ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಎದುರಾದರೂ ಮೋಡ ಬಿತ್ತನೆ ಬಗ್ಗೆ ಸದ್ಯಕ್ಕೆ ಯೋಚನೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ವಿಕಾಸಸೌಧದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ ತಿಂಗಳಲ್ಲಿ ಮಳೆಯ ಸಮಸ್ಯೆ ಇದೆ. ಎಲ್ಲಾ ಜಿಲ್ಲೆಯಲ್ಲಿ ಮಳೆಯ ಕೊರತೆ ಇದೆ. ಮುಂಗಾರು ತಡವಾಗಿ ಪ್ರವೇಶ ಆಗಿದೆ. ಚಂಡಮಾರುತ ಪರಿಣಾಮ ತೇವಾಂಶ ಕೊರತೆಯಿಂದ ಪರಿಣಾಮ ಆಗಿದೆ ಎಂದರು.
ಹವಾಮಾನ ಇಲಾಖೆಯ ತಜ್ಞರು ನೀಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗುತ್ತಿದೆ. ಉಡುಪಿ ಮಂಗಳೂರು ಹಾಗೂ ಕಾರವಾರದಲ್ಲಿ ವಾಡಿಕೆಯಂತೆ ಮಳೆಯಾಗಿದೆ. ಈ ಮೂಲಕ ಆ ಭಾಗದಲ್ಲಿ ಮುಂಗಾರು ಪ್ರವೇಶ ಆಗಿದೆ. ನಾಳೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಚುರುಕಾಗಬಹುದು ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ ಎಂದು ತಿಳಿಸಿದರು.
ಆದರೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ವಾಡಿಕೆಗಿಂದ ಹೆಚ್ಚು ಆಗಿತ್ತು. ಇವಾಗ ಕೊರತೆ ನೀಗಿಸುವ ರೀತಿಯಲ್ಲಿ ಮಳೆ ಆಗಬಹುದು ಎಂಬ ನಿರೀಕ್ಷೆ ಇದೆ. ಹೀಗಿದ್ದರೂ ಮಳೆ ಕೊರತೆ ಬಗ್ಗೆ ಸರ್ಕಾರ ನಿಗಾ ವಹಿಸುತ್ತಿವೆ. ಕೆಲವು ಜಿಲ್ಲೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ರಿವ್ಯೂ ಸಭೆ ನಡೆಸುತ್ತೇನೆ ಎಂದರು.
ಬರಗಾಲ ಘೋಷಣೆ ಮಾಡಬೇಕಾ ಬೇಡವೋ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ 800 ಕಡೆಗಳಲ್ಲಿ ನೀರಿನ ಕೊರತೆ ಇದೆ. ಕರಾವಳಿ ಭಾಗದಲ್ಲಿ ಇದು ವರದಿಯಾಗಿದೆ. ಜನರಿಗೆ ಅನಾನುಕೂಲ ಆಗದಂತೆ ಈ ಪ್ರದೇಶಗಳಲ್ಲಿ ಟ್ಯಾಂಕರ್ ಹಾಗೂ ಬೋರ್ ವೆಲ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಹವಾಮಾನ ಇಲಾಖೆಯ ತಜ್ಞರು ನೀಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗುತ್ತಿದೆ. ಉಡುಪಿ ಮಂಗಳೂರು ಹಾಗೂ ಕಾರವಾರದಲ್ಲಿ ವಾಡಿಕೆಯಂತೆ ಮಳೆಯಾಗಿದೆ. ಈ ಮೂಲಕ ಆ ಭಾಗದಲ್ಲಿ ಮುಂಗಾರು ಪ್ರವೇಶ ಆಗಿದೆ. ನಾಳೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಚುರುಕಾಗಬಹುದು ಎಂದು ಹವಾಮಾನ ಇಲಾಖೆ ತಜ್ಞರು ಹೇಳಿದ್ದಾರೆ ಎಂದು ತಿಳಿಸಿದರು.
ಆದರೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ವಾಡಿಕೆಗಿಂದ ಹೆಚ್ಚು ಆಗಿತ್ತು. ಇವಾಗ ಕೊರತೆ ನೀಗಿಸುವ ರೀತಿಯಲ್ಲಿ ಮಳೆ ಆಗಬಹುದು ಎಂಬ ನಿರೀಕ್ಷೆ ಇದೆ. ಹೀಗಿದ್ದರೂ ಮಳೆ ಕೊರತೆ ಬಗ್ಗೆ ಸರ್ಕಾರ ನಿಗಾ ವಹಿಸುತ್ತಿವೆ. ಕೆಲವು ಜಿಲ್ಲೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ರಿವ್ಯೂ ಸಭೆ ನಡೆಸುತ್ತೇನೆ ಎಂದರು.
ಬರಗಾಲ ಘೋಷಣೆ ಮಾಡಬೇಕಾ ಬೇಡವೋ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ 800 ಕಡೆಗಳಲ್ಲಿ ನೀರಿನ ಕೊರತೆ ಇದೆ. ಕರಾವಳಿ ಭಾಗದಲ್ಲಿ ಇದು ವರದಿಯಾಗಿದೆ. ಜನರಿಗೆ ಅನಾನುಕೂಲ ಆಗದಂತೆ ಈ ಪ್ರದೇಶಗಳಲ್ಲಿ ಟ್ಯಾಂಕರ್ ಹಾಗೂ ಬೋರ್ ವೆಲ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದರು.