ಆ್ಯಪ್ನಗರ

ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯ ಮಿಮ್ಸ್‌ನ ಪ್ಯಾರಾ ಮೆಡಿಕಲ್ಸ್‌ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಾವಿಗೀಡಾದರು.

Vijaya Karnataka 1 Jun 2018, 5:00 am
ಭಾರತೀನಗರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಂಡ್ಯ ಮಿಮ್ಸ್‌ನ ಪ್ಯಾರಾ ಮೆಡಿಕಲ್ಸ್‌ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಾವಿಗೀಡಾದರು.
Vijaya Karnataka Web the student committed suicide by consuming poison
ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ


ಭವಾನಿ(18) ಮೃತ ವಿದ್ಯಾರ್ಥಿನಿ. ಇವರು ಇಲ್ಲಿಗೆ ಸಮೀಪದ ಲಕ್ಷ್ಮೇಗೌಡನದೊಡ್ಡಿ ಗ್ರಾಮದ ತಮ್ಮಯ್ಯ ಎಂಬುವವರ ಪುತ್ರಿ.

ಮೇ 20ರಂದು ಭಾರತೀ ಕಾಲೇಜು ಬಳಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಮಂಡ್ಯದ ಸಾಂಜೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವಿಗೀಡಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಆದರೆ ಆಕೆಯ ಪೋಷಕರು ಶವ ಪರೀಕ್ಷೆ ಬೇಡವೆಂದು ಪಟ್ಟು ಹಿಡಿದಿದ್ದರಲ್ಲದೆ, ಶವವನ್ನು ತಮ್ಮ ಗ್ರಾಮಕ್ಕೆ ಕೊಂಡೊಯ್ಯುವುದಾಗಿ ತಿಳಿಸಿದ್ದರು. ಈ ಮಧ್ಯ ಆಸ್ಪತ್ರೆಯ ಆಡಳಿತ ಮಂಡಳಿಯವರು ಶವವನ್ನು ಪೋಷಕರಿಗೆ ಹಸ್ತಾಂತರಿಸದೆ ಪೊಲೀಸರಿಗೆ ದೂರು ನೀಡಿದ್ದರು.

ನಂತರ ಮಂಡ್ಯ ಪೊಲೀಸರು ಸ್ಥಳಕ್ಕಾಗಮಿಸಿ ಕೆ.ಎಂ.ದೊಡ್ಡಿ ಠಾಣಾ ಪೊಲೀಸರಿಗೆ ವಿಷಯ ತಿಳಿಸಿದ್ದು, ಕೆ.ಎಂ.ದೊಡ್ಡಿ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಳ್ಳಲು ಮುಂದಾದರು.

ಶವ ಪರೀಕ್ಷೆ ಮಾಡದಂತೆ ಪ್ರತಿಭಟನೆ

ಮೃತಳ ಶವಪರೀಕ್ಷೆ ನಡೆಸದಂತೆ ಪೋಷಕರು ಒತ್ತಾಯಿಸಿದರು. ಆದರೆ, ಪೊಲೀಸರು ಮಧ್ಯ ಪ್ರವೇಶಿಸಿ ಶವವನ್ನು ಮಂಡ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ದು ಮರಣೋತ್ತರ ಪರೀಕ್ಷೆ ನಡೆಸಿದರು. ಪೊಲೀಸರು ಮಧ್ಯಪ್ರವೇಶಿಸಿದ ವೇಳೆ ತಳ್ಳಾಟ ನೂಕಾಟ ನಡೆಯಿತು. ಶವ ಪರೀಕ್ಷೆಗೊಳಪಡಿಸದಂತೆ ಪೋಷಕರು ಪ್ರತಿಭಟನೆಯನ್ನೂ ನಡೆಸಿದರು ಎಂದು ತಿಳಿದುಬಂದಿದೆ.

ವಿದ್ಯಾರ್ಥಿನಿಯು ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದು, ಹೊಟ್ಟೆ ನೋವಿನ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಷಕರು ಕೆ.ಎಂ ದೊಡ್ಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ