ಮಡಿಕೇರಿ: ಮಾ.30 ರಿಂದ ಏ.12ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ನಿಯಮಬಾಹಿರ ಚಟುವಟಿಕೆ ಇಲ್ಲದೇ ಸುಗಮವಾಗಿ ಪರೀಕ್ಷೆ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿಷೇಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳು: ನಗರದ ಸರಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪ್ರೌಢಶಾಲೆ, ನಾಪೋಕ್ಲು ಸರಕಾರಿ ಪದವಿ ಪೂರ್ವ ಕಾಲೇಜು, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು, ಮೂರ್ನಾಡು ಪ್ರೌಢಶಾಲೆ, ಸಿದ್ದಾಪುರ ಪ್ರೌಢಶಾಲೆ, ಸಂಪಾಜೆ ಪ್ರೌಢಶಾಲೆ, ಮಡಿಕೇರಿಯ ಸಂತ ಜೋಸೆಫರ ಪ್ರೌಢಶಾಲೆ.
ವಿರಾಜಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜು, ವಿರಾಜಪೇಟೆ ಸಂತ ಅನ್ನಮ್ಮ ಪ್ರೌಢಶಾಲೆ, ಗೋಣಿಕೊಪ್ಪ ಸರಕಾರಿ ಪ್ರೌಢಶಾಲೆ, ಗೋಣಿಕೊಪ್ಪಲು ಪ್ರೌಢಶಾಲೆ, ಪೊನ್ನಂಪೇಟೆ ಸರಕಾರಿ ಪದವಿ ಪೂರ್ವ ಕಾಲೇಜು, ಶ್ರೀಮಂಗಲ ಪದವಿ ಪೂರ್ವ ಕಾಲೇಜು, ಪಾಲಿಬೆಟ್ಟ ಸರಕಾರಿ ಪ್ರೌಢಶಾಲೆ, ತಿತಿಮತಿಯ ಸರ್ಕಾರಿ ಪ್ರೌಢಶಾಲೆ.
ಸೋಮವಾರಪೇಟೆಯ ಸರಕಾರಿ ಪದವಿ ಪೂರ್ವ ಕಾಲೇಜು, ಓ.ಎಲ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕುಶಾಲನಗರ ಫಾತಿಮಾ ಪ್ರೌಢಶಾಲೆ, ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಸೇಕ್ರೇಡ್ ಹಾರ್ಟ್ ಪ್ರೌಢಶಾಲೆ, ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜು, ಸುಂಟಿಕೊಪ್ಪ ಸಂತ ಮೇರಿಸ್ ಪ್ರೌಢಶಾಲೆ, ಹೆಬ್ಬಾಲೆ ಪದವಿ ಪೂರ್ವ ಕಾಲೇಜು, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ನೆಲ್ಯಹುದಿಕೇರಿ ಸರಕಾರಿ ಪ್ರೌಢಶಾಲೆ.