ಆ್ಯಪ್ನಗರ

Karnataka Elections 2023 : ನಾನೊಬ್ಬ ಬಡಪಾಯಿ, ಯಡಿಯೂರಪ್ಪ ಟೀಕೆಗಳೇ ಗೆಲುವಿಗೆ ಮೆಟ್ಟಿಲು : ಶೆಟ್ಟರ್ ವಿಶ್ವಾಸ

Karnataka Assembly Elections 2023 hubballi constituency- ನಾನೊಬ್ಬ ಬಡಪಾಯಿ ಶೆಟ್ಟರ್, ಅಮಿತ್ ಶಾ, ಯಡಿಯೂರಪ್ಪ ಸೇರಿದಂತೆ ಎಲ್ಲರೂ ನನ್ನನ್ನು ಸೋಲಿಸಲು ಕರೆ ಕೊಡುತ್ತಿದ್ದಾರೆ. ಯಾಕಿಷ್ಟು ನನ್ನನ್ನ ಸೋಲಿಸಲು ಗುರಿ ಹಾಕಿಕೊಂಡಿದ್ದಾರೆ ಗೊತ್ತಿಲ್ಲ ಎಂದರು. ಇನ್ನು ಪ್ರಹ್ಲಾದ್ ಜೋಶಿಯವರು ಟಿಕೆಟ್ ವಿಚಾರದಲ್ಲಿ ಬಹಳ ರಾಜಕಾರಣ ಮಾಡಿದ್ದಾರೆ ಎಂದು ಕಿಡಿ ಖಾರಿದರು. ಅಲ್ಲದೆ ಯಾರೇ ಟೀಕಿಸಿದರೂ, ಹಿಂದಿನ 6 ಬಾರಿಗಿಂತ ಈ ಬಾರಿ ಹೆಚ್ಚು ಮತಗಳಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Edited byಸೌಮ್ಯಶ್ರೀ ಮಾರ್ನಾಡ್ | Vijaya Karnataka Web 26 Apr 2023, 5:03 pm

ಹೈಲೈಟ್ಸ್‌:

  • ಬಿ.ಎಸ್.ಯಡಿಯೂರಪ್ಪ ಅವರು ಕೂಡಾ ಮಂಗಳವಾರ ಪ್ರಮುಖರ ಸಭೆ ನಡೆಸಿ ನನ್ನ ಸೋಲಿಸಲು ಆಂದೋಲನ ನಡೆಸಿದ್ದಾರೆ. ಯಾಕಿಷ್ಟು ಬಡಪಾಯಿ ಶೆಟ್ಟರ್'ಗೆ ಸೋಲಿಸುವ ಗುರಿಯನ್ನು ಬಿಜೆಪಿ ಮಾಡಿಕೊಂಡಿದೆ ಗೊತ್ತಾಗುತ್ತಿಲ್ಲ ಎಂದರು.
  • ನನ್ನ ವಿರುದ್ಧ ಯಾರೇ ಎಷ್ಟೇ ಟೀಕೆ ಮಾಡಲಿ, ನಾನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪ್ರಚಾರ ಮಾಡತ್ತಾ ಇದ್ದೇನೆ. ಈ ಹಿಂದೆ 6 ಬಾರಿ ಚುನಾವಣೆಗಿಂತಲೂ ಅತಿಹೆಚ್ಚು ಮತಗಳನ್ನು ಪಡೆಯುವ ಮೂಲಕ ಏರನೇ ಬಾರಿಗೆ ಶಾಸಕನಾಗುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
  • ಟಿಕೆಟ್ ವಿಚಾರದಲ್ಲಿ ಪ್ರಲ್ಹಾದ್ ಜೋಶಿ ಬಹಳ ರಾಜಕಾರಣ ಮಾಡಿದ್ದಾರೆ. ಅದು ಬಹಳ ದಿನ ನಡೆಯೋದಿಲ್ಲ. ನಿನ್ನೆ ಮೊನ್ನೆ ಪಕ್ಷಕ್ಕೆ ಬಂದವರಿಗೆ ಟಿಕೆಟ್ ನೀಡಿದ್ದಾರೆ. ಅಪರಾಧಿ ಹಿನ್ನೆಲೆಯುಳ್ಳವರಿಗೆ ಟಿಕೆಟ್ ನೀಡಲಾಗಿದೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Shettar
Shettar recently quit BJP for Congress.
ಹುಬ್ಬಳ್ಳಿ: ನಾನೊಬ್ಬ ಬಡಪಾಯಿ ಶೆಟ್ಟರ್ ಆದರೆ ನನ್ನ ಮೇಲೆ ಬಿಜೆಪಿ ಸೋಲಿಸುವ ಅಭಿಯಾನ ಮಾಡುತ್ತಿದೆ. ಅಂತಿಮವಾಗಿ ಮೇ.10 ರಂದು ಜನತಾ ಕೋರ್ಟ್ನಲ್ಲಿ ಸೋಲು-ಗೆಲುವು ನಿರ್ಧಾರ ಆಗಲಿದೆ ಎಂದು ಮಾಜಿ ಸಿಎಂ ಹಾಗೂ ಹು-ಧಾ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹು-ಧಾ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರ ಕೇವಲ ಹುಬ್ಬಳ್ಳಿಗೆ ಮಾತ್ರ ಸೀಮಿತವಲ್ಲ, ರಾಜ್ಯದ ಸೆಂಟ್ರಲ್ ಕ್ಷೇತ್ರವಾಗಿದೆ. ಅಷ್ಟೇ ಅಲ್ಲದೇ ರಾಷ್ಟ್ರದಾದ್ಯಂತ ಕ್ಷೇತ್ರದ ವಿಷಯ ಚರ್ಚೆ ಆಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸಬೇಕೆಂಬ ಮಾತುಗಳನ್ನು ಆಡಿದ್ದಾರೆ. ಜೊತೆಗೆ ಬಿ.ಎಸ್.ಯಡಿಯೂರಪ್ಪ ಅವರು ಕೂಡಾ ಮಂಗಳವಾರ ಪ್ರಮುಖರ ಸಭೆ ನಡೆಸಿ ನನ್ನ ಸೋಲಿಸಲು ಆಂದೋಲನ ನಡೆಸಿದ್ದಾರೆ. ಯಾಕಿಷ್ಟು ಬಡಪಾಯಿ ಶೆಟ್ಟರ್'ಗೆ ಸೋಲಿಸುವ ಗುರಿಯನ್ನು ಬಿಜೆಪಿ ಮಾಡಿಕೊಂಡಿದೆ ಗೊತ್ತಾಗುತ್ತಿಲ್ಲ ಎಂದರು.

Karnataka Election 2023: ಶೆಟ್ಟರ್‌ನ ಸೋಲಿಸುವ ಜವಾಬ್ದಾರಿ ನಾನು ತಗೋತೇನೆ, ಸವದಿಯನ್ನು ನೀವು ಸೋಲಿಸಿ: ಯಡಿಯೂರಪ್ಪ

ನಾನು ಅಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಿಲ್ಲ. ನನ್ನಂತೆಯೇ ಆಯನೂರು ಮಂಜುನಾಥ, ಲಕ್ಷ್ಮಣ ಸವದಿ, ಯಲ್ಲಾಪುರದಲ್ಲಿ ಮಾಜಿ ಶಾಸಕ, ಎನ್.ಆರ್.ಸಂತೋಷ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆ ಆಗಿದ್ದಾರೆ. ಆದರೆ ನಾನು ಯಾವುದೋ ಅಪರಾಧ ಮಾಡಿದಂತೆ ಎಲ್ಲರೂ ನನಗೆ ಪ್ರಶ್ನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ನಾನು ಬಿಜೆಪಿಗೆ ಯಾವುದೇ ಅನ್ಯಾಯ ಮಾಡಿಲ್ಲ. ಈ ಹಿಂದೆಯೇ ಧರ್ಮೇಂದ್ರ ಪ್ರದಾನ ಅವರು ನನ್ನೊಂದಿಗೆ ಚರ್ಚೆ ಮಾಡಿದ್ದರೆ ಇಷ್ಟು ಮುಂದುವರೆಯುತ್ತಿರಲಿಲ್ಲವೇನೋ? ಸದ್ಯದ ಬೆಳವಣಿಗೆ ನಂತರ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವರಿಷ್ಠರು ರಾಜ್ಯಸಭಾ ಸದಸ್ಯರಾಗಿ ಮಾಡುತ್ತೇವೆಂದು ಹೇಳಿದ್ದರು. ಅದಕ್ಕೆ ಬೆಲೆ ಕೊಡದೇ ತತ್ವಸಿದ್ದಾಂತಗಳಿಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಈ ಹಿಂದೆ ಆಪರೇಷನ್ ಕಮಲ ಮಾಡಿ ಸರ್ಕಾರ ರಚನೆ ಮಾಡಿದಾಗಲೇ ತತ್ವಸಿದ್ದಾಂತಗಳು ಮಣ್ಣುಪಾಲು ಆಗಿವೆ. ಹೀಗಾಗಿ ಇದೀಗ ನನ್ನ ಮಾತನಾಡುವ ನೈತಿಕತೆ ಬಿಜೆಪಿಯವರಿಗೆ ಇಲ್ಲ ಎಂದು ಕಿಡಿಕಾರಿದರು.

ಈ ಹಿಂದೆ ಯಡಿಯೂರಪ್ಪ ಅವರು ಬಿಜೆಪಿಯನ್ನು ಒಡೆದು ಕೆಜಿಪಿ ಪಕ್ಷ ಕಟ್ಟಿದ್ದರು. ಆಗ ಅವರ ತತ್ವಸಿದ್ದಾಂತ ಎಲ್ಲಿಗೆ ಹೋಗಿತ್ತು. ಹೀಗಾಗಿ ನಾನು ಪಕ್ಷಕ್ಕೆ ದ್ರೋಹ ಮಾಡಿಲ್ಲ. ಯಾವ ಹಿನ್ನೆಲೆಯಲ್ಲಿ ಬಿಜೆಪಿಯನ್ನು ತ್ಯಜಿಸಿದ್ದೇನೆ ಎಂಬುದನ್ನು ಈಗಾಗಲೇ ತಿಳಿಸಿದ್ದೇನೆ. ನನ್ನ ಸ್ವಾಭಿಮಾನಕ್ಕೆ ದಕ್ಕೆ ಉಂಟಾಗಿ ಹೊರಗಡೆ ಬಂದಿದ್ದೇನೆ ಎಂದರು.

Karnataka Election 2023 : ನನ್ನ ರಕ್ತದಲ್ಲಿ ಬರೆದುಕೊಡ್ತೇನೆ ಯಾವ ಕಾರಣಕ್ಕೂ ಪಕ್ಷ ದ್ರೋಹಿ ಜಗದೀಶ್‌ ಶೆಟ್ಟರ್‌ ಗೆಲ್ಲಲ್ಲ - ಬಿಎಸ್‌ ಯಡಿಯೂರಪ್ಪ
ಯಡಿಯೂರಪ್ಪ ಅವರ ಟೀಕೆಗಳೇ ನನಗೆ ಗೆಲುವಿಗೆ ಮೆಟ್ಟಿಲು

ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರೇ ನನಗೆ ಟಿಕೆಟ್ ಕೊಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ಕೈತಪ್ಪಿಸಿದರೇ ಪಕ್ಷಕ್ಕೆ ತುಂಬಾ ಡ್ಯಾಮೇಜ್ ಆಗಲಿದೆ ಎಂದಿದ್ದರು. ಹೀಗಾಗಿ ಅವರು ನನಗೆ ಟಿಕೆಟ್ ಕೊಡಿಸಲು ಬಹಳ ಪ್ರಯತ್ನ ಮಾಡಿದ್ದಾರೆ. ಆದರೆ ಆಬಳಿಕ ಅವರು ಅಸಹಾಯಕಕಾಗಿ ಮಾತನಾಡುತ್ತಿದ್ದಾರೆ. ಅವರ ಟೀಕೆಗಳು ನನಗೆ ಆರ್ಶೀವಾದ ಇದ್ದ ಹಾಗೇ. ಅವರ ಟೀಕೆಗಳೆ ನನಗೆ ಗೆಲುವಿಗೆ ಶ್ರೀರಕ್ಷೆ ಆಗಲಿದೆ ಎಂದರು.

ರಾಜ್ಯದಲ್ಲಿ ಲಿಂಗಾಯತ ನಾಯಕರನ್ನು ಮತ್ತೊಬ್ಬ ಲಿಂಗಾಯತ ನಾಯಕರ ವಿರುದ್ಧ ಟೀಕೆ ಮಾಡಿಸಲಾಗುತ್ತಿದೆ. ಈ ಮೂಲಕ ಮತ್ತೊಬ್ಬರ ಹೆಗಲಿನ ಮೇಲೆ ಬಂದೂಕು ಇಟ್ಟು ಗುಂಡು ಹಾರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಪರೋಕ್ಷವಾಗಿ ಬಿ.ಎಲ್.ಸಂತೋಷ ಅವರಿಗೆ ತಿರುಗೇಟು ನೀಡಿದರು.

ನನ್ನ ವಿರುದ್ಧ ಯಾರೇ ಎಷ್ಟೇ ಟೀಕೆ ಮಾಡಲಿ, ನಾನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪ್ರಚಾರ ಮಾಡತ್ತಾ ಇದ್ದೇನೆ. ಈ ಹಿಂದೆ 6 ಬಾರಿ ಚುನಾವಣೆಗಿಂತಲೂ ಅತಿಹೆಚ್ಚು ಮತಗಳನ್ನು ಪಡೆಯುವ ಮೂಲಕ ಏರನೇ ಬಾರಿಗೆ ಶಾಸಕನಾಗುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯ ಜನ ವಿರೋಧಿ ಆಡಳಿತದಿಂದ ಬೇಸತ್ತು 'ಕೈ' ಹಿಡಿದಿದ್ದೇನೆ: ಬಿಎಸ್‌ವೈ ಆಪ್ತ ಮೋಹನ್ ಲಿಂಬಿಕಾಯಿ
ಜೋಶಿ ವಿರುದ್ಧ ಕಿಡಿ:
ಪ್ರಲ್ಹಾದ್ ಜೋಶಿ ಅವರು ತತ್ವಸಿದ್ದಾಂತಗಳಿಲ್ಲದೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆಂಬ ಹೇಳಿಕೆ ಕೊಟ್ಟಿದ್ದಾರೆ. ಟಿಕೆಟ್ ವಿಚಾರದಲ್ಲಿ ಪ್ರಲ್ಹಾದ್ ಜೋಶಿ ಬಹಳ ರಾಜಕಾರಣ ಮಾಡಿದ್ದಾರೆ. ಅದು ಬಹಳ ದಿನ ನಡೆಯೋದಿಲ್ಲ. ನಿನ್ನೆ ಮೊನ್ನೆ ಪಕ್ಷಕ್ಕೆ ಬಂದವರಿಗೆ ಟಿಕೆಟ್ ನೀಡಿದ್ದಾರೆ. ಅಪರಾಧಿ ಹಿನ್ನೆಲೆಯುಳ್ಳವರಿಗೆ ಟಿಕೆಟ್ ನೀಡಲಾಗಿದೆ. ಆದರೆ ಹಿರಿತನಕ್ಕೆ ಬೆಲೆ ಕೊಡದೇ ಟಿಕೆಟ್ ಕೈತಪ್ಪಿಸಿದ್ದು ಸ್ವಾಭಿಮಾನಕ್ಕೆ ದಕ್ಕೆ ತರಲಾಯಿತು. ಈ ದಿಸೆಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದು, ಈ ಬಾರಿ ಅತ್ಯಧಿಕ ಮತಗಳನ್ನು ಪಡೆದು ಗೆದ್ದು ಬರಲಿದ್ದೇನೆ ಎಂದು ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಉಸ್ತುವಾರಿಗಳಾದ ರೋಹನ್ ಗುಪ್ತ, ಮುಖಂಡರಾದ ಸದಾನಂದ ಡಂಗನವರ, ರಜತ್ ಉಳ್ಳಾಗಡ್ಡಿಮಠ, ಮಲ್ಲಿಕಾರ್ಜುನ ಸಾಹುಕಾರ, ನಾಗೇಶ ಕಲಬುರಗಿ ಇದ್ದರು.
ಲೇಖಕರ ಬಗ್ಗೆ
ಸೌಮ್ಯಶ್ರೀ ಮಾರ್ನಾಡ್
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಡಿಜಿಟಲ್ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರರಾಗಿ 7 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ರಾಜಕೀಯ, ನಾಗರಿಕರ ಸಮಸ್ಯೆಗಳು, ಬೆಂಗಳೂರು ಸ್ಥಳೀಯ ಆಡಳಿತದ ಕುಂದುಕೊರತೆಗಳ ವರದಿ, ವಿಶೇಷ ವ್ಯಕ್ತಿಗಳ ಸಂದರ್ಶನಗಳನ್ನು ಮಾಡುತ್ತಿದ್ದಾರೆ. ರಂಗಭೂಮಿ ಹಾಗೂ ಯಕ್ಷಗಾನ ಇವರ ಇತರ ಆಸಕ್ತಿಕರ ಕ್ಷೇತ್ರಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ