Please enable javascript.Bus,ಬಸ್‌ ಸಂಚಾರ ಇಂದಿನಿಂದ ಪುನರಾರಂಭ - buses will start operating from today - Vijay Karnataka

ಬಸ್‌ ಸಂಚಾರ ಇಂದಿನಿಂದ ಪುನರಾರಂಭ

Vijaya Karnataka Web 22 Jul 2020, 6:27 am
Subscribe

ಲಾಕ್‌ಡೌನ್‌ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳು ಎಂದಿನಂತೆ ಕಾರ್ಯಾಚರಣೆಗೊಳ್ಳಲಿವೆ. ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ 2500 ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.

ಬಸ್
ಬೆಂಗಳೂರು: ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ಇತರೆಡೆ ಕೊರೊನಾ ಸೋಂಕು ನಿಯಂತ್ರಣಕ್ಕೆ ಹೇರಿದ್ದ ಲಾಕ್‌ಡೌನ್‌ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳು ಎಂದಿನಂತೆ ಕಾರ್ಯಾಚರಣೆಗೊಳ್ಳಲಿವೆ.

ಕೆಎಸ್‌ಆರ್‌ಟಿಸಿ ಬೆಂಗಳೂರು ನಗರ, ಗ್ರಾಮಾಂತರ ಮತ್ತು ಮಂಗಳೂರು ಹೊರತುಪಡಿಸಿ ಉಳಿದೆಡೆ ಒಟ್ಟು 1000 ಬಸ್‌ಗಳನ್ನು ಕಾರ್ಯಾಚರಣೆಗೊಳಿಸುತ್ತಿತ್ತು. ಲಾಕ್‌ಡೌನ್‌ ತೆರವುಗೊಂಡಿರುವುದರಿಂದ ಬುಧವಾರದಿಂದ ಬಸ್‌ಗಳು ರಸ್ತೆಗಿಳಿಯಲಿವೆ. ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ 2500 ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.
ಲಾಕ್‌ಡೌನ್‌ ಇದೆ ಎನ್ನುವುದನ್ನೇ ಮರೆತ ಜನ ನಿಯಂತ್ರಣಕ್ಕೆ ಬಾರದ ಓಡಾಟ
1500 ಬಸ್‌ಗಳ ಕಾರ್ಯಾಚರಣೆ
ಬಿಎಂಟಿಸಿ 1500 ಬಸ್‌ಗಳನ್ನು ಓಡಿಸಲು ತೀರ್ಮಾನಿಸಿದೆ. ಪ್ರಯಾಣಿಕರ ದಟ್ಟಣೆ ಆಧರಿಸಿ, ಹೆಚ್ಚಿನ ಬಸ್‌ ಸೇವೆ ಕಲ್ಪಿಸಲು ಉದ್ದೇಶಿಸಲಾಗಿದೆ. ನಗರದಲ್ಲಿ ಕಂಟೈನ್ಮೆಂಟ್‌ ವಲಯಗಳನ್ನು ಹೊರತುಪಡಿಸಿ, ಉಳಿದೆಡೆ ಬೆಳಗ್ಗೆ 6ರಿಂದ ರಾತ್ರಿ 8ಗಂಟೆವರೆಗೆ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ. ಮಾಸ್ಕ್‌ ಧರಿಸಿದ್ದವರಿಗಷ್ಟೇ ಬಸ್‌ಗಳಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ