ಆ್ಯಪ್ನಗರ

ರಾಜ್ಯದ ಪ್ರವಾಸೋದ್ಯಮ, ಸಾಂಸ್ಕೃತಿಕ ಅಭಿವೃದ್ಧಿ ಕುರಿತಂತೆ ಸಿಎಂ ಸಭೆ: ಸುಧಾಮೂರ್ತಿ ಭಾಗಿ

ಇನ್ಫೋಸಿಸ್‌ ಸುಧಾಮೂರ್ತಿ ಸೇರಿದಂತೆ ಕೆಲ ಪ್ರಮುಖರ ಜತೆ ಸಿಎಂ ಯಡಿಯೂರಪ್ಪ ಸಭೆ ನಡೆಸಿದ್ದಾರೆ. ಸಂಪುಟ ರಚನೆಯಾಗದಿದ್ದರೂ ಸಿಎಂ ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಹಲವು ಸಭೆ ನಡೆಸುತ್ತಲೇ ಇದ್ದಾರೆ.

Vijaya Karnataka Web 4 Aug 2019, 11:33 am
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಕುರಿತಂತೆ ಸಭೆ ನಡೆಸಿದರು.
Vijaya Karnataka Web yediyurappa sudhamurthy


ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಸುಧಾಮೂರ್ತಿ, ಭಾರತೀಯ ವಿದ್ಯಾಭವನದ ನಿರ್ದೇಶಕ ಹೆಚ್. ಎನ್. ಸುರೇಶ್, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೀನಾರಾಯಣ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಕಾರ್ಯದರ್ಶಿ ಶಿವಯೋಗಿ ಕಳಸದ್, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಒಂದು ವಾರಕ್ಕೂ ಹೆಚ್ಚು ಸಮಯವಾಗಿದೆ. ಆದರೆ, ಇನ್ನೂ ಸಂಪುಟ ವಿಸ್ತರಣೆಯಾಗಿಲ್ಲ. ಇದು ವಿರೋಧ ಪಕ್ಷಗಳ ಟೀಕೆಗೆ ಕಾರಣವಾಗಿದೆ. ಸಿಎಂ ಒಬ್ಬರೇ ಅಧಿಕಾರಿಗಳ ಜತೆಗೆ ಸಭೆ ನಡೆಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವವೋ ಏಕಚಕ್ರಾಧಿಪತ್ಯವೋ ಎಂದು ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಯಡಿಯೂರಪ್ಪ ವಿರುದ್ಧ ಟೀಕೆಗಳನ್ನು ಮಾಡಿದ್ದರು.

ಆದರೆ, ಸಿಎಂ ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ, ತಮ್ಮ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುತ್ತಿದ್ದು ಶೀಘ್ರದಲ್ಲೇ ಸಚಿವ ಸಂಪುಟ ರಚನೆಯಾಗುವ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ