ಬೀದರ್: ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಹೇಳುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಾಕತ್ತಿದ್ದರೆ ಚರ್ಚೆಗೆ ಬರಲಿ ಎಂದು ಮಾಜಿ ಸಚಿವ ಎಚ್. ಎಂ. ರೇವಣ್ಣ ಸವಾಲು ಹಾಕಿದರು.ಸೋಮವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿಜೆಪಿಗರು ಬರೀ ಭಾವನಾತ್ಮಕವಾಗಿ ಮಾತನಾಡಿ ಜನತೆಗೆ ಮರುಳು ಮಾಡಲು ಹೊರಟಿದ್ದಾರೆ. ಕಾಗಿನೆಲೆ ಪೀಠ ಸ್ಥಾಪನೆ ಮಾಡಿ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರ ಮಾಡಿದ್ದು, ಸಿದ್ಧರಾಮಯ್ಯನವರು. ನಂತರ ಕೋಟಿ ಕೋಟಿ ಅನುದಾನ ನೀಡಿದ್ದು ಸಿದ್ಧರಾಮಯ್ಯನವರು. ಆದರೆ, ಬಿಜೆಪಿಗರು ಇದನ್ನು ನಾವು ಮಾಡಿದ್ದೇವೆ ಎಂದು ಹೇಳಲು ಇವರಿಗೆ ನಾಚಿಕೆಯಾಗಬೇಕು ಎಂದು ಆಕ್ರೋಶ ಹೊರ ಹಾಕಿದರು.
ಎಸ್ಸಿ, ಎಸ್ಟಿ ಜನರಿಗೆ ಗುತ್ತಿಗೆಯಲ್ಲಿ 50 ಲಕ್ಷದವರೆಗೆ ಮೀಸಲಾತಿ ನೀಡಿದ್ದು ಕಾಂಗ್ರೆಸ್ ಸರಕಾರ. ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಡುವ ಮಂಡಲ ಸಮಿತಿ ವಿರುದ್ಧ ಕಮಂಡಲ ಯಾತ್ರೆ ಮಾಡಿದ್ದು ಬಿಜೆಪಿ ಸರಕಾರ. ರಾಹುಲ್ ಗಾಂಧಿಯವರ ಭಾರತ ಜೋಡೋ ಯಾತ್ರೆ ಬಿಜೆಪಿಗರ ನಿದ್ದೆಗೆಡಿಸಿದೆ. ಹೀಗಾಗಿ, ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಹತಾಶೆಯ ಮನೋಭಾವದಿಂದ ಈ ರೀತಿ ಬೂಟಾಟಿಕೆಯ ಮಾತನಾಡುತ್ತಿದ್ದಾರೆ ಎಂದು ರೇವಣ್ಣ ಹರಿಹಾಯ್ದರು.
ಬಿಜೆಪಿ ಪಕ್ಷ ಸ್ಥಾಪನೆಯಾದಾಗಿನಿಂದ ಹಿಂದುಳಿದ ವರ್ಗಗಳಿಗೆ ಮೋಸ ಮಾಡುತ್ತಲೇ ಬಂದಿದೆ. ಆದರೆ, ಚುನಾವಣೆ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಒಬಿಸಿಗಳು ಬಿಜೆಪಿಗರಿಗೆ ನೆನಪಾಗಿರುವುದು ಹಾಸ್ಯಾಸ್ಪದ. ರಾಜ್ಯದ ಜನತೆ ಎಲ್ಲವನ್ನೂ ನೋಡುತ್ತಿದ್ದಾರೆ. ನಿರಂತರವಾಗಿ ಹಿಂದುಳಿದ ವರ್ಗಗಳಿಗೆ ತುಳಿಯುತ್ತಲೇ ಬಂದಿರುವ ಬಿಜೆಪಿ ಈಗ ಓಬಿಸಿ ಸಮಾವೇಶ ಮಾಡುತ್ತಿರುವುದು ಯಾವ ಪುರುಷಾರ್ಥಕ್ಕಾಗಿ ಎಂದು ಲೇವಡಿ ಮಾಡಿದರು.
ಚುನಾವಣೆ ಸಂದರ್ಭದಲ್ಲಿ ಒಬಿಸಿ ಸಮಾವೇಶ ಮಾಡುತ್ತಿರುವ ಬಿಜೆಪಿ ಮುಖಂಡರ ಬಣ್ಣ ಬಯಲಾಗಲಿದೆ. ಇದೊಂದು ಚುನಾವಣಾ ಗಿಮಿಕ್ ಎಂದರಲ್ಲದೆ, ಹಾವಾಡಿಗನಂತೆ ಹಾವು ತೋರಿಸುತ್ತೇನೆಂದು ಕಾಯಿಸುವ ಬಿಜೆಪಿಗರು ಸುಳ್ಳು ಭರವಸೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಇದೊಂದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿಸಿದಂತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ಕುರಿ ಸತ್ತರೆ ಪರಿಹಾರ ನೀಡುವ ಯೋಜನೆ ಜಾರಿಗೆ ತಂದಿದ್ದರು. ಆದರೆ, ಬಿಜೆಪಿ ಸರಕಾರ ಅದನ್ನು ರದ್ದುಗೊಳಿಸಿತ್ತು. ಮತ್ತೆ ಪಂಡಿತ್ ಚಿದ್ರಿಯವರು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದಾಗ ಹೋರಾಟ ಮುಖೇನ ಮರಳಿ ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದರು ಎಂದರು.
'ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಳ ಮಾಡಿದ್ದೇವೆ ಎಂದು ಹೇಳುವ ಬಿಜೆಪಿ ಸರಕಾರ ಚುನಾವಣೆ ಸಂದರ್ಭದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಇದೆಲ್ಲಾ ಜಾರಿಗೆ ತರಲು ಸಾಧ್ಯನಾ? ಎಂದು ಪ್ರಶ್ನೆ ಮಾಡಿದರಲ್ಲದೆ ಹಿಂದುಳಿದವರಿಗೆ ಈ ರೀತಿಯ ಅನ್ಯಾಯ ಮಾಡುವುದನ್ನು ಬಿಜೆಪಿ ಬಿಡಬೇಕು' ಎಂದು ಮಾಜಿ ಸಚಿವ ಎಚ್. ಎಂ. ರೇವಣ್ಣ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪಂಡಿತರಾವ ಚಿದ್ರಿ, ಗೀತಾ ಚಿದ್ರಿ, ಮಾಳಪ್ಪ ಅಡಸಾರೆ, ಎಂ. ಎಸ್. ಕಟಗಿ, ಮಲ್ಲಿಕಾರ್ಜುನ ಬಿರಾದಾರ, ಬಸವರಾಜ ಹೆಡೆ, ಪಿ. ಎಸ್. ಇಟಕಂಪಳ್ಳಿ ಸೇರಿದಂತೆ ಇತರರಿದ್ದರು.
ಎಸ್ಸಿ, ಎಸ್ಟಿ ಜನರಿಗೆ ಗುತ್ತಿಗೆಯಲ್ಲಿ 50 ಲಕ್ಷದವರೆಗೆ ಮೀಸಲಾತಿ ನೀಡಿದ್ದು ಕಾಂಗ್ರೆಸ್ ಸರಕಾರ. ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಡುವ ಮಂಡಲ ಸಮಿತಿ ವಿರುದ್ಧ ಕಮಂಡಲ ಯಾತ್ರೆ ಮಾಡಿದ್ದು ಬಿಜೆಪಿ ಸರಕಾರ. ರಾಹುಲ್ ಗಾಂಧಿಯವರ ಭಾರತ ಜೋಡೋ ಯಾತ್ರೆ ಬಿಜೆಪಿಗರ ನಿದ್ದೆಗೆಡಿಸಿದೆ. ಹೀಗಾಗಿ, ಮಾನಸಿಕ ಸ್ಥಿಮಿತತೆ ಕಳೆದುಕೊಂಡು ಹತಾಶೆಯ ಮನೋಭಾವದಿಂದ ಈ ರೀತಿ ಬೂಟಾಟಿಕೆಯ ಮಾತನಾಡುತ್ತಿದ್ದಾರೆ ಎಂದು ರೇವಣ್ಣ ಹರಿಹಾಯ್ದರು.
ಬಿಜೆಪಿ ಪಕ್ಷ ಸ್ಥಾಪನೆಯಾದಾಗಿನಿಂದ ಹಿಂದುಳಿದ ವರ್ಗಗಳಿಗೆ ಮೋಸ ಮಾಡುತ್ತಲೇ ಬಂದಿದೆ. ಆದರೆ, ಚುನಾವಣೆ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಒಬಿಸಿಗಳು ಬಿಜೆಪಿಗರಿಗೆ ನೆನಪಾಗಿರುವುದು ಹಾಸ್ಯಾಸ್ಪದ. ರಾಜ್ಯದ ಜನತೆ ಎಲ್ಲವನ್ನೂ ನೋಡುತ್ತಿದ್ದಾರೆ. ನಿರಂತರವಾಗಿ ಹಿಂದುಳಿದ ವರ್ಗಗಳಿಗೆ ತುಳಿಯುತ್ತಲೇ ಬಂದಿರುವ ಬಿಜೆಪಿ ಈಗ ಓಬಿಸಿ ಸಮಾವೇಶ ಮಾಡುತ್ತಿರುವುದು ಯಾವ ಪುರುಷಾರ್ಥಕ್ಕಾಗಿ ಎಂದು ಲೇವಡಿ ಮಾಡಿದರು.
ಚುನಾವಣೆ ಸಂದರ್ಭದಲ್ಲಿ ಒಬಿಸಿ ಸಮಾವೇಶ ಮಾಡುತ್ತಿರುವ ಬಿಜೆಪಿ ಮುಖಂಡರ ಬಣ್ಣ ಬಯಲಾಗಲಿದೆ. ಇದೊಂದು ಚುನಾವಣಾ ಗಿಮಿಕ್ ಎಂದರಲ್ಲದೆ, ಹಾವಾಡಿಗನಂತೆ ಹಾವು ತೋರಿಸುತ್ತೇನೆಂದು ಕಾಯಿಸುವ ಬಿಜೆಪಿಗರು ಸುಳ್ಳು ಭರವಸೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಇದೊಂದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿಸಿದಂತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ಕುರಿ ಸತ್ತರೆ ಪರಿಹಾರ ನೀಡುವ ಯೋಜನೆ ಜಾರಿಗೆ ತಂದಿದ್ದರು. ಆದರೆ, ಬಿಜೆಪಿ ಸರಕಾರ ಅದನ್ನು ರದ್ದುಗೊಳಿಸಿತ್ತು. ಮತ್ತೆ ಪಂಡಿತ್ ಚಿದ್ರಿಯವರು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದಾಗ ಹೋರಾಟ ಮುಖೇನ ಮರಳಿ ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದರು ಎಂದರು.
'ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಳ ಮಾಡಿದ್ದೇವೆ ಎಂದು ಹೇಳುವ ಬಿಜೆಪಿ ಸರಕಾರ ಚುನಾವಣೆ ಸಂದರ್ಭದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಇದೆಲ್ಲಾ ಜಾರಿಗೆ ತರಲು ಸಾಧ್ಯನಾ? ಎಂದು ಪ್ರಶ್ನೆ ಮಾಡಿದರಲ್ಲದೆ ಹಿಂದುಳಿದವರಿಗೆ ಈ ರೀತಿಯ ಅನ್ಯಾಯ ಮಾಡುವುದನ್ನು ಬಿಜೆಪಿ ಬಿಡಬೇಕು' ಎಂದು ಮಾಜಿ ಸಚಿವ ಎಚ್. ಎಂ. ರೇವಣ್ಣ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪಂಡಿತರಾವ ಚಿದ್ರಿ, ಗೀತಾ ಚಿದ್ರಿ, ಮಾಳಪ್ಪ ಅಡಸಾರೆ, ಎಂ. ಎಸ್. ಕಟಗಿ, ಮಲ್ಲಿಕಾರ್ಜುನ ಬಿರಾದಾರ, ಬಸವರಾಜ ಹೆಡೆ, ಪಿ. ಎಸ್. ಇಟಕಂಪಳ್ಳಿ ಸೇರಿದಂತೆ ಇತರರಿದ್ದರು.