ. ಪಂಚೆ ಶರ್ಟ್ ಶಲ್ಯ ಧರಿಸಿ ಮತದಾನದ ಬಗ್ಗೆ ಅರಿವು ಮೂಡಿಸಿದ ಸರ್ಕಾರಿ ಅಧಿಕಾರಿಗಳು ಎಲ್ಲರ ಗಮನ ಸೆಳೆದರು.

ನಂಜನಗೂಡಿನಲ್ಲಿ ಕಾಲ್ನಡಿಗೆ ಮತ್ತು ಬೈಕ್ ರ್ಯಾಲಿಯ ಮೂಲಕ ಮತದಾನದ ಮಹತ್ವ ಸಾರಲು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ನಂಜನಗೂಡು ತಾಲೂಕು ಸ್ವೀಪ್ ಸಮಿತಿಯಿಂದ ವಿನೂತನ ರೀತಿಯಲ್ಲಿ ನಡೆದ ಮತದಾನ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯ್ತು. ಸೋಮವಾರ ಬೆಳಗ್ಗೆ ನಂಜನಗೂಡು ತಾಲೂಕು ಪಂಚಾಯಿತಿ ಕಾರ್ಯಾಲಯದ ಮುಂಭಾಗದಲ್ಲಿ ಮತದಾನದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯ್ತು. ಇಒ ಶ್ರೀನಿವಾಸ್ ಮತ್ತು ತಹಸೀಲ್ದಾರ್ ಶಿವಕುಮಾರ್ ಅವರಿಂದ ಮತದಾನದ ಮಹತ್ವ ಕುರಿತು ಜಾಗೃತಿ ಚಾಥಾಕ್ಕೆ ಚಾಲನೆ ನೀಡಿದರು.

ನಂಜನಗೂಡು ತಾಲೂಕು ಪಂಚಾಯಿತಿ ಕಾರ್ಯಾಲಯದಿಂದ ಎಂಜಿ ರಸ್ತೆಯ ಮೂಲಕ ಖಾಸಗಿ ಬಸ್ ನಿಲ್ದಾಣದವರೆಗೂ ಬೈಕ್ ರ್ಯಾಲಿ ಮತ್ತು ಕಾಲ್ನಡಿಗೆ ಮೂಲಕ ಸಾಗಿ ಅರಿವು ಮೂಡಿಸಲಾಯ್ತು. ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡಲು ಸಾಧ್ಯವಾಗದ ವೃದ್ಧರು ಮತ್ತು ಅಂಗವಿಕಲರಿಗೆ ಮನೆಯಲ್ಲೇ ಕುಳಿತು ಮತದಾನ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ. ನಂಜನಗೂಡು ತಾಲೂಕಿನಲ್ಲಿರುವ ಐದು ಗಿರಿಜನ ಕಾಲೋನಿಗಳ ಮತದಾರರಿಗೆ ವಿಶೇಷ ಸೌಲಭ್ಯವನ್ನು ನೀಡಲಾಗಿದೆ. ಗಿರಿಜನರು ವಾಸ ಮಾಡುವ ಸ್ಥಳದಲ್ಲಿ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ.