Please enable javascript.ನೀರು ಬಳಕೆದಾರರ ಸಹಕಾರ ಸಂಘಗಳ ಸಭೆ - Water Users Cooperative Societies Meeting - Vijay Karnataka

ನೀರು ಬಳಕೆದಾರರ ಸಹಕಾರ ಸಂಘಗಳ ಸಭೆ

Vijaya Karnataka Web 16 May 2016, 9:00 am
Subscribe

ಚಾಮರಾಜನಗರ ತಾಲೂಕಿನ ಅಟ್ಟುಗುಳೀಪುರ ಗ್ರಾಮದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಸಭೆ ನಡೆಯಿತು...

water users cooperative societies meeting
ನೀರು ಬಳಕೆದಾರರ ಸಹಕಾರ ಸಂಘಗಳ ಸಭೆ

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಅಟ್ಟುಗುಳೀಪುರ ಗ್ರಾಮದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಸಭೆ ನಡೆಯಿತು.

ಸುವರ್ಣಾವತಿ ಜಲಾಶಯದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ರಾಜೇಂದ್ರಪ್ರಸಾದ್‌ ಮಾತನಾಡಿ, ನೀರು ಬಳಕೆದಾರರ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ. ನೀರು ಬಳಕೆದಾರರ ಸಂಘಗಳು ರಚನೆಯಾಗಿ ದಶಕ ಕಳೆದಿದೆ. ಸಂಘಗಳು ಮಾತ್ರ ಅಭಿವೃದ್ಧಿ ಹೊಂದಿಲ್ಲ . ಸಂಘಗಳನ್ನು ಬಲವರ್ಧನೆ ಮಾಡುವ ನಿಟ್ಟಿನಲ್ಲಿ ಇಲಾಖೆ ನಿರ್ಧರಿಸಿದೆ. ಸಂಘಗಳಿಗೆ ನೀರು ನಿರ್ವಹಣೆ, ಕರವಸೂಲಿ, ನಾಲೆ ದುರಸ್ತಿ ಕಾಮಗಾರಿ ಸೇರಿದಂತೆ ಇತರೆ ಕೆಲಸಗಳನ್ನು ವಹಿಸಲಾಗುತ್ತದೆ. ಇದರಿಂದ ಸಂಘದ ಮೇಲೆ ಜವಾಬ್ದಾರಿಯೂ ಹೆಚ್ಚಲಿದೆ. ಜತೆಗೆ ಸಂಘಗಳು ಅಭಿವೃದ್ಧಿ ಹೊಂದಲು ಅನುಕೂಲವಾಗುತ್ತದೆ. ಸಂಘದ ಕಾರ್ಯದರ್ಶಿಗಳಿಗೆ ಗೌರವಧನ ನೀಡುವ ಸಂಬಂಧ ಹಿರಿಯ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ನಂದಿ ಬಸವೇಶ್ವರ ನೀರು ಬಳಕೆದಾರರ ಸಹಕಾರ ಸಂಘದ ನಿರ್ದೇಶಕ ಶಿವಕುಮಾರ ಮಾತನಾಡಿ, ಸಂಘಗಳ ಅಭಿವೃದ್ಧಿಗೆ ಪೂರಕವಾಗಿ ಎಲ್ಲ ಜವಾಬ್ದಾರಿಯನ್ನು ಸಹಕಾರ ಸಂಘಗಳಿಗೆ ನೀಡಬೇಕು. ಅಪೂರ್ಣಗೊಂಡಿರುವ ಸಂಘದ ಕಟ್ಟಡಗಳನ್ನು ಪೂರ್ಣಗೊಳಿಸಬೇಕು. ನಾಲೆ ಕಾಮಗಾರಿ ಸೇರಿದಂತೆ ಹಕ್ಕು ಮತ್ತು ಜವಾಬ್ದಾರಿ ನೀಡಬೇಕು ಎಂದು ಒತ್ತಾಯಿಸಿದರು.

ಕುಂಬೇಶ್ವರ ನೀರು ಬಳಕೆದಾರರ ಸಂಘದ ಕಾರ್ಯದರ್ಶಿ ಆರ್‌.ಮಹದೇವ್‌, ಸಿದ್ದಯ್ಯನಪುರ ಸಂಘದ ಧನಂಜಯ್ಯ, ನಂದಿ ಬಸವೇಶ್ವರ ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷ ಗೋವಿಂದರಾಜು, ಕಾರ್ಯದರ್ಶಿ ರಮೇಶ್‌, ಬಸವಪುರ ಸಂಘದ ಕಾರ್ಯದರ್ಶಿ ಮುತ್ತುರಾಜ್‌, ಅಯ್ಯನಪುರ ಸಂಘದ ಲಿಂಗಯ್ಯ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ