ಆ್ಯಪ್ನಗರ

ಬೆಳಗಾವಿ ನಗರದಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರು ವ್ಯಕ್ತಿಗಳ ಬಂಧನ

ಬೆಳಗಾವಿ ನಗರದಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸಿಐಡಿ ಪೊಲೀಸರು ಬಂಧಿಸಿ, ಅವರಿಂದ 1130 ಕೇಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ...

Vijaya Karnataka 30 Nov 2020, 5:00 am
ಬೆಳಗಾವಿ: ನಗರದಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸಿಐಡಿ ಪೊಲೀಸರು ಬಂಧಿಸಿ, ಅವರಿಂದ 1.130 ಕೇಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
Vijaya Karnataka Web 29LBS3_53
ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದ ಹತ್ತಿರ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ಸಿಐಡಿ ಪೊಲೀಸರು ಬಂಧಿಸಿರುವುದು.


ತಾಲೂಕಿನ ಪೀರನವಾಡಿ ಅನಸಾರ್‌ ಗಲ್ಲಿಯ ಸೈಫ್‌ಅಲಿ ಮಾಡಿವಾಲೆ ಮತ್ತು ಅಕೀಬ್‌ ಜಾವೀದ್‌ ಮನಿಯಾರ್‌(27) ಬಂಧಿತರು. ಸಿಐಡಿ ತಂಡ ಎರಡು ಕಡೆಗಳಲ್ಲಿನಡೆಸಿದ ದಾಳಿಯಲ್ಲಿಇವರು ಸಿಕ್ಕಿಬಿದ್ದಿದ್ದಾರೆ.

ನಗರದ ಬೋಗಾರವೇಸ್‌ದ ಧರ್ಮವೀರ ಸಂಭಾಜಿ ವೃತ್ತದ ಬಳಿ ಸೈಫ್‌ಅಲಿ ಮಾಡಿವಾಲೆ ಗಾಂಜಾ ಮಾರುತ್ತಿದ್ದಾಗ ಸಿಐಡಿ ಪೊಲೀಸರು ದಾಳಿ ನಡೆಸಿ 520 ಗ್ರಾಂ ಗಾಂಜಾ, 10,400 ರೂ. ಮೌಲ್ಯದ ದ್ವಿಚಕ್ರ ವಾಹನ, 720 ರೂ. ವಶಪಡಿಸಿಕೊಂಡಿದ್ದಾರೆ.

ಮತ್ತೊಬ್ಬ ಆರೋಪಿ ಜಾವೀದ್‌ ಮನಿಯಾರ್‌ ನಗರದ ಅಯೋಧ್ಯಾ ನಗರದಲ್ಲಿಗಾಂಜಾ ಮಾರಾಟ ಮಾಡುತ್ತಿರುವ ದಾಳಿ ನಡೆಸಿ 610 ಗ್ರಾಂ ಗಾಂಜಾ, 12,200 ರೂ. ಮೌಲ್ಯದ ದ್ವಿಚಕ್ರ ವಾಹನ, 530 ರೂ. ನಗದು ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿಸಿಐಡಿ ಘಟಕದ ಇನ್ಸ್‌ಪೆಕ್ಟರ್‌ ಎಸ್‌.ಕೆ. ಕುರಗೋಡಿ, ಸಬ್‌ ಇನ್ಸ್‌ಪೆಕ್ಟರ್‌ ಲಕ್ಷ್ಮಣ ಹುಂಡರದ, ಜಗದೀಶ್‌ ಬಾಗವನವರ, ಜಿ.ಆರ್‌. ಶಿರಸಂಗಿ, ಚಿದಂಬರ ಚಟ್ಟರಕ್ಕಿ ಪಾಲ್ಗೊಂಡಿದ್ದರು. ಈ ಕುರಿತು ಸಿಇಎನ್‌ ಪೊಲೀಸ್‌ ಠಾಣೆಯಲ್ಲಿಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ