ಹುಬ್ಬಳ್ಳಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ ಜೂನ್ 5 ರಂದು ಬೆಳಗ್ಗೆ 10 ಗಂಟೆಗೆ ಕಿಮ್ಸ್ ಆಡಿಟೋರಿಯಂನಲ್ಲಿ ಏರ್ಪಡಿಸಲಾಗಿದೆ.
ಕಿಮ್ಸ ನಿರ್ದೇಶಕ ಡಾ. ದತ್ತಾತ್ರೇಯ ಭಂಟ ಅಧ್ಯಕ್ಷತೆ ವಹಿಸುವರು. ಪ್ರಾಚಾರ್ಯ ಕೆ.ಎಫ್. ಕಮ್ಮಾರ, ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ. ಜಿ.ಆರ್. ತಮಗೊಂಡ ಉಪಸ್ಥಿತರಿರುವರು ಎಂದು ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ.ಪಿ.ಎನ್.ಬಿರಾದಾರ ತಿಳಿಸಿದ್ದಾರೆ.