ಚಿಂತಾಮಣಿ: ನಗರದ ಮಹಾತ್ಮಾಗಾಂಧಿ ಬಾಲಕರ ಸರಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಎಂ.ರಾಮಕೃಷ್ಣಪ್ಪ ಮತ್ತು ಎಸ್.ಆರ್. ಲಕ್ಷ್ಮಮ್ಮ ಅವರಿಗೆ ಶಾಲೆಯ ಸಿಬ್ಬಂದಿ ಗುರುವಾರ ಆತ್ಮೀಯ ಬೀಳ್ಕೊಡುಗೆ ನೀಡಿದರು.
ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಮುಖ್ಯ ಶಿಕ್ಷಕ ರಮಣಾರೆಡ್ಡಿ ಕೆ.ಎನ್., ‘‘ಇಬ್ಬರೂ ಶಿಕ್ಷಕರು ಶಾಲೆಗೆ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದಾರೆ. ಅವರ ಶ್ರಮದಿಂದ ಶಾಲೆಗೆ ಉತ್ತಮ ಲಿತಾಂಶ ಬಂದಿದೆ,’’ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
‘‘ಮಕ್ಕಳ ಭವಿಷ್ಯ ರೂಪಿಸಿದ ಅವರ ವಿಶ್ರಾಂತ ಜೀವನ ಸುಖಮಯವಾಗಿರಲಿ,’’ ಎಂದು ಹಾರೈಸಿದರು.
ಪ್ರತಿಭಾ ಪುರಸ್ಕಾರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸುಬ್ಬರಾಮಶಾಸ್ತ್ರಿ ಅವರು ಪ್ರತಿಭಾ ಪುರಸ್ಕಾರ ಮಾಡಿದರು.
2014- 15ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಹಾತ್ಮಗಾಂಧಿ ಸರಕಾರಿ ಫ್ರೌಢಶಾಲೆಯ ವೆಂಕಟೇಶ್, ಬಾಬಾಜಾನ್ ಮತ್ತು ನಾತಿಕ್ಖಾನ್ ಎಂಬ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಸನ್ಮಾನಿಸಿದರು.
‘‘ವಿದ್ಯೆಯ ಜತೆಗೇ ವಿನಯ, ಶಿಸ್ತು, ಸಮಯಪಾಲನೆ, ಶಾಂತಿ ಇತ್ಯಾದಿ ವಿಷಯಗಳ ಬಗ್ಗೆ ಹೆಚ್ಚು ಗಮನ ನೀಡುವಂತೆ, ’’ ಕಿವಮಾತು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಶಿವಪ್ಪ, ಸಂಪಂಗಿ, ಕಷ್ಣಮೂರ್ತಿ ಮತ್ತಿತರರು ಹಾಜರಿದ್ದರು.