Please enable javascript.ಸಾಲ ಬಾಧೆ: ವ್ಯಕ್ತಿ ಆತ್ಮಹತ್ಯೆ - ಸಾಲ ಬಾಧೆ: ವ್ಯಕ್ತಿ ಆತ್ಮಹತ್ಯೆ - Vijay Karnataka

ಸಾಲ ಬಾಧೆ: ವ್ಯಕ್ತಿ ಆತ್ಮಹತ್ಯೆ

ವಿಕ ಸುದ್ದಿಲೋಕ 13 Jul 2015, 5:48 am
Subscribe

ತಾಲೂಕಿನ ಕೈಲಾಂಚ ಗ್ರಾಮದಲ್ಲಿ ಸಾಲ ಬಾಧೆಯಿಂದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಭಾನುವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲ ಬಾಧೆ: ವ್ಯಕ್ತಿ ಆತ್ಮಹತ್ಯೆ
ರಾಮನಗರ: ತಾಲೂಕಿನ ಕೈಲಾಂಚ ಗ್ರಾಮದಲ್ಲಿ ಸಾಲ ಬಾಧೆಯಿಂದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಭಾನುವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಡ್ಡರಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದ ರವಿ (45) ಆತ್ಮಹತ್ಯೆ ಮಾಡಿಕೊಂಡವರು. ಖಾಸಗಿ ಲೇವಾದೇವಿದಾರರು, ಬ್ಯಾಂಕ್ ಮಂತಾದೆಡೆ ರವಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಹಾಲು ಉತ್ಪಾದಕರ ಸಹಕಾರ ಸಂಘ ರೈತರಿಗೆ ನೀಡಬೇಕಿದ್ದ ಸಬ್ಸಿಡಿ ಹಣವನ್ನೂ ದುರುಪಯೋಗಪಡಿಸಿಕೊಂಡಿದ್ದರು. ದಿನದ ಬಡ್ಡಿಗೆ ಸಾಲ ಮಾಡಿದ್ದ ಅವರಿಗೆ ಸಾಲಗಾರರ ಕಾಟ ಅತಿಯಾಗಿತ್ತು ಎನ್ನಲಾಗಿದೆ.

ಭಾನುವಾರ ಬೆಳಗ್ಗೆ ಸಾಲ ಕೊಟ್ಟ ಒಬ್ಬರು ರವಿ ಅವರ ಮನೆ ಬಳಿ ಬಂದು ಗಲಾಟೆ ಮಾಡಿದ್ದರು ಎಂದು ಗೊತ್ತಾಗಿದೆ. ಮನನೊಂದು ನೇಣಿಗೆ ಶರಣಾಗಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ