ಆ್ಯಪ್ನಗರ

ಪಾಕ್ ನಲ್ಲಿ ಕಿಡ್ನಿ ಕಸಿ ಮಾಡಿಸಿಕೊಂಡು ಸೋಂಕಿಗೊಳಗಾಗಿದ್ದ ಒಮನ್ ಮಹಿಳೆಗೆ ಬೆಂಗಳೂರಿನಲ್ಲಿ ಪುನರ್ಜನ್ಮ!

ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ಕಿಡ್ನಿ ಸಮಸ್ಯೆಯಿಂದಾಗಿ ದಾಖಲಾಗಿದ್ದ ಒಮನ್ ಮೂಲದ ರೇಷ್ಮಾ ಎಂಬ ಮಹಿಳೆಗೆ ಯಶಸ್ವಿ ರೋಬೋ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಈ ಹಿಂದೆ, ಕಿಡ್ನಿ ವೈಫಲ್ಯದಿಂದಾಗಿ ಪಾಕಿಸ್ತಾನಕ್ಕೆ ತೆರಳಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದರು. ಆದರೆ, ಅವರ ರಕ್ತಕ್ಕೆ ಸರಿಹೊಂದದ ಕಿಡ್ನಿ ಹಾಕಿದ್ದರಿಂದ ಹಾಗೂ ತೆಳುವಾದ ಸ್ಟಂಟ್ ಅಳವಡಿಸಿದ್ದರಿಂದ ಅವರ ಕಿಡ್ನಿಗಳಿಗೆ ಸೋಂಕು ಹರಡಲಾರಂಭಿಸಿತ್ತು. ಪಾಕಿಸ್ತಾನದಲ್ಲಿ ಆಧುನಿಕ ಚಿಕಿತ್ಸೆ ಲಭ್ಯವಿಲ್ಲದ ಕಾರಣ ಅವರು ಬೆಂಗಳೂರಿಗೆ ಬಂದು ಚಿಕಿತ್ಸೆ ಪಡೆದಿದ್ದು ಈಗ ಆರೋಗ್ಯವಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

Edited byಚೇತನ್ ಓ.ಆರ್. | Vijaya Karnataka Web 10 Aug 2023, 3:17 pm

ಹೈಲೈಟ್ಸ್‌:

  • ಬೆಂಗಳೂರು ಫೋರ್ಟಿಸ್ ಆಸ್ಪತ್ರೆಯಲ್ಲಿ ಕಿಡ್ನಿ ಸಮಸ್ಯೆಯಿಂದ ನರಳುತ್ತಿದ್ದ ಒಮನ್ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ.
  • ಪಾಕಿಸ್ತಾನದಲ್ಲಿ ಕಿಡ್ನಿ ಕಸಿ ಮಾಡಿಸಿಕೊಂಡು ಪುನಃ ಸೋಂಕಿಗೆ ತುತ್ತಾಗಿ ಬೆಂಗಳೂರಿಗೆ ಆಗಮಿಸಿದ್ದ ರೇಷ್ಮಾ.
  • ರೋಬೋಟಿಕ್ ಸರ್ಜರಿ ತಂತ್ರಗಾರಿಕೆಯಿಂದ ರೇಷ್ಮಾಗೆ ಯಶಸ್ವಿ ಶಸ್ತ್ರಚಿಕಿತ್ಸೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Bengaluru Bannerghatta Fortis hospital doctors perform robot assisted surgery to save the life of Woman from Oman with kidney infection from her previous treatment in Pakistan
ಕಿಡ್ನಿ ಸೋಂಕಿಗೆ ತುತ್ತಾಗಿ ಈಗ ಗುಣಮುಖರಾಗಿರುವ ಒಮನ್ ಮೂಲದ ರೇಷ್ಮಾ ಹಾಗೂ ಅವರ ಸಂಬಂಧಿ ಜೊತೆಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರು.
ಬೆಂಗಳೂರು: ದೇಹಕ್ಕೆ ಹೊಂದಿಕೆಯಾಗದ ಮೂತ್ರಪಿಂಡದ ಕಸಿ ಮಾಡಿಸಿಕೊಂಡು ನಂತರ ಮೂತ್ರನಾಳ ಸೋಂಕಿಗೆ ಒಳಗಾಗಿದ್ದ 51 ವರ್ಷದ ಒಮಾನಿ ಮಹಿಳೆಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರು ರೋಬೋಟ್‌ ಸಹಾಯದಿಂದ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಮೂತ್ರಶಾಸ್ತ್ರ ತಜ್ಞ, ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ ಹಿರಿಯ ನಿರ್ದೇಶಕರಾದ ಡಾ ಮೋಹನ್ ಕೇಶವಮೂರ್ತಿ ಅವರ ತಂಡ ಈ ಶಸ್ತ್ರಚಿಕಿತ್ಸೆ ನಡೆಸಿದೆ.
ಈ ಕುರಿತು ಮಾತನಾಡಿದ ಡಾ. ಮೋಹನ್‌ ಕೇಶವಮೂರ್ತಿ, 51 ವರ್ಷದ ರೇಷ್ಮ ಎಂಬ ಮಹಿಳೆಯು ಒಂದು ವರ್ಷದ ಹಿಂದೆ ಕೆಲ ಕಾರಣದಿಂದ ಮೂತ್ರಪಿಂಡ ಕಳೆದುಕೊಂಡು, ಪಾಕಿಸ್ತಾನದಲ್ಲಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿದ್ದರು. ಆದರೆ, ಇದು ಇವರ ದೇಹ ಹಾಗೂ ರಕ್ತಕ್ಕೆ ಹೊಂದಿಕೆಯಾಗಿರಲಿಲ್ಲ. ಮೂತ್ರನಾಳ ಕಸಿ ಮಾಡುವ ವೇಳೆ ಮೂತ್ರನಾಳದ ಸ್ಟೆಂಟ್ ಅನ್ನು (ಡಬಲ್ ಜೆ ಸ್ಟೆಂಟ್) ಅಳವಡಿಸಲಾಗಿತ್ತು. ಜೊತೆಗೆ ಮೂತ್ರವಿಸರ್ಜನೆಗೆಂದು ಪ್ಲಾಸ್ಟಿಕ್‌ ಟ್ಯೂಬ್‌ನನ್ನು ಅಳವಡಿಸಲಾಗಿತ್ತು.


ಇದು ತೀರ ತೆಳುವಾದ್ದರಿಂದ ಕೇವಲ ಒಂದು ವರ್ಷದಲ್ಲಿಯೇ ಆ ಡಬಲ್‌ ಜೆ ಸ್ಟಂಟ್‌ ಮುರಿದಿತ್ತು. ಮೊದಲೇ ಹೊಂದಿಕೆಯಾಗದ ಮೂತ್ರಪಿಂಡವಾದ್ದರಿಂದ ಈ ಸ್ಟಂಟ್‌ ಮುರಿದು, ರೇಷ್ಮ ಅವರಿಗೆ ಮೂತ್ರಕೋಶದ ಸೋಂಕು ಹರಡಲು ಪ್ರಾರಂಭಗೊಂಡಿತ್ತು. ಮುರಿದು ಹೋದ ಸ್ಟಂಟ್‌ನನ್ನು ತೆಗೆದು ಹಾಕುವುದು ಅನಿವಾರ್ಯವಾಗಿತ್ತು. ಆದರೆ, ಇದನ್ನು ತೆಗೆದು ಹಾಕಲು ಪಾಕಿಸ್ತಾನದಲ್ಲಿ ಯಾವ ಆಸ್ಪತ್ರೆಯಲ್ಲೂ ಅತ್ಯಾಧುನಿಕ ಆಸ್ಪತ್ರೆ ಸಿಗದೇ ರೋಗಿಯು ತೀವ್ರ ಸಮಸ್ಯೆ ಎದುರಿಸಿದ್ದರು. ಸಾಕಷ್ಟು ಶಸ್ತ್ರಚಿಕಿತ್ಸೆಗೆ ಒಳಗಾದರೂ ಸ್ಟಂಟ್‌ ತೆರವು ಅಸಾಧ್ಯವಾಗಿತ್ತು.

ಭಾರತಕ್ಕೆ ಆಗಮಿಸಿದ ಅವರು, ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಕೂಡಲೇ ಅವರಿಗೆ ನೀಡಬೇಕಾದ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ ಅವರನ್ನು ಶಸ್ತ್ರಚಿಕಿತ್ಸೆಗೆ ಅಣಿಗೊಳಿಸಿದ ಫೋರ್ಟಿಸ್ ಆಸ್ಪತ್ರೆಯ ವೈದ್ಯರು, ಆಸ್ಪತ್ರೆಯಲ್ಲಿರುವ ರೋಬೋಟಿಕ್‌ ತಂತ್ರಜ್ಞಾನವನ್ನು ಬಳಸಿಕೊಂಡು, ಮೂರುಗಂಟೆಗಳ ಸುದೀರ್ಘ ಶಸ್ತ್ರಚಿಕಿತ್ಸೆ ನಡೆಸಿ ಮುರಿದು ಹೋಗಿದ್ದ ಸ್ಟಂಟ್‌ನನ್ನು ಹೊರತೆಗೆದಿದ್ದಾರೆ. ಜೊತೆಗೆ, ಕಸಿ ಮಾಡಲಾದ ಮೂತ್ರಪಿಂಡದಿಂದಲೇ ನೇರವಾಗಿ ಮೂತ್ರ ವಿಸರ್ಜನೆಗೆ ತೊಂದರೆಯಾದಂತೆ ಅನುವು ಮಾಡಿಕೊಟ್ಟಿದ್ದಾರೆ.

ಒಂದೇ ಬಾರಿ ಎಂಟು ಪ್ಯಾರಸಿಟಮೊಲ್ ಮಾತ್ರೆ ನುಂಗಿದ ವ್ಯಕ್ತಿ! ಮುಂದೇನಾಯ್ತು..?
ಆದರೆ, ಇದು ಸುಲಭದ ಶಸ್ತ್ರಚಿಕಿತ್ಸೆಯಾಗಿರಲಿಲ್ಲ. ಅತ್ಯಂತ ಕ್ಲಿಷ್ಟಕರವಾದ್ದದ್ದಾಗಿತ್ತು. ಹಾಗಾಗಿ, ಇದಕ್ಕೆ ರೋಬೋಟಿಕ್ ಶಸ್ತ್ರಚಿಕಿತ್ಸೆಯ ವಿಧಾನವನ್ನು ಅಳವಡಿಸಿಕೊಳ್ಳಲಾಗಿತ್ತು. ಈ ಶಸ್ತ್ರಚಿಕಿತ್ಸೆಯ ಬಳಿಕ ರೋಗಿಯು ಸಂಪೂರ್ಣ ಗುಣಮುಖರಾಗಿದ್ದು, ಮೂತ್ರಕೋಶ ಸೋಂಕಿನಿಂದಲೂ ಮುಕ್ತರಾಗಿ, ಆರೋಗ್ಯದಿಂದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಫೋರ್ಟಿಸ್ ಆಸ್ಪತ್ರೆ ಬಿಸಿನೆಸ್ ಹೆಡ್ ಅಕ್ಷಯ್ ಒಲೇಟಿ ಮಾತನಾಡಿ, " ಫೋರ್ಟಿಸ್ ಆಸ್ಪತ್ರೆ ಬನ್ನೇರುಘಟ್ಟವು ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ ಎಂಬುದಕ್ಕೆ ಈ ಪ್ರಕರಣವೇ ನಿದರ್ಶನ . ಪಾಕಿಸ್ತಾನದಲ್ಲಿ ಸೂಕ್ತ ಚಿಕಿತ್ಸೆ ಸಿಗದ ಮಹಿಳೆಯು ಭಾರತದಲ್ಲಿ ಅದರಲ್ಲೂ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾಗಿ, ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ, ಇದು ನಮ್ಮ ಆಸ್ಪತ್ರೆಗೆ ಹೆಮ್ಮೆಯ ವಿಚಾರ ಎಂದರು.

ಹೀಗೆ, ದೂರದ ದೇಶಗಳಿಂದ ಬಂದಂಥ ಅನೇಕ ರೋಗಿಗಳು, ಬೆಂಗಳೂರಿನಲ್ಲಿ ಯಶಸ್ವಿ ಚಿಕಿತ್ಸೆ ಪಡೆದು ಗುಣಮುಖರಾಗಿ ಹೋದ ಹಲವಾರು ಉದಾಹರಣೆಗಳಿವೆ. ಹಾಗಾಗಿ, ಬೆಂಗಳೂರಿನಲ್ಲಿರುವ ಚಿಕಿತ್ಸೆಗೆ ಭಾರತ ಮಾತ್ರವಲ್ಲದೆ ನೆರೆಯ ರಾಷ್ಟ್ರಗಳಲ್ಲಿಯೂ ಮಾನ್ಯತೆಯಿದೆ.
ಲೇಖಕರ ಬಗ್ಗೆ
ಚೇತನ್ ಓ.ಆರ್.
ಪ್ರಸ್ತುತ, ವಿಜಯ ಕರ್ನಾಟಕ ವೆಬ್ ನಲ್ಲಿ ಪತ್ರಕರ್ತನಾಗಿ 2022ರಿಂದ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2007ರಲ್ಲಿ ತುಮಕೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ 5ನೇ ರ‍್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಮೈಸೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ. ಜಿಲ್ಲಾ ಸುದ್ದಿಗಳಿಂದ ಹಿಡಿದು ಕ್ರೀಡೆ, ದೇಶ- ವಿದೇಶ, ಸಿನಿಮಾ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಯಮ ವಿಷಯಗಳ ಬಗ್ಗೆ ಬರೆಯುವ ಇವರಿಗೆ, ನಾನಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಈವರೆಗೆ 16 ವರ್ಷ ಕೆಲಸ ಮಾಡಿದ ಅನುಭವವಿದೆ. ಫೋಟೋಗ್ರಫಿ ಇವರ ಅಚ್ಚುಮೆಚ್ಚಿನ ಹವ್ಯಾಸ. ಸಿನಿಮಾ, ಸಾಕ್ಷ್ಯಚಿತ್ರ, ಸಾಹಿತ್ಯ, ವಿಡಿಯೋ ಸಂಕಲನ, ಪತ್ರಿಕೆ ಪುಟ ವಿನ್ಯಾಸ, ಹಾಡುಗಾರಿಕೆ, ಚಿತ್ರಕಲೆ, ಅನಿಮೇಶನ್, ಸಂಗೀತದಲ್ಲಿಯೂ ಆಸಕ್ತಿಯಿದೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ