ಆ್ಯಪ್ನಗರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ಪ್ರವೇಶಕ್ಕೆ ಗ್ರೀನ್‌ ಸಿಗ್ನಲ್‌

Karnataka Budget 2023: ಚಿತ್ರದುರ್ಗದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಬಜೆಟ್‌ನಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ. ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಆಗಬೇಕು ಎಂದು ಕೋಟೆ ನಾಡಿನ ಜನರ ಕನಸಾಗಿತ್ತು. ಅದಕ್ಕೀಗ ಫಲಸಿಕ್ಕಿದೆ. ಇನ್ನು ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರಕಾರವು 2023-24ನೇ ಸಾಲಿನ ತನ್ನ ಆಯವ್ಯಯದಲ್ಲಿ 5300 ಕೋಟಿ ರೂ. ಅನುದಾನ ಘೋಷಿಸಿದ್ದು, ಶೀಘ್ರವಾಗಿ ಬಿಡುಗಡೆ ಮಾಡುವಂತೆ ಕೇಂದ್ರದ ಮೇಲೆ ಒತ್ತಡ ಹೇರಿ ಯೋಜನೆಯ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

Edited byಶ್ರುತಿ ಡಿ | Vijaya Karnataka Web 8 Jul 2023, 8:56 am

ಹೈಲೈಟ್ಸ್‌:

  • ಚಿತ್ರದುರ್ಗದಲ್ಲಿ ಮೆಡಿಕಲ್‌ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರದಿಂದ ಸೂಚನೆ.
  • ಆಶಾಕಿರಣ ಎಂಬ ಕಾರ್ಯಕ್ರಮದಡಿ ಕಣ್ಣಿನ ಶಿಬಿರ ಘಟಕ.
  • ಭದ್ರಾ ಕಾಮಗಾರಿ ಚುರುಕಿಗಾಗಿ ಕೇಂದ್ರದ ಮೇಲೆ ಒತ್ತಡ.

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ಚಿತ್ರದುರ್ಗ: ಕೋಟೆನಾಡಿಗೆ ಇನ್ಮುಂದೆ ವೈದ್ಯನಗರಿ ಎಂಬ ಪಟ್ಟ ಸಿಗಲಿದ್ದು, ಈ ಬಜೆಟ್‌ನಲ್ಲಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯಲು ಸಿಎಂ ಸಿದ್ದರಾಮಯ್ಯ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ.
ಮೆಡಿಕಲ್‌ ಕಾಲೇಜು ಎಂಬುದು ಈ ಭಾಗದ ಬಹುದಿನದ ಕನಸಾಗಿದ್ದು, ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಎಲ್ಲ ಪೂರ್ವ ಸಿದ್ದತೆಗಳು ಪೂರ್ಣಗೊಂಡಿದೆ. ಶೀಘ್ರದಲ್ಲಿಯೇ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಶುರುವಾಗಲಿದೆ. ಚಿತ್ರದುರ್ಗದಲ್ಲಿ ಮೆಡಿಕಲ್‌ ಕಾಲೇಜು ಆರಂಭವಾಗಬೇಕೆಂಬುದು ಬಹುತೇಕರ ಆಸೆಯಾಗಿದ್ದು, ಸುತ್ತಮುತ್ತ ಇರುವ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಮೆಡಿಕಲ್‌ ಕಾಲೇಜು ಸ್ಥಾಪನೆ ಆಗಬೇಕು ಎಂದು ಕೋಟೆ ನಾಡಿನ ಬಹುಮಂದಿಯ ಕನಸಾಗಿತ್ತು.

ಈ ಹಿನ್ನೆಲೆಯಲ್ಲಿಈ ಬಾರಿ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮೆಡಿಕಲ್‌ ಕಾಲೇಜು ಆರಂಭದ ಸೂಚನೆ ಕೊಟ್ಟಿದ್ದಾರೆ. ಸದ್ಯ ಚಿತ್ರದುರ್ಗ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಎಲ್ಲಾ ಪೂರ್ವ ಸಿದ್ಧತೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಹೇಳಲಾಗಿದೆ. ಆದರೆ ಹೊಸ ಕಟ್ಟಡ ನಿರ್ಮಾಣಕ್ಕೆ ಹಣ ಮೀಸಲಿರಿಸುವ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಇದನ್ನು ಬಿಟ್ಟು ಸಿಎಂ ಸಿದ್ದರಾಮಯ್ಯ ಶುಕ್ರವಾರ (ಜುಲೈ 7) ರಂದು ಮಂಡಿಸಿದ ಬಜೆಟ್‌ನಲ್ಲಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಗೆ ಹೇಳಿಕೊಳ್ಳುವಂತಹ ವಿಶೇಷ ಕೊಡುಗೆಗಳಿಲ್ಲ.

ಭದ್ರಾ ಮೇಲ್ದಂಡೆ ಯೋಜನೆಯನ್ನು ಡಬಲ್‌ ಎಂಜಿನ್‌ ಎಂದು ಹೇಳಿಕೊಳ್ಳುವ ಬಿಜೆಪಿ ಸರಕಾರವಿದ್ದಾಗಲು ರಾಷ್ಟ್ರೀಯ ಯೋಜನೆಯನ್ನಾಗಿ ಇಲ್ಲಿಯವರೆಗೂ ಅಧಿಕೃತವಾಗಿ ಅನುಮೋದಿಸಿಲ್ಲ. ಕೇಂದ್ರ ಸರಕಾರವು 2023-24ನೇ ಸಾಲಿನ ತನ್ನ ಆಯವ್ಯಯದಲ್ಲಿ 5300 ಕೋಟಿ ರೂ.ಗಳ ಅನುದಾನವನ್ನು ಯೋಜನೆಗೆ ಘೋಷಿಸಿದೆ. ಅಲ್ಲದೇ ಸದರಿ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಿ ಯೋಜನೆಯ ಅನುಷ್ಠಾನಕ್ಕೆ ಆದ್ಯತೆಯ ಮೇಲೆ ಕ್ರಮವಹಿಸಲಾಗುವುದು ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.
ಬೆಲೆ ಏರಿಕೆ ಬರೆಯಿಂದ ಕಾಂಗ್ರೆಸ್ ಜನವಿರೋಧಿ: ಸಿ ಟಿ ರವಿ
ಕಣ್ಣಿನ ಶಸ್ತ್ರ ಚಿಕಿತ್ಸೆ
ಆಶಾಕಿರಣ ಎಂಬ ಕಾರ್ಯಕ್ರಮದಡಿ ಅಭಿಯಾನ ರೂಪದಲ್ಲಿ ಕಣ್ಣಿನ ಶಿಬಿರ ಘಟಕ, ಕನ್ನಡಕ ವಿತರಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಳ ಚಟುವಟಿಕೆಗಳನ್ನು ಹಂತ ಹಂತವಾಗಿ 2023-24ನೇ ಸಾಲಿನಲ್ಲಿ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ, ರಾಯಚೂರು, ಉತ್ತರ ಕನ್ನಡ, ಚಿತ್ರದುರ್ಗ, ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳ ಜಿಲ್ಲಾಡಳಿತ ಕಟ್ಟಡ ಹಾಗೂ 25 ತಾಲೂಕು ಆಡಳಿತ ಸೌಧ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು 21 ಕೋಟಿ ರೂ. ಹಣ ಇಡಲಾಗಿದೆ.

ಈ ಮುಂಗಡ ಪತ್ರದಲ್ಲಿ ಶಿಕ್ಷಣ, ಮಹಿಳಾ ಅಭಿವೃದ್ಧಿ, ನಗರಾಭಿವೃದ್ಧಿ, ಇಂಧನ, ನೀರಾವರಿ ಮತ್ತು ಕೃಷಿ-ತೋಟಗಾರಿಕೆ, ಸಮಾಜ ಕಲ್ಯಾಣ ಇನ್ನು ಹಲವೊಂದು ಬಗೆಯ ಆರ್ಥಿಕ ಚಟುವಟಿಕೆಗಳಿಗೆ ಒತ್ತು ನೀಡಲಾಗಿದೆ. ಇನ್ನು ಬಹುನಿರೀಕ್ಷೆಯಲ್ಲಿದ್ದ ಚಿತ್ರದುರ್ಗದ ವೈದ್ಯಕೀಯ ಕಾಲೇಜಿನ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿರುವುದು ಸಂತಸ ತಂದಿದೆ ಎಂದು ಆರ್ಥಿಕ ತಜ್ಞ ಪ್ರೋ.ಎಚ್‌.ಲಿಂಗಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎಸ್‌.ಸಿ.ಪಿ, ಟಿ.ಎಸ್‌.ಪಿ ಅನುದಾನ ಬಳಕೆಗೆ ಮಾರಕವಾಗಿದ್ದ 7ಡಿ ರದ್ದುಪಡಿಸಿರುವುದು ಸ್ವಾಗತಾರ್ಹ. ಹೊಸ 10 ಮಾದರಿ ಶಾಲೆಗಳು, ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ಶಿಕ್ಷಣಕ್ಕೆ ಉತ್ತೇಜನ. ಎಸ್ಸಿ, ಎಸ್ಟಿ ಅನುದಾನದಲ್ಲಿ ಕೌಶಲ್ಯ ಅಭಿವೃದ್ದಿ, ಸ್ವ-ಉದ್ಯೋಗ, ಗೃಹ ನಿರ್ಮಾಣಕ್ಕೆ ಆದ್ಯತೆ. ಎಸ್ಸಿ, ಎಸ್ಟಿ ವರ್ಗದ ಆದಾಯಮಿತಿಯನ್ನು 2.5ಲಕ್ಷ ದಿಂದ 10 ಲಕ್ಷಕ್ಕೆ ಹೆಚ್ಚಳ ಪ್ರಸ್ತಾಪ ಮಾಡೋದೆ ಇಲ್ಲ ಎಂದು ಡಾ.ಬಿ.ಆರ್‌.ಅಂಬೇಡ್ಕರ್‌ ವಿದ್ಯಾರ್ಥಿ ಪರಿಷತ್‌ ಅಧ್ಯಕ್ಷ,
ಬಿ.ಪಿ.ತಿಪ್ಪೇಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಬಜೆಟ್‌ನ 50 ಪುಟ ಟೀಕೆಗೆ ಸೀಮಿತವಾಗಿದ್ರೆ, 52 ಸಾವಿರ ಕೋಟಿ ಗ್ಯಾರಂಟಿಗೆ ಮೀಸಲು; ಇದು ರಾಜಕೀಯದ ಬಜೆಟ್‌ - ಬೊಮ್ಮಾಯಿ
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ 52ಸಾವಿರ ಕೋಟಿ ಮೀಸಲು, ಹೊಸ ಶಿಕ್ಷಣ ನೀತಿಯನ್ನು ರದ್ದು ಮಾಡಿ ರಾಜ್ಯ ಶಿಕ್ಷಣ ನೀತಿ ಜಾರಿಗೆ, ಶಾಲಾ ಕಾಲೇಜುಗಳ ಮೂಲ ಸೌಕರ್ಯಗಳ ಒತ್ತು ನೀಡುವ ಮೂಲಕ ಶೈಕ್ಷಣಿಕ ಪ್ರಗತಿ. ರೈತರಿಗೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲ ಹಾಗೂ ಕೇಂದ್ರ ಎಪಿಎಂಸಿ ತಿದ್ದುಪಡಿ ಕಾಯ್ದೆ ರದ್ದು ಮಾಡುವುದರ ಮೂಲಕ ರೈತರ ಅಭಿವೃದ್ಧಿ ಶ್ರಮಿಸಿದೆ ಎಂದು ಆರ್ಥಿಕ ವಿಶ್ಲೇಷಕ ಎಸ್‌.ಲಕ್ಷ್ಮಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎಪಿಎಂಸಿ, ಹಮಾಲರು ಮೃತಪಟ್ಟರೆ ಅಂತ್ಯ ಸಂಸ್ಕಾರಕ್ಕೆ 25 ಸಾವಿರ ರೂ.ಗಳನ್ನು ಘೋಷಿಸಲಾಗಿದೆ. ಇದೊಂದು ಜನಪರ ಬಜೆಟ್‌ ಎಂದು ಎಐಟಿಯುಸಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್‌ಬಾಬು ಹೇಳಿದ್ದಾರೆ.

ಅಲ್ಪಸಂಖ್ಯಾತರಿಗೆ ಹಜ್‌ ಭವನದಲ್ಲಿ ಕೆಎಎಸ್‌. ಐಎಎಸ್‌ ಪರೀಕ್ಷೆ ತರಬೇತಿ. ವಸತಿ ಸಹಿತ ವ್ಯವಸ್ಥೆ, ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ದಿಗೆ 360 ಕೋಟಿ ರೂ.ಗಳನ್ನು ಘೋಷಿಸಿರುವುದನ್ನು ನೋಡಿದರೆ ಇದೊಂದು ಅಲ್ಪಸಂಖ್ಯಾತರ ಓಲೈಕೆ ಬಜೆಟ್‌. ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ರಾಜ್ಯದ ಜನರನ್ನು ಸೋಮಾರಿಯನ್ನಾಗಿ ಮಾಡಿರುವ ಕಾಂಗ್ರೆಸ್‌ ಪಕ್ಷ ಹಿಂದೂ ರಾಷ್ಟ್ರದಲ್ಲಿರುವ ಶಾಂತಿಯ ತೋಟ ಕರ್ನಾಟಕವನ್ನು ತಾಲಿಬಾನ್‌ ರಾಜ್ಯವನ್ನಾಗಿ ಮಾಡಲು ಹೊರಟಂತಿದೆ ಎಂದು ಚಿತ್ರದುರ್ಗ ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಶ್ಯಾಮಲ ಶಿವಪ್ರಕಾಶ್‌ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಲೇಖಕರ ಬಗ್ಗೆ
ಶ್ರುತಿ ಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ, ಗುತ್ತಿಗೆ ಆಧಾರದ ಮೇಲೆ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಹುಟ್ಟಿ ಬೆಳೆದಿದ್ದು, ಮಲೆನಾಡು ಶಿವಮೊಗ್ಗ ಜಿಲ್ಲೆಯ, ಹೊಸನಗರ ತಾಲೂಕಿನ ಯಡೂರು ಗ್ರಾಮದಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಬರೆಯುವುದು, ಹಿನ್ನೆಲೆ ಧ್ವನಿ, ಚಾರಣ, ಕವನ ರಚನೆ ನೆಚ್ಚಿನ ಹವ್ಯಾಸ. ಪ್ರಚಲಿತ ವಿದ್ಯಮಾನ, ರಾಜಕೀಯ, ಕೃಷಿ ಆಸಕ್ತಿವುಳ್ಳ ಕ್ಷೇತ್ರಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ