Please enable javascript.ನಾನಾ ಕಡೆ ಸಾಮೂಹಿಕ ಮದುವೆ - ನಾನಾ ಕಡೆ ಸಾಮೂಹಿಕ ಮದುವೆ - Vijay Karnataka

ನಾನಾ ಕಡೆ ಸಾಮೂಹಿಕ ಮದುವೆ

ವಿಕ ಸುದ್ದಿಲೋಕ 26 Feb 2016, 6:09 am
Subscribe

ತಾಲೂಕಿನ ಅಗಳಕೇರಾ ಗ್ರಾಮದ ಶ್ರೀ ಸಿದ್ದರಾಮೇಶ್ವರ ಸೇವಾ ಸಮಿತಿ ಆಶ್ರಯದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಮದುವೆ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ದುರ್ಗಾದೇವಿಗೆ ಅಭಿಷೇಕ ಕುಂಕುಮಾರ್ಚನೆ, ಮಹಾಮಂಗಳಾರತಿ, ಗಂಗೆಯ ಸ್ನಾನ, ಕುಂಭ ಕಳಸದೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಶ್ರೀ ಶರಣಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ನಾನಾ ಕಡೆ ಸಾಮೂಹಿಕ ಮದುವೆ
ಕೊಪ್ಪಳ; ತಾಲೂಕಿನ ಅಗಳಕೇರಾ ಗ್ರಾಮದ ಶ್ರೀ ಸಿದ್ದರಾಮೇಶ್ವರ ಸೇವಾ ಸಮಿತಿ ಆಶ್ರಯದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಮದುವೆ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ದುರ್ಗಾದೇವಿಗೆ ಅಭಿಷೇಕ ಕುಂಕುಮಾರ್ಚನೆ, ಮಹಾಮಂಗಳಾರತಿ, ಗಂಗೆಯ ಸ್ನಾನ, ಕುಂಭ ಕಳಸದೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಶ್ರೀ ಶರಣಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ನಡಗಡ್ಡಿ ಮಠದ ಶ್ರೀ ಶಾಂತಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು. ಮುಖಂಡರಾದ ತಿಮ್ಮಪ್ಪ ವಡ್ಡರ, ವೆಂಕಟೇಶ ಕಂಪಸಾಗರ, ಮಂಜುನಾಥ ಕನಕಗಿರಿ, ಸಣ್ಣ ಹುಲಗಪ್ಪ ವಡ್ಡರ, ರಾಮಣ್ಣ ಹುಣಸಿಹಾಳ, ಬಸವರಾಜ ವಡ್ಡರ ಇದ್ದರು. ದೇವರಾಜ ಗಡಾದ ನಿರ್ವಹಿಸಿದರು.

ಹೊತಟ್ನಾಳ್: ತಾಲೂಕಿನ ಹೊರತಟ್ನಾಳ ಗ್ರಾಮದಲ್ಲಿ ಈಶ್ವರ ಹಾಗೂ ನಂದಿಯ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಇತ್ತೀಚೆಗೆ ಜರುಗಿತು. ಕುಂಭ ಹೊತ್ತ ಮಹಿಳೆಯರು, ಡೊಳ್ಳುನಗಾರಿ ಸಮೇತ ಗಂಗೆಪೂಜೆಮಾಡಿದರು. ಸಕಲ ವಾದ್ಯಗಳೊಂದಿಗೆ ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಲಾಯಿತು. ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಜರುಗಿದವು.

ಕೆಪಿಎಲ್25ಫೋಟೊ03 ಕೊಪ್ಪಳ ತಾಲೂಕಿನ ಅಗಳಕೇರಾ ಗ್ರಾಮದಲ್ಲಿ ಸಾಮೂಹಿಕ ಮದುವೆ ಕಾರ್ಯಕ್ರಮ ಇತ್ತೀಚೆಗೆ ಜರುಗಿದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ