ಆ್ಯಪ್ನಗರ

ಪ್ರೀತಿಸಿದ ಯುವತಿಯನ್ನು ಕರೆದುಕೊಂಡು ಹೋದ ಯುವಕನ ತಾಯಿಗೆ ಕಟ್ಟಿಹಾಕಿ ಥಳಿತ; ರಾಣೆಬೆನ್ನೂರಿನಲ್ಲಿ ಅಮಾನುಷ ಘಟನೆ

ಅನ್ಯಜಾತಿಯ ಯುವತಿಯನ್ನು ಪ್ರೀತಿಸಿ ಪರಾರಿಯಾದ ಯುವಕನ ತಾಯಿಯನ್ನು ಯುವತಿಯ ಮನೆಯವರು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಾವೇರಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಮೂರು ಮಂದಿಯನ್ನು ಬಂಧಿಸಲಾಗಿದೆ ಎಂದು ಹಾವೇರಿ ಎಸ್ಪಿ ಅಂಶು ಕುಮಾರ್ ತಿಳಿಸಿದ್ದಾರೆ. ಗಾಯಾಳು ಮಹಿಳೆ ದಾವಣಗೆರೆ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ರಾಣೆಬೆನ್ನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ ಮಾಸುವ ಮುನ್ನವೇ ಇದೀಗ ಹಾವೇರಿ ಜಿಲ್ಲೆಯಿಂದಲೂ ಅಂತಹದ್ದೇ ಅಮಾನುಷ ಘಟನೆ ವರದಿಯಾಗಿದೆ. ರಾಣೆಬೆನ್ನೂರು ತಾಲೂಕಿನ ಅರೇ ಮಲ್ಲಾಪುರ ಗ್ರಾಮದಲ್ಲಿ ಪ್ರೀತಿಸಿದ ಅನ್ಯ ಜಾತಿಯ ಯುವತಿಯನ್ನು ಕರೆದುಕೊಂಡು ಹೋಗಿದ್ದಾನೆ ಎಂದು ಆರೋಪಿಸಿ ಯುವಕನ ತಾಯಿ‌ಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ.
Vijaya Karnataka Web women assualt
ಪ್ರಾತಿನಿಧಿಕ ಚಿತ್ರ


ಗ್ರಾಮದ 50 ವರ್ಷದ ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ. ಹನುಮವ್ವಳ ಮಗ ಮಂಜುನಾಥ ಯುವತಿಯನ್ನ ಕರೆದುಕೊಂಡು ಹೋಗಿದ್ದಾನೆ ಎಂದು ಆರೋಪಿಸಿ ಚಂದ್ರಪ್ಪ, ಗಂಗಪ್ಪ,ಗುತ್ತೆವ್ವ ಹಲ್ಲೆ ಮಾಡಿದ್ದಾರ ಎಂದು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಎಲ್ಲಾ 12 ಆರೋಪಿಗಳಿಗೆ ಜಾಮೀನು! ಹೂಮಾಲೆ ಹಾಕಿ ಸ್ವಾಗತ

ಘಟನೆ ವಿವರ

ಗ್ರಾಮದ ಯುವಕ ಮಂಜುನಾಥ ಎಂಬಾತ ಅನ್ಯ ಜಾತಿಯ ಯುವತಿಯನ್ನು ಕರೆದುಕೊಂಡು ಹೋಗಿದ್ದಾನೆ ಎಂದು ತಿಳಿದು ತಾಯಿ ಕರೆದುಕೊಂಡು ಬಂದು ಆತನ ತಾಯಿಯ ಮೇಲೆ ಹಲ್ಲೆ ಮಾಡಿದ್ದಾರೆ. ಯುವತಿಯ ಮನೆವರಾದ ಚಂದ್ರಪ್ಪ, ಗಂಗಪ್ಪ ಮತ್ತು ಗುತ್ತೆವ್ವ ಎಂಬುವರು ಸೇರಿ , ಮಂಜುನಾಥನ‌ ತಾಯಿಯಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಗಾಯಗೊಂಡ ಮಹಿಳೆ ಹನುಮವ್ವಳನ್ನ ತಾಲೂಕುನ ಆಸ್ಪತ್ರೆಗೆ ಸೇರಿ ಚಿಕಿತ್ಸೆ ಕೊಡಿಸಲಾಗಿದೆ.

ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಾಲ್ಕು ದಿನಗಳ ಹಿಂದೆ ನಡೆದ ಘಟನೆಯಾಗಿದ್ದು ಹುಡುಗ ಮತ್ತು ಯುವತಿಯ ಕಡೆಯಿಂದ ಪ್ರತ್ಯೇಕವಾಗಿ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ಎರಡು ಪ್ರಕರಣ ದಾಖಲಾಗಿವೆ. ‌ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.

ವಂಟಮೂರಿ ಬಳಿಕ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಮಹಿಳೆಯ ಮೇಲೆ ಹಲ್ಲೆ ಆರೋಪ
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾವೇರಿ ಎಸ್ ಪಿ ಅಂಶು ಕುಮಾರ್, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಹಲ್ಲೆಗೊಳಗಾದ ಮಹಿಳೆ ಸುರಕ್ಷಿತವಾಗಿ ಇದ್ದಾದ್ದು ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಪತ್ತೆಯಾಗಿರುವ ಯುವಕ, ಯುವತಿ ಪತ್ತೆ ಮಾಡಲಾಗುತ್ತಿದೆ. ಇಬ್ಬರು ಮೇಜರ್‌ ಇದ್ದು ಪರಸ್ಪರ ಎರಡು ವರ್ಷದಿಂದ ಪ್ರೀತಿ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಈ ಪ್ರಕರಣ ತನಿಖೆ ಹಂತದಲ್ಲಿ ಇದ್ದು ಇದರಲ್ಲಿ ಭಾಗಿಯಾದವರುನ್ನು ಪತ್ತೆ ಹಚ್ಚುತ್ತೆವೆ ಎಂದು ಮಾಹಿತಿ ನೀಡಿದರು.

ವಂಟಮೂರಿಯಲ್ಲಿ ಏನಾಗಿತ್ತು?


ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಪ್ರಕರಣ 2023ರ ಡಿಸಂಬರ್ 12ರಂದು ನಡೆದಿತ್ತು.

ಪ್ರೀತಿಸಿದ ಯುವಕ ಮತ್ತು ಯುವತಿ ಮನೆ ಬಿಟ್ಟು ಹೋದರು ಎಂಬ ಕಾರಣಕ್ಕೆ ರೊಚ್ಚಿಗೆದ್ದ ಯುವತಿಯ ಸಂಬಂಧಿಕರು ಯುವಕನ ಮನೆಗೆ ನುಗ್ಗಿ ಕಲ್ಲು, ಇಟ್ಟಿಗೆ, ಬಡಿಗೆಗಳಿಂದ ಕೈಗೆ ಸಿಕ್ಕಿದ್ದನ್ನು ಧ್ವಂಸಗೊಳಿಸಿದ್ದರು. ಬಳಿಕ ಯುವಕನ ತಾಯಿಯನ್ನು ಮನೆಯಿದ ಹೊರಗೆಳೆದು ಹೊಡೆದಿದ್ದರು. ಬಟ್ಟೆ ಹರಿದು ಬೆತ್ತಲು ಮಾಡಿ ರಸ್ತೆಯಲ್ಲಿ ಎಳೆದೊಯ್ದು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದರು.

ಈ ಅಮಾನವೀಯ ಘಟನೆ ಇಡೀ ರಾಜ್ಯಾದ್ಯಂತ ಸುದ್ದಿಯಾಗಿ ಅನೇಕ ಕಡೆಗಳಲ್ಲಿ ರಾಜಕೀಯ ಪಕ್ಷಗಳು ಮತ್ತು ವಿವಿಧ ಸಂಘಟನೆಗಳ ವತಿಯಿಂದ ಪ್ರತಿಭಟನೆಗಳು ನಡೆದಿದ್ದವು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಆಡಳಿತಾರೂಢ ಕಾಂಗ್ರೆಸ್ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಹೈಕೋರ್ಟ್ ನಲ್ಲಿ ಸ್ವಯಂಪ್ರೇರಿತ ದೂರು ದಾಖಲಾದ ಬಳಿಕ ಪ್ರಕರಣವನ್ನು ಸಿಐಡಿಗೆ ವಹಿಸಲಾಯಿತು.


ಸಂತ್ರಸ್ತ ಮಹಿಳೆಗೆ ಜಿಲ್ಲಾಸ್ಪತ್ರೆಯಲ್ಲಿಿ ಚಿಕಿತ್ಸೆ ನೀಡಲಾಗಿತ್ತು. ಮನೆ ಬಿಟ್ಟು ಹೋಗಿದ್ದ ಪ್ರೇಮಿಗಳು ವಿವಾಹ ಆದರು. ಮತ್ತೊಂದೆಡೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ 12 ಆರೋಪಿಗಳು ಏಪ್ರಿಲ್ 24ರಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಲೇಖಕರ ಬಗ್ಗೆ
ಗಣೇಶ್ ಪ್ರಸಾದ್ ಕುಂಬ್ಳೆ
ವಿಜಯ ಕರ್ನಾಟಕದಲ್ಲಿ ಡಿಜಿಟಲ್ ಪತ್ರಕರ್ತ. ಪತ್ರಿಕೋದ್ಯಮದಲ್ಲಿ 15 ವರ್ಷಗಳ ಅನುಭವ. ಓದುವಿಕೆ, ಬರೆಯುವಿಕೆ, ಯಕ್ಷಗಾನದಲ್ಲಿ ಆಸಕ್ತಿ. ಸಮಯ ಸಿಕ್ಕಾಗ ಚೆಸ್, ಕ್ರಿಕೆಟ್, ಶಟಲ್ ಆಡುವುದು, ಪ್ರವಾಸ, ಚಾರಣ ಮಾಡುವುದು ನೆಚ್ಚಿನ ಹವ್ಯಾಸಗಳು. ಶಿವರಾಮ ಕಾರಂತ ಮತ್ತು ಪೂರ್ಣಚಂದ್ರ ತೇಜಸ್ವಿಯವರ ಬರಹಳೆಂದರೆ ಅಚ್ಚಮೆಚ್ಚು. ರಾಜಕೀಯ, ಕ್ರೀಡೆ, ಮಾನವೀಯ ಸಂವೇದಿ ಲೇಖನಗಳು, ವ್ಯಕ್ತಿಚಿತ್ರ, ನುಡಿಚಿತ್ರ, ಲಲಿತ ಪ್ರಬಂಧಗಳನ್ನು ಬರೆಯುವುದರಲ್ಲಿ ಆಸಕ್ತಿ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ