ಆ್ಯಪ್ನಗರ

ಮಳೆ ಕೊರತೆ, ಮೋಡ ಬಿತ್ತನೆ ಬಗ್ಗೆ ಸದ್ಯಕ್ಕೆ ಯೋಚನೆ ಇಲ್ಲ: ಕೃಷ್ಣ ಬೈರೇಗೌಡ

ರಾಜ್ಯದ ಸುಮಾರು 800 ಕಡೆಗಳಲ್ಲಿ ನೀರಿನ ಕೊರತೆ ಇದೆ. ಸರ್ಕಾರ ಟ್ಯಾಂಕರ್ ಮೂಲಕ, ಬೋರ್ ವೆಲ್ ಮೂಲಕ ನೀರು ಹರಿಸುವ ಕೆಲಸ ಮಾಡುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆಯಾದರೂ ಮೋದ ಬಿತ್ತನೆಯ ಬಗ್ಗೆ ಸದ್ಯ ಯೋಚನೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು. ಮುಂಗಾರು ತಡವಾಗಿ ಆಗಮಿಸಿದ್ದು, ಕರಾವಳಿಯಲ್ಲಿ ಮಳೆ ಆರಂಭವಾಗಿದೆ, ಅದೇ ರೀತಿ ಕಲ್ಯಾಣ ಕರ್ನಾಟಕ ಭಾಗದಲ್ಲೂ ಮಳೆ ಚುರುಕಾಗುವ ಸಾಧ್ಯತೆ ಇದೆ ಎಂದರು.

ಹೈಲೈಟ್ಸ್‌:

  • ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾದರೂ ಮೋಡ ಬಿತ್ತನೆ ಬಗ್ಗೆ ಸದ್ಯಕ್ಕೆ ಯೋಚನೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
  • ಜೂನ್ ತಿಂಗಳಲ್ಲಿ ಮಳೆಯ ಸಮಸ್ಯೆ ಇದೆ. ಎಲ್ಲಾ ಜಿಲ್ಲೆಯಲ್ಲಿ ಮಳೆಯ ಕೊರತೆ ಇದೆ. ಮುಂಗಾರು ತಡವಾಗಿ ಪ್ರವೇಶ ಆಗಿದೆ. ಚಂಡಮಾರುತ ಪರಿಣಾಮ ತೇವಾಂಶ ಕೊರತೆಯಿಂದ ಈ ರೀತಿ ಆಗಿದೆ ಎಂದರು.
  • ಉಡುಪಿ ಮಂಗಳೂರು ಹಾಗೂ ಕಾರವಾರದಲ್ಲಿ ವಾಡಿಕೆಯಂತೆ ಮಳೆಯಾಗಿದೆ. ಈ ಮೂಲಕ ಆ ಭಾಗದಲ್ಲಿ ಮುಂಗಾರು ಪ್ರವೇಶ ಆಗಿದೆ. ನಾಳೆಯಿಂದ ಕಲ್ಯಾಣ ಕರ್ನಾಟಕ ‌ಭಾಗದಲ್ಲಿ ಮಳೆ ಚುರುಕಾಗಬಹುದು ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ ಎಂದು ತಿಳಿಸಿದರು.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Krishna Bhyregowda
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾದರೂ ಮೋಡ ಬಿತ್ತನೆ ಬಗ್ಗೆ ಸದ್ಯಕ್ಕೆ ಯೋಚನೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ವಿಕಾಸಸೌಧದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ ತಿಂಗಳಲ್ಲಿ ಮಳೆಯ ಸಮಸ್ಯೆ ಇದೆ. ಎಲ್ಲಾ ಜಿಲ್ಲೆಯಲ್ಲಿ ಮಳೆಯ ಕೊರತೆ ಇದೆ. ಮುಂಗಾರು ತಡವಾಗಿ ಪ್ರವೇಶ ಆಗಿದೆ. ಚಂಡಮಾರುತ ಪರಿಣಾಮ ತೇವಾಂಶ ಕೊರತೆಯಿಂದ ಪರಿಣಾಮ ಆಗಿದೆ ಎಂದರು.

ಮುಂಗಾರು ಮಳೆಯಿಲ್ಲದೆ ಬಾಡಿದ ಕೃಷಿ, ವರುಣನ ಕೃಪೆಗೆ ಕಾದಿದೆ ತುಮಕೂರು

ಹವಾಮಾನ ಇಲಾಖೆಯ ತಜ್ಞರು ನೀಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗುತ್ತಿದೆ. ಉಡುಪಿ ಮಂಗಳೂರು ಹಾಗೂ ಕಾರವಾರದಲ್ಲಿ ವಾಡಿಕೆಯಂತೆ ಮಳೆಯಾಗಿದೆ. ಈ ಮೂಲಕ ಆ ಭಾಗದಲ್ಲಿ ಮುಂಗಾರು ಪ್ರವೇಶ ಆಗಿದೆ. ನಾಳೆಯಿಂದ ಕಲ್ಯಾಣ ಕರ್ನಾಟಕ ‌ಭಾಗದಲ್ಲಿ ಮಳೆ ಚುರುಕಾಗಬಹುದು ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ ಎಂದು ತಿಳಿಸಿದರು.

ಆದರೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ವಾಡಿಕೆಗಿಂದ ಹೆಚ್ಚು ಆಗಿತ್ತು. ಇವಾಗ ಕೊರತೆ ನೀಗಿಸುವ ರೀತಿಯಲ್ಲಿ ಮಳೆ ಆಗಬಹುದು ಎಂಬ ನಿರೀಕ್ಷೆ ಇದೆ. ಹೀಗಿದ್ದರೂ ಮಳೆ ಕೊರತೆ ಬಗ್ಗೆ ಸರ್ಕಾರ ನಿಗಾ ವಹಿಸುತ್ತಿವೆ. ಕೆಲವು ಜಿಲ್ಲೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ರಿವ್ಯೂ ಸಭೆ ನಡೆಸುತ್ತೇನೆ ಎಂದರು.

ಬರಗಾಲ ಘೋಷಣೆ ಮಾಡಬೇಕಾ ಬೇಡವೋ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ 800 ಕಡೆಗಳಲ್ಲಿ ನೀರಿನ ಕೊರತೆ ಇದೆ. ಕರಾವಳಿ ಭಾಗದಲ್ಲಿ ಇದು ವರದಿಯಾಗಿದೆ‌. ಜನರಿಗೆ ಅನಾನುಕೂಲ ಆಗದಂತೆ ಈ ಪ್ರದೇಶಗಳಲ್ಲಿ ಟ್ಯಾಂಕರ್ ಹಾಗೂ ಬೋರ್ ವೆಲ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ