ಕೊಣನೂರು : ಹೋಬಳಿಯ ಚಿಕ್ಕಬೊಮ್ಮನಹಳ್ಳಿ ಗ್ರಾಮದ ಪುರಾಣ ಇತಿಹಾಸ ಪ್ರಸಿದ್ಧ ರಂಗನಾಥಸ್ವಾಮಿ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜಂಭಣೆಯಿಂದ ನೆರವೇರಿತು.
ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯದ ಆವರಣದಲ್ಲಿ ಗುರುವಾರ ಸಂಜೆಯಿಂದಲೇ ಧ್ವಜ ಪೂಜೆ ಮೊದಲಾದ ಪೂಜಾ ವಿಧಿ ವಿಧಾನಗಳು ನಡೆದವು. ಸಂಜೆ ವಿವಿಧ ಬಗೆಯ ಹೂವುಗಳಿಂದ ಹಾಗೂ ಬಗೆ ಬಗೆಯ ಬಣ್ಣದ ವಸ್ತ್ರಗಳಿಂದ ಅಲಂಕರಿಸಿದ್ದ ರಥದಲ್ಲಿ ರಂಗನಾಥಸ್ವಾಮಿ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ, ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ರಥಾರೋಹಣ ನಡೆಸಲಾಯಿತು.
ರಾಮಯ್ಯ ಪರದೇಶಿಕ ಸ್ವಾಮೀಜಿ ಸಂಜೆ 6 ಕ್ಕೆ ಬಲಿ ಪೂಜೆ ಹಾಗೂ ರಥಕ್ಕೆ ಪೂಜೆ ಸಲ್ಲಿಸಿ ಕದಳೀ ಛೇದನ ಮಾಡಿ ರಥೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಭಕ್ತರು ಹರ್ಷೋದ್ಗಾರದಿಂದ ಜೈಕಾರ ಹಾಕುತ್ತಾ ರಥವನ್ನು ಎಳೆದು ಹಣ್ಣು ಧವನ ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ಗ್ರಾಮಸ್ಥರು ರಥ ಸಾಗುವ ಮಾರ್ಗದುದ್ದಕ್ಕೂ ತಳಿರು ತೋರಣಗಳನ್ನು ಕಟ್ಟಿ ವಿದ್ಯುತ್ ದೀಪಾಲಂಕಾರಗಳನ್ನು ಮಾಡಿ ರಂಗೋಲಿ ಹಾಕಿ ಸ್ವಾಗತಿಸಿದರು. ಡೊಳ್ಳು ಕುಣಿತ ಹಾಗೂ ಮಂಗಳ ವಾಧ್ಯ ಉತ್ಸವಕ್ಕೆ ಮೆರುಗು ನೀಡಿದವು. ರಥವು ರಂಗನಾಥಸ್ವಾಮಿ ದೇವಾಲಯದಿಂದ ಚಾಮುಂಡೇಶ್ವರಿ ದೇವಾಲಯದವರೆಗೆ ಎಳೆದು ನಂತರ ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು.
ಅಲ್ಲಲ್ಲಿ ಕೆಲವು ದಾನಿಗಳು ನೀರು, ಮಜ್ಜಿಗೆ, ಪಾನಕ ಸೇರಿದಂತೆ ಪುಳಿಯೊಗರೆ, ಮೊಸರನ್ನವನ್ನು ಭಕ್ತರಿಗೆ ಹಂಚಿದರು.
ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯದ ಆವರಣದಲ್ಲಿ ಗುರುವಾರ ಸಂಜೆಯಿಂದಲೇ ಧ್ವಜ ಪೂಜೆ ಮೊದಲಾದ ಪೂಜಾ ವಿಧಿ ವಿಧಾನಗಳು ನಡೆದವು. ಸಂಜೆ ವಿವಿಧ ಬಗೆಯ ಹೂವುಗಳಿಂದ ಹಾಗೂ ಬಗೆ ಬಗೆಯ ಬಣ್ಣದ ವಸ್ತ್ರಗಳಿಂದ ಅಲಂಕರಿಸಿದ್ದ ರಥದಲ್ಲಿ ರಂಗನಾಥಸ್ವಾಮಿ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ, ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ರಥಾರೋಹಣ ನಡೆಸಲಾಯಿತು.
ರಾಮಯ್ಯ ಪರದೇಶಿಕ ಸ್ವಾಮೀಜಿ ಸಂಜೆ 6 ಕ್ಕೆ ಬಲಿ ಪೂಜೆ ಹಾಗೂ ರಥಕ್ಕೆ ಪೂಜೆ ಸಲ್ಲಿಸಿ ಕದಳೀ ಛೇದನ ಮಾಡಿ ರಥೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಭಕ್ತರು ಹರ್ಷೋದ್ಗಾರದಿಂದ ಜೈಕಾರ ಹಾಕುತ್ತಾ ರಥವನ್ನು ಎಳೆದು ಹಣ್ಣು ಧವನ ಎಸೆಯುವ ಮೂಲಕ ಭಕ್ತಿ ಸಮರ್ಪಿಸಿದರು. ಗ್ರಾಮಸ್ಥರು ರಥ ಸಾಗುವ ಮಾರ್ಗದುದ್ದಕ್ಕೂ ತಳಿರು ತೋರಣಗಳನ್ನು ಕಟ್ಟಿ ವಿದ್ಯುತ್ ದೀಪಾಲಂಕಾರಗಳನ್ನು ಮಾಡಿ ರಂಗೋಲಿ ಹಾಕಿ ಸ್ವಾಗತಿಸಿದರು. ಡೊಳ್ಳು ಕುಣಿತ ಹಾಗೂ ಮಂಗಳ ವಾಧ್ಯ ಉತ್ಸವಕ್ಕೆ ಮೆರುಗು ನೀಡಿದವು. ರಥವು ರಂಗನಾಥಸ್ವಾಮಿ ದೇವಾಲಯದಿಂದ ಚಾಮುಂಡೇಶ್ವರಿ ದೇವಾಲಯದವರೆಗೆ ಎಳೆದು ನಂತರ ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು.
ಅಲ್ಲಲ್ಲಿ ಕೆಲವು ದಾನಿಗಳು ನೀರು, ಮಜ್ಜಿಗೆ, ಪಾನಕ ಸೇರಿದಂತೆ ಪುಳಿಯೊಗರೆ, ಮೊಸರನ್ನವನ್ನು ಭಕ್ತರಿಗೆ ಹಂಚಿದರು.