ಆ್ಯಪ್ನಗರ

ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆಗೆ ಮುಂದಾದರೆ ಉಗ್ರ ಪ್ರತಿಭಟನೆ: ಸತೀಶ ಜಾರಕಿಹೊಳಿ ಎಚ್ಚರಿಕೆ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು, ಬಡವರ ಪರವಾಗಿ ಕೆಲಸ ಮಾಡಿದವರು. ಹಿಂದುಳಿದ ವರ್ಗದ ಜನರಿಗಾಗಿಯೇ ತಮ್ಮ ಜೀವನ ಮೂಡಿಪಾಗಿಟ್ಟವರು, ಆ ಉದ್ದೇಶದಿಂದಲೇ ಇಂದಿರಾ ಕ್ಯಾಂಟಿನ್ ಎಂದು ಹೆಸರನ್ನು ಇಡಲಾಗಿದೆ. ಬಿಜೆಪಿ ನಾಯಕರ ಈ ನಿರ್ಧಾರ ಸರಿಯಲ್ಲ. ತಪ್ಪು ತೀರ್ಮಾನದಿಂದ ಹಿಂದೆ ಸರಿಯಬೇಕು ಎಂದು ಶಾಸಕ ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದರು.

Vijaya Karnataka Web 9 Aug 2021, 3:03 pm
ಬೆಳಗಾವಿ: ರಾಜ್ಯ ಸರ್ಕಾರದ ಬಿಜೆಪಿ ನಾಯಕರು ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ವಿಚಾರವಾಗಿ ನೀಡಿರುವ ಹೇಳಿಕೆ ಕುರಿತಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಒಂದು ವೇಳೆ ಬದಲಾವಣೆ ಮಾಡಲು ಪ್ರಯತ್ನಿಸಿದರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇಲ್ಲಿನ ತಮ್ಮ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು, ಬಡವರ ಪರವಾಗಿ ಕೆಲಸ ಮಾಡಿದವರು. ಹಿಂದುಳಿದ ವರ್ಗದ ಜನರಿಗಾಗಿಯೇ ತಮ್ಮ ಜೀವನ ಮೂಡಿಪಾಗಿಟ್ಟವರು, ಆ ಉದ್ದೇಶದಿಂದಲೇ ಇಂದಿರಾ ಕ್ಯಾಂಟಿನ್ ಎಂದು ಹೆಸರನ್ನು ಇಡಲಾಗಿದೆ. ಬಿಜೆಪಿ ನಾಯಕರ ಈ ನಿರ್ಧಾರ ಸರಿಯಲ್ಲ. ತಪ್ಪು ತೀರ್ಮಾನದಿಂದ ಹಿಂದೆ ಸರಿಯಬೇಕು ಎಂದರು. ಅಲ್ಲದೇ ಈಗಾಗಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ನಾಯಕರು ಎಲ್ಲರೂ ಮಾತನಾಡಿದ್ದೇವೆ. ವಿರೋಧದ ನಡುವೆಯೂ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆಗೆ ಮುಂದಾದರೆ ಕಾಂಗ್ರೆಸ್ ಪಕ್ಷದಿಂದ ಉಗ್ರ ಪ್ರತಿಭಟನೆ ಮಾಡಲಿದ್ದೇವೆ ಎನ್ನುವ ಮೂಲಕ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದೇ ವೇಳೆ ಬಿಜೆಪಿ ಕೇಂದ್ರ ಸರ್ಕಾರ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಅನುದಾನವನ್ನು ಪ್ರತಿ ವರ್ಷ ಹಂತ ಹಂತವಾಗಿ ಹೆಚ್ಚಿಸಬೇಕು. ಕ್ರೀಡಾಪಟುಗಳಿಗೆ ನೀಡುವ ಪ್ರೋತ್ಸಾಹ ಧನವನ್ನು ಸರ್ಕಾರ ಗಣನೀಯವಾಗಿ ಕಡಿತಗೊಳಿಸುವುದು ಸರಿಯಲ್ಲ. ಹೀಗೆ ಮಾಡುವುದರಿಂದ ಕ್ರೀಡೆಯ ಬಗ್ಗೆ ನಿರ್ಲಕ್ಷ್ಯ ತೋರಿದಂತಾಗುತ್ತದೆ ಎಂದು ಬೇಸರ ವ್ಯಕ್ತ ಪಡಿಸಿದರು. ಜಪಾನ್‌ನಲ್ಲಿ ನಡೆದ ಟೋಕಿಯೋ ಒಲಂಪಿಕ್ ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದು ಕೊಟ್ಟ ನೀರಜ್ ಚೋಪ್ರಾ ಅವರ ಹೆಸರು ಪ್ರಸ್ತಾಪಿಸಿ, ಜಾವೆಲಿನ್ ನಲ್ಲಿ ನೀರಜ್ ಚೋಪ್ರಾ ಅವರು ಇತಿಹಾಸ ಸೃಷ್ಟಿ ಮಾಡಿದ್ದಾರೆ. ಅವರ ಸಾಧನೆ ಇಡೀ ದೇಶಕ್ಕೆ ಗೌರವ ತರುವಂತಾಗಿದೆ. ದೇಶ ಹಾಗೂ ರಾಜ್ಯದಲ್ಲಿ ಇಂತಹ ಕ್ರೀಡಾ ಪಟುಗಳು ಅನೇಕರಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಅವರೇಲ್ಲರಿಗೂ ಪ್ರೋತ್ಸಾಹ ಮಾಡಬೇಕು ಎಂದರು.
ಲಾಕ್‌ಡೌನ್‌ ತೆರವು ಬೆನ್ನಲ್ಲೇ ಮೈಸೂರು ಏರ್‌ಪೋರ್ಟ್‌ ಬಳಸುವವರ ಸಂಖ್ಯೆಯಲ್ಲಿ ಗಣನೀಯ ಏರಿಕೆ
ಕೋವಿಡ್ ನಿಯಂತ್ರಣದಲ್ಲಿ ವಿಫಲ : ಕೋವಿಡ್ ನಿಯಂತ್ರಣದಲ್ಲಿ ಸರ್ಕಾರ ಮೊದಲ ಹಾಗೂ ಎರಡನೇ ಅಲೆಯಲ್ಲಿ ವಿಫಲವಾಗಿದೆ. ಈಗ ಮೂರನೇ ಅಲೆ ಎದುರಾಗುವ ಸಾಧ್ಯತೆ ಇದೆ. ಆದ ಕಾರಣ ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಕೈ ಮೀರಿದ ಬಳಿಕ ನಿಯಂತ್ರಣಕ್ಕೆ ಪ್ರಯತ್ನಿಸುವುದು ಸರಿಯಾದ ಕ್ರಮವಲ್ಲ. ಈಗಾಗಲೇ ಅನೇಕ ಕಡೆಗಳಿಂದ ವ್ಯಾಕ್ಸಿನ್ ವಿಳಂಬವಾಗುತ್ತಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸರ್ಕಾರ ಪೂರೈಕೆ ತಕ್ಕಂತೆ ವ್ಯಾಕ್ಸಿನ್ ಪೂರೈಕೆ ಮಾಡಬೇಕು. ಇದರಿಂದ ಮೂರನೇ ಅಲೆ ತಡೆಯಲು ಸಾಧ್ಯ ಎಂದು ಸಲಹೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ