Please enable javascript.ಮೈಸೂರು ಮಹಾರಾಣಿ ಕಾಲೇಜು, ವಸತಿ ನಿಲಯಕ್ಕೆ ಸಿದ್ದರಾಮಯ್ಯ ಭೇಟಿ: 150 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯ ಭರವಸೆ - chief minister siddaramaiah visits maharani college and hostel in mysuru - Vijay Karnataka

ಮೈಸೂರು ಮಹಾರಾಣಿ ಕಾಲೇಜು, ವಸತಿ ನಿಲಯಕ್ಕೆ ಸಿದ್ದರಾಮಯ್ಯ ಭೇಟಿ: 150 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯ ಭರವಸೆ

Vijaya Karnataka Web 23 Oct 2023, 3:44 pm
Subscribe

ಮೈಸೂರು ಮಹಾರಾಣಿ ಕಾಲೇಜು, ವಸತಿ ನಿಲಯಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದರು. ಶಿಥಿಲಾವಸ್ಥೆಯಲ್ಲಿರುವ ಕಟ್ಟಡದ ಕಾರಮಗಾರಿಯನ್ನು 150 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸುವ ಭರವಸೆಯನ್ನು ಸಿಎಂ ಈ ವೇಳೆಯಲ್ಲಿ ನೀಡಿದರು.

Siddaramaiah
ಮೈಸೂರು : ಮೈಸೂರು ಮಹಾರಾಣಿ ಕಾಲೇಜು ಮತ್ತು ವಸತಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಣಿ ಕಾಲೇಜಿನ ಕಟ್ಟಡ ಹಾಗೂ ವಸತಿ ನಿಲಯಗಳ ನಿರ್ಮಾಣವನ್ನು 150 ಕೋಟಿ ರೂ. ಗಳಲ್ಲಿ ಕೈಗೊಳ್ಳಲು ಸೂಚನೆ ನೀಡಿರುವುದಾಗಿ ತಿಳಿಸಿದರು.


2000 ವಿದ್ಯಾರ್ಥಿ ಸಾಮರ್ಥ್ಯದ 4 ಕಟ್ಟಡಗಳುಳ್ಳ ವಸತಿ ನಿಲಯವನ್ನು ನಿರ್ಮಿಸಲಾಗುತ್ತಿದೆ. ಒಂದೊಂದು ಕಟ್ಟಡದಲ್ಲಿ ತಲಾ 500 ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಲಾಗುವುದು. ಮಹಾರಾಣಿ ವಿಜ್ಞಾನ ಕಾಲೇಜು ಒಂದು ಭಾಗ ಕುಸಿದಿದ್ದು, ಇದರ ಮುಂದೆ ಇರುವ ಐತಿಹಾಸಿಕ ಕಟ್ಟಡದ ಭಾಗವನ್ನು ಹಾಗೇಯೇ ಉಳಿಸಿಕೊಂಡು ಉಳಿದ ಭಾಗದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದರು.

ಯುವರಾಜ ಹಳೆ ಕಾಲೇಜು ಗೆಳೆಯರೊಂದಿಗೆ ಹರಟಿದ ಸಿದ್ದರಾಮಯ್ಯ; ವಿದ್ಯಾರ್ಥಿ ಜೀವನ ನೆನೆದ ಸಿಎಂ
51 ಕೋಟಿ ರೂ.ಗಳಲ್ಲಿ ವಿಜ್ಞಾನ ಕಾಲೇಜಿನ ಕಟ್ಟಡ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ. 17 ಕೋಟಿ ರೂ. ವೆಚ್ಚದಲ್ಲಿ ಆಟ್ರ್ಸ ಕಾಲೇಜು, 99 ಕೋಟಿ ರೂ.ಗಳಲ್ಲಿ ವಸತಿ ನಿಲಯದ ನಿರ್ಮಾಣ ಸೇರಿದಂತೆ ಒಟ್ಟು 150 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೊಳ್ಳಲು ಉನ್ನತ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ. ಹಿಂದಿನ ಸರ್ಕಾರದವರು ಮೈಸೂರು ಭಾಗದಲ್ಲಿಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ನೀಡಿದ ಕಾರ್ಯಕ್ರಮಗಳಿಂದ ಸ್ಪೂರ್ತಿ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಮಹಾರಾಣಿ ಕಾಲೇಜು ಮತ್ತು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಪರಿಶೀಲಿಸಿ ವಿದ್ಯಾರ್ಥಿನಿಯರ ಜತೆ ಸಂವಾದ ನಡೆಸಿದರು. ಈ ವೇಳೆ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಉಪಸ್ಥಿತರಿದ್ದರು.

ನೂತನ ಕಟ್ಟಡಗಳ ನೀಲನಕ್ಷೆಯನ್ನು ಗಮನಿಸಿದ ಮುಖ್ಯಮಂತ್ರಿಗಳು ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸುವುದೂ ಸೇರಿದಂತೆ ಹಲವು ಸಲಹೆ, ಸೂಚನೆಗಳನ್ನು ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ