ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಬಸ್ಗಾಗಿ ಪರದಾಟ! ತಾವರಗೇರಾದಲ್ಲಿ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ
Vijaya Karnataka Web 19 Jul 2022, 5:38 pm
Embed
Press CTRL+C to copyX
<iframe src="//tvid.in/1x5it45996/lang?autoplay=false" style="height: 100%; width: 100%; max-height: 100%; max-width: 100%; visibility: visible;" border="0" frameBorder="0" seamless="" scrolling="no" allowfullscreen="true" mozallowfullscreen="true" allowtransparency="true"></iframe>
ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಶಾಲಾ-ಕಾಲೇಜು ಸಮಯಕ್ಕೆ ಸರಿಯಾಗಿ ಬಸ್ಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಅಲ್ಲಲ್ಲಿ ನಿತ್ಯ ಪ್ರತಿಭಟನೆಗಳು ನಡೆಯುತ್ತಿರುತ್ತವೆ. ಈ ಮೊದಲು ಕುಷ್ಟಗಿ ತಾಲೂಕಿನ ಬಾದಿಮನಾಳ ಕ್ರಾಸ್ ಬಳಿ ವಿದ್ಯಾರ್ಥಿಗಳು ಬಸ್ ತಡೆದು ಬಸ್ ಮುಂದೆ ಪಾಠ ಮಾಡಿದ್ದರು. ಈಗ ಕುಷ್ಟಗಿ ತಾಲೂಕಿನ ಕೆಲವು ಹಳ್ಳಿಯ ವಿದ್ಯಾರ್ಥಿಗಳು ಮಂಗಳವಾರ ದಿಢೀರ್ ಪ್ರತಿಭಟನೆ ಮಾಡಿದ ಘಟನೆ ಕುಷ್ಟಗಿ ತಾಲೂಕಿನ ತಾವರಗೇರಾದಲ್ಲಿ ನಡೆದಿದೆ.
ತಾವರಗೇರಾ ಬಸ್ ನಿಲ್ದಾಣದ ಬಳಿಯಲ್ಲಿ ಗ್ರಾಮೀಣ ಭಾಗಕ್ಕೆ ಬಸ್ ಬಿಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ಮಾಡಿದರು. ಕುಷ್ಟಗಿ ತಾಲೂಕಿನ ತಾವರಗೆರಾ ಪಟ್ಟಣಕ್ಕೆ ಗ್ರಾಮೀಣ ಭಾಗದಿಂದ ಬರುವ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಇಲ್ಲ ಎಂದು ದಿಢೀರನೇ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ತಾವರಗೇರಾ ಪಟ್ಟಣಕ್ಕೆ ಮ್ಯಾದರಡೊಕ್ಕಿ, ಜೂಲಕುಂಟಿ, ಗರಜನಾಳ, ನಾರಿನಾಳ ಸೇರಿ ಇನ್ನಿತರ ಗ್ರಾಮೀಣ ಭಾಗದ ನೂರಾರು ವಿದ್ಯಾರ್ಥಿಗಳು ಶಾಲಾ ಹಾಗು ಕಾಲೇಜಿಗಾಗಿ ಬರುತ್ತಾರೆ. ಅವರಿಗೆ ಬಸ್ ವ್ಯವಸ್ಥೆ ಸರಿ ಇಲ್ಲದ ಕಾರಣ ಪ್ರತಿಭಟನೆ ನಡೆಸಿದರು. ಎಲ್ಕೆಜಿ, ಯುಕೆಜಿ ವಿದ್ಯಾರ್ಥಿಗಳು ಸೇರಿದಂತೆ ಪದವಿ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಳೆದ ಮೂರು ವರ್ಷಗಳಿಂದ ಇದೇ ಸಮಸ್ಯೆ ಆಗಿದೆ. ಡಿಪೋ ಮ್ಯಾನೇಜರ್ ಹಾಗೂ ಶಾಸಕರು ಕ್ಯಾರೇ ಎಂದಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.