Please enable javascript.Madhu Bangarappa,ಮಧು ಬಂಗಾರಪ್ಪ ಮಧ್ಯಸ್ಥಿಕೆ ಸಕ್ಸಸ್; ಕಾಂಗ್ರೆಸ್ ಬಂಡಾಯ ಆಭ್ಯರ್ಥಿಗಳ ನಾಮಪತ್ರ ವಾಪಸ್ - congress rebel candidates in soraba withdrawn nomination - Vijay Karnataka

ಮಧು ಬಂಗಾರಪ್ಪ ಮಧ್ಯಸ್ಥಿಕೆ ಸಕ್ಸಸ್; ಕಾಂಗ್ರೆಸ್ ಬಂಡಾಯ ಆಭ್ಯರ್ಥಿಗಳ ನಾಮಪತ್ರ ವಾಪಸ್

Edited byಗಣೇಶ್ ಪ್ರಸಾದ್ ಕುಂಬ್ಳೆ | Vijaya Karnataka Web 24 Apr 2023, 6:30 pm
Subscribe

ಅಂತೂ ಶಿವಮೊಗ್ಗ ಹುಟ್ಟಿಕೊಂಡಿದ್ದ ಬಂಡಾಯವನ್ನು ತಣಿಸುವಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಯಶಸ್ನಿಯಾಗಿದ್ದಾರೆ. ಹಿರಿಯ ಮುಖಂಡರಾದ ರವಿಕುಮಾರ್ ಹಾಗೂ ವಿ.ನಾರಾಯಣ ಸ್ವಾಮಿ ಅವರು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಅವರಿಬ್ಬರ ಜೊತೆ ಮಾತುಕತೆ ನಡೆಸಿದ ಮಧು ಬಂಗಾರಪ್ಪ ಅವರ ಮನವೊಲಿಕೆ ಮಾಡಿ ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮಾಡಿದರು.

ಹೈಲೈಟ್ಸ್‌:

  • ಶಿವಮೊಗ್ಗ ಜಿಲ್ಲೆಯಲ್ಲಿ ಬಂಡಾಯ ಶಮನಗೊಳಿಸಿದ ಮಧು ಬಂಗಾರಪ್ಪ
  • ರವಿಕುಮಾರ್, ವಿ.ನಾರಾಯಣ ಸ್ವಾಮಿ ಬಂಡಾಯ ನಾಮಪತ್ರ ಸಲ್ಲಿಸಿದ್ದರು
  • ಅವರಿಬ್ಬರ ಮನವೊಲಿಸಿ ನಾಮಪತ್ರ ಹಿಂಪಡೆಯುವಲ್ಲಿ ಮಹತ್ವದ ಪಾತ್ರ ವಹಿಸಿದ ಮಧು
SORABA
ಸುದ್ದಿಗೋಷ್ಠಿಯಲ್ಲಿ ಮಧು ಬಂಗಾರಪ್ಪ
ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದಲ್ಲಿನ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳ ಅಸಮಾಧಾನವನ್ನು ತಣಿಸುವಲ್ಲಿ ಮಾಜಿ ಶಾಸಕ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕಗಳ ಅಧ್ಯಕ್ಷ ಮತ್ತು ಕೆಪಿಸಿಸಿ ಪ್ರಣಾಳಿಕೆ ರಚನಾ ಸಮಿತಿ ಉಪಾಧ್ಯಕ್ಷ ಮಧು ಬಂಗಾರಪ್ಪ ಯಶಸ್ವಿಯಾಗಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದಿಂದ ವಿ.ನಾರಾಯಣ ಸ್ವಾಮಿ,ಎಸ್.ರವಿಕುಮಾರ್ ಅವರು ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ಕೊನೆ ಕ್ಷಣದಲ್ಲಿ ಮಾಜಿ ಶಾಸಕ ದಿ.ಕರಿಯಣ್ಣ ಪುತ್ರ ಡಾ.ಶ್ರೀನಿವಾಸ್ ಕರಿಯಣ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಪಕ್ಷದ ನಿರ್ಧಾರಕ್ಕೆ ಅಸಮಾಧಾನಗೊಂಡಿದ್ದ ರವಿಕುಮಾರ್ ಹಾಗೂ ವಿ.ನಾರಾಯಣ ಸ್ವಾಮಿ ಅವರು ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.

Shikaripura Assembly Constituency: ಯಡಿಯೂರಪ್ಪ ಹಿಡಿತ ಬಿಡದ ಶಿಕಾರಿಪುರ ರಾಜ್ಯದ ಪಾಲಿಗೆ ಹೈ ವೋಲ್ಟೇಜ್ ಕ್ಷೇತ್ರ
ಸೋಮವಾರ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಮಧು ಬಂಗಾರಪ್ಪ ಅವರು ಬಂಡಾಯ ಅಭ್ಯರ್ಥಿಗಳ ಸಭೆ ನಡೆಸಿ ಸಂಧಾನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಾಮಪತ್ರ ತೆಗೆದುಕೊಳ್ಳಲು ಕೊನೆಯ ದಿನವಾದ ಇಂದು(ಸೋಮವಾರ)ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದಿದ್ದಾರೆ. ಈ ಮೂಲಕ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿನ ಕಾಂಗ್ರೆಸ್‌ನಲ್ಲಿನ ಗೊಂದಲ,ಭಿನ್ನಾಭಿಪ್ರಾಯ,ಬಂಡಾಯವನ್ನು ತಣಿಸಿದ್ದಾರೆ.

ಸಂಪೂರ್ಣ ಗೊಂದಲ ನಿವಾರಣೆ

ನಂತರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಎಐಸಿಸಿ ಸದಸ್ಯ ಮಧು ಬಂಗಾರಪ್ಪ,ಚುನಾವಣಾ ಸಮಯದಲ್ಲಿ ಹಲವರು ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ.ಪಕ್ಷ ಕಟ್ಟಿ ಬೆಳೆಸಿದ ಹಲವರು ಟಿಕೆಟ್ ನಿರೀಕ್ಷೆ ಪಡ್ತಾರೆ. ಆದರೇ ಕೊಡೋದು ಒಬ್ಬರಿಗೆ ಮಾತ್ರ ಸಾಧ್ಯ. ಹೀಗಾಗಿ ಗ್ರಾಮಾಂತರ ಕ್ಷೇತ್ರದಲ್ಲಿನ ಗೊಂದಲ ನಿವಾರಣೆ ಮಾಡಲಾಗಿದೆ ಎಂದರು.

Timber Illegal Sale : ಹಳೇ ನಾಟ ಸಾಗಣೆ, ಶಾಸಕ ಕುಮಾರ್‌ ಬಂಗಾರಪ್ಪ ವಿರುದ್ಧ ಪ್ರತಿಭಟನೆ
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಟಿಕೆಟ್ ಗಾಗಿ ಹಲವರು ಅರ್ಜಿ ಸಲ್ಲಿಸಿದ್ದರು. ಅಂತಿಮವಾಗಿ ಕಾಂಗ್ರೆಸ್ ನಿಂದ ಡಾ.ಶ್ರೀನಿವಾಸ್ ಕರಿಯಣ್ಣ ಗೆ ಟಿಕೆಟ್ ನೀಡಲಾಗಿದೆ.ಇದರಿಂದ ಪಕ್ಷದ ಮುಖಂಡರಾದ ರವಿಕುಮಾರ್ ಹಾಗೂ ವಿ. ನಾರಾಯಣಸ್ವಾಮಿ ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಪಕ್ಷಕ್ಕೆ ನಷ್ಟ ಉಂಟಾಗುತ್ತೇ ಎಂದು ಡಿಕೆ ಶಿವಕುಮಾರ್ ಮಾತಾನಾಡೋಕೆ ಹೇಳಿದ್ದರು.ಹೀಗಾಗಿ ಕಳೆದ ೨-೩ ದಿನಗಳಿಂದ ಮಾತುಕತೆ ನಡೆಸಿದ್ದೆ.ಇದೀಗ ರವಿಕುಮಾರ್ ಹಾಗೂ ನಾರಾಯಣ ಸ್ವಾಮಿ ನಾಮಪತ್ರ ವಾಪಸ್ ಪಡೆದಿದ್ದಾರೆ ಎಂದರು.

ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಪಣ
ಸಂಘಟನೆಗಾಗಿ ದುಡಿದ ಇಬ್ಬರ ಜೊತೆ ಪಕ್ಷ ಯಾವಾಗಲೂ ಇರುತ್ತದೆ. ಮುಂದಿನ ದಿನಗಳಲ್ಲಿ ಪಕ್ಷ ಅವಕಾಶ ಮಾಡಿಕೊಡುತ್ತೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ನಾಮಪತ್ರ ವಾಪಸ್ ಪಡೆದ ಇಬ್ಬರಿಗೂ ಧನ್ಯವಾದ ಸಲ್ಲಿಸುತ್ತೇನೆ. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಒಟ್ಟಾಗಿ ಹೋಗ್ತೆವೆ ಎಂದರು.

ಹಿಂದೆ ನನ್ನ ತಂದೆ ಎದುರು ಸುಳ್ಳು ಹೇಳುತ್ತಿದ್ದ, ಈಗ ಸೊರಬ‌‌ ಜನರಿಗೂ ಸುಳ್ಳು ಹೇಳುತ್ತಾನೆ: ಬಗರ್ ಹುಕುಂ ವಿಚಾರವಾಗಿ ಕುಮಾರ್ ವಿರುದ್ಧ ಮಧು ಆಕ್ರೋಶ
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಬಯಸಿ ಬರೋಬ್ಬರಿ 11 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಜೊತೆಗೆ 11 ಬಂದಿಯೂ ಸಹ ಗ್ರಾಮಾಂತರ ಕ್ಷೇತ್ರದಲ್ಲಿ ನಿರಂತರವಾಗಿ ಓಡಾಟ ನಡೆಸಿ ಪಕ್ಷ ಸಂಘಟನೆ ನಡೆಸಿದರು. ಆದರೆ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಶ್ರೀನಿವಾಸ್ ಕರಿಯಣ್ಣ ಅವರನ್ನು ಘೋಷಣೆ ಮಾಡಿದ ಬಳಿಕ ಕಾಂಗ್ರೆಸ್ ನಲ್ಲಿ ಬಂಡಾಯ ಭುಗಿಲೆದ್ದಿತ್ತು. ಕಾಂಗ್ರೆಸ್ ನ ಪ್ರಭಾವಿ ನಾಯಕರುಗಳಾದ ವಿ.ನಾರಾಯಣಸ್ವಾಮಿ ಹಾಗೂ ರವಿಕುಮಾರ್ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು.

ಒಟ್ಟಾರೆಯಾಗಿ ಶಿವಮೊಗ್ಗ ಗ್ರಾಮಾಂತರದಲ್ಲಿ ಉದ್ಭವಿಸಿದ್ದ ಕಾಂಗ್ರೆಸ್ ಬಂಡಾಯವನ್ನು ಶಮನ ಮಾಡುವಲ್ಲಿ ಮಧು ಬಂಗಾರಪ್ಪ ಯಶಸ್ವಿಯಾಗಿದ್ದಾರೆ. ಆದರೆ ಇದೇ ವೇಳೆಗೆ ಶಿಕಾರಿಪುರದ ಬಂಡಾಯವನ್ನು ಶಮನ ಮಾಡಲು ಯಾರಿಂದಲೂ ಸಾಧ್ಯವಾಗಿಲ್ಲ. ಹೀಗಾಗಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ನಾಗರಾಜ ಗೌಡ ಅವರು ವಿಜೇಂದ್ರ ಅವರಿಗೆ ಟಕ್ಕರ್ ನೀಡಲು ಎಲ್ಲಾ ರೀತಿಯ ರಣತಂತ್ರಗಳನ್ನು ಸಿದ್ಧಪಡಿಸಿದ್ದಾರೆ ಎನ್ನಲಾಗುತ್ತಿದೆ.
ಗಣೇಶ್ ಪ್ರಸಾದ್ ಕುಂಬ್ಳೆ
ಲೇಖಕರ ಬಗ್ಗೆ
ಗಣೇಶ್ ಪ್ರಸಾದ್ ಕುಂಬ್ಳೆ
ವಿಜಯ ಕರ್ನಾಟಕದಲ್ಲಿ ಡಿಜಿಟಲ್ ಪತ್ರಕರ್ತ. ಪತ್ರಿಕೋದ್ಯಮದಲ್ಲಿ 15 ವರ್ಷಗಳ ಅನುಭವ. ಓದುವಿಕೆ, ಬರೆಯುವಿಕೆ, ಯಕ್ಷಗಾನದಲ್ಲಿ ಆಸಕ್ತಿ. ಸಮಯ ಸಿಕ್ಕಾಗ ಚೆಸ್, ಕ್ರಿಕೆಟ್, ಶಟಲ್ ಆಡುವುದು, ಪ್ರವಾಸ, ಚಾರಣ ಮಾಡುವುದು ನೆಚ್ಚಿನ ಹವ್ಯಾಸಗಳು. ಶಿವರಾಮ ಕಾರಂತ ಮತ್ತು ಪೂರ್ಣಚಂದ್ರ ತೇಜಸ್ವಿಯವರ ಬರಹಳೆಂದರೆ ಅಚ್ಚಮೆಚ್ಚು. ರಾಜಕೀಯ, ಕ್ರೀಡೆ, ಮಾನವೀಯ ಸಂವೇದಿ ಲೇಖನಗಳು, ವ್ಯಕ್ತಿಚಿತ್ರ, ನುಡಿಚಿತ್ರ, ಲಲಿತ ಪ್ರಬಂಧಗಳನ್ನು ಬರೆಯುವುದರಲ್ಲಿ ಆಸಕ್ತಿ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ