ಆ್ಯಪ್ನಗರ

ನನ್ನ ವಿಡಿಯೋ ಬಿಟ್ಟವ್ರೆ, ಯಡಿಯೂರಪ್ಪ ಪುತ್ರನನ್ನು ಕೂಡಲೇ ಅರೆಸ್ಟ್ ಮಾಡಿ : ಈಶ್ವರಪ್ಪ

KS Eshwarappa Old Video Viral : ನನ್ನ ಹಳೆಯ ವಿಡಿಯೋಯವನ್ನು ಮತದಾನಕ್ಕೆ ಎರಡು ದಿನಗಳ ಮುನ್ನ ಬಿ.ವೈ.ರಾಘವೇಂದ್ರ ಕಡೆಯವರು ಬಿಡುಗಡೆ ಮಾಡಿದ್ದಾರೆ. ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದ್ದೇನೆ, ಆಯೋಗ ಸೂಕ್ತ ಕ್ರಮ ತನಿಖೆ ನಡೆಸಿ, ಅವರನ್ನು ಬಂಧಿಸಬೇಕೆಂದು ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.

Authored byಬಾಲರಾಜ್ ತಂತ್ರಿ | Vijaya Karnataka Web 7 May 2024, 8:28 pm

ಹೈಲೈಟ್ಸ್‌:

  • ಬಿಎಸ್‌ವೈ ಪುತ್ರ ರಾಘವೇಂದ್ರನನ್ನು ಅರೆಸ್ಟ್ ಮಾಡಿ ಎಂದು ಆಗ್ರಹಿಸಿದ ಈಶ್ವರಪ್ಪ
  • ಹಳೆಯ ವಿಡಿಯೋದಲ್ಲಿ ರಾಘವೇಂದ್ರನನ್ನು ಬೆಂಬಲಿಸಿ ಎಂದಿದ್ದ ಈಶ್ವರಪ್ಪ
  • ಚುನಾವಣಾ ಆಯೋಗ ಮತ್ತು ಪೊಲೀಸ್ ಆಯುಕ್ತರಿಗೆ ದೂರು ನೀಡಲಿರುವ ಈಶ್ವರಪ್ಪ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web kse
Eshwarappa demanded legal action against BSY son
ಶಿವಮೊಗ್ಗ : ರಾಜ್ಯದ ಎರಡನೇ ಹಂತದ ಚುನಾವಣೆಯ ಭಾಗವಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ದಲ್ಲೂ ಮತದಾನ ಪ್ರಕ್ರಿಯೆ ಬಹುತೇಕ ಮುಕ್ತಾಯಕ್ಕೆ ಬಂದಿದೆ. ಆದರೆ, ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರ ಭಿನ್ನಮತ ಇನ್ನೊಂದು ಹಂತಕ್ಕೆ ತಲುಪುವತ್ತ ಸಾಗುತ್ತಿದೆ.

ಮತದಾನದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಸೋಲುವ ಭೀತಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಾಮಮಾರ್ಗಕ್ಕೆ ಇಳಿದಿದ್ದಾರೆ. ನಲವತ್ತು ವರ್ಷಗಳ ರಾಜಕೀಯದಲ್ಲಿ ಇಂತಹ ನೀಚ ರಾಜಕಾರಣವನ್ನು ನೋಡಲಿಲ್ಲ ಎಂದು ಈಶ್ವರಪ್ಪ ಆಕ್ರೋಶ ಹೊರಹಾಕಿದ್ದಾರೆ.
ನರೇಂದ್ರ ಮೋದಿ ಭಾವಚಿತ್ರ ಈಶ್ವರಪ್ಪ ಬಳಕೆ: ಶಿವಮೊಗ್ಗ ಕೋರ್ಟ್‌ನಲ್ಲಿ ಬಿಜೆಪಿಗೆ ಹಿನ್ನಡೆ

" ಮಾನ್ಯ ರಾಘವೇಂದ್ರ ಅವರು ಚುನಾವಣೆಯಲ್ಲಿ ಪರಾಭವಗೊಳ್ಳುವ ಹೆದರಿಕೆಯಿಂದ ಅನೇಕ ಕ್ರೈಂಗಳನ್ನು ಮಾಡುತ್ತಿದ್ದಾರೆ. ನನ್ನ ಪರವಾಗಿ ಈಶ್ವರಪ್ಪ ಪ್ರಚಾರ ಮಾಡುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಚುನಾವಣಾ ಸೋಲಿನ ಭೀತಿಯಲ್ಲಿ ರಾಜಕೀಯ ಷಡ್ಯಂತ್ರ ಮಾಡಲು ಹೊರಟಿದ್ದಾರೆ " ಎಂದು ಈಶ್ವರಪ್ಪ ಆರೋಪಿಸಿದ್ದಾರೆ.


ಈಶ್ವರಪ್ಪ ಗೆಲ್ಲುತ್ತಾರೆ ಎನ್ನುವ ಲೆಕ್ಕಾಚಾರ ಅವರಿಗೆ ಬಂದಿದೆ, ಹಾಗಾಗಿ ನನ್ನ ಹಳೆಯ ವಿಡಿಯೋವನ್ನು ಮತ್ತು ಈಶ್ವರಪ್ಪ ಬೆಂಬಲವಿದೆ ಎನ್ನುವ ಸುದ್ದಿಯನ್ನು ಹರಡಿಸುತ್ತಿದ್ದಾರೆ. ನನಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಕರೆಗಳ ಮೇಲೆ ಕರೆಗಳು ಬರುತ್ತಿವೆ ಎಂದು ಈಶ್ವರಪ್ಪ ಹೇಳಿದ್ದಾರೆ.


’ನನ್ನ ಪರವಾಗಿ ಬಿಜೆಪಿಗೆ ವೋಟ್ ಕೊಡಿ, ಈಶ್ವರಪ್ಪ’, ’ನನಗೆ ನನ್ನ ತಪ್ಪಿನ ಅರಿವಾಗಿದೆ, ಕಾಂಗ್ರೆಸ್ಸಿಗೆ ಲಾಭವಾಗುವುದು ಬೇಡ’, ಈ ರೀತಿಯ ಶೀರ್ಷಿಕೆಯಲ್ಲಿ ಸ್ಥಳೀಯ ಪತ್ರಿಕೆಗಳಲ್ಲಿ ಹಳೆಯ ಫೋಟೋಗಳನ್ನು ಬಳಸಿ ಸುದ್ದಿಯನ್ನು ಹಬ್ಬಿಸಲಾಗಿದೆ ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ.


ಕೆ.ಎಸ್.ಈಶ್ವರಪ್ಪನವರು ಒಳ್ಳೆಯ ನಿರ್ಧಾರ ಮಾಡಿದ್ದಕ್ಕೆ ಧನ್ಯವಾದಗಳು ಎನ್ನುವ ಹೆಡ್ಡಿಂಗ್ ಹಾಕಿ, ಅದರಲ್ಲಿ ಮೋದಿ ಮತ್ತು ನನ್ನ ಫೋಟೋಹಾಕಿ ಇನ್ನೊಂದು ಸುಳ್ಳುಸುದ್ದಿಯನ್ನು ವೈರಲ್ ಮಾಡಿಸಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.


ಚುನಾವಣೆ ಸೋಲಿನ ಭೀತಿಯಿಂದ ಬಂಢತನದ, ನಿರ್ಲಜ್ಜ ರಾಜಕೀಯ ಯಡಿಯೂರಪ್ಪನವರಿಂದ ನಿರೀಕ್ಷಿಸಿರಲಿಲ್ಲ. ಇಷ್ಟೇ ಅಲ್ಲ, ನನ್ನ ಹಳೆಯ ವಿಡಿಯೋವೊಂದು ಎರಡು ದಿನಗಳಿಂದ ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ. ನಾನು ಹಿಂದೆ ರಾಘವೇಂದ್ರ ಪರವಾಗಿ ಮತಯಾಚಿಸುವ ವಿಡಿಯೋವನ್ನು ಈಗಿನ ವಿಡಿಯೋ ಎನ್ನುವ ರೀತಿಯಲ್ಲಿ ಬಿಜೆಪಿಯವರು ಬಿಂಬಿಸುತ್ತಿದ್ದಾರೆ ಎಂದು ಈಶ್ವರಪ್ಪ ಬೇಸರ ವ್ಯಕ್ತ ಪಡಿಸಿದ್ದಾರೆ.


ಜಿಲ್ಲಾಧಿಕಾರಿಗಳು, ಕೇಂದ್ರ ಚುನಾವಣಾ ಆಯೋಗ ಕ್ಕೆ, ಪೊಲೀಸ್ ಅಧಿಕಾರಿಗಳಿಗೆ ದೂರನ್ನು ನೀಡುತ್ತೇನೆ. ಸೂಕ್ತವಾದ ತನಿಖೆಗಳನ್ನು ನಡೆಸಿ, ರಾಘವೇಂದ್ರ ಅವರನ್ನು ಬಂಧಿಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ರಾಷ್ಟ್ರಭಕ್ತರ ಬಳಗ ದ ವತಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿರುವ ಈಶ್ವರಪ್ಪ ಹೇಳಿದ್ದಾರೆ.
ಲೇಖಕರ ಬಗ್ಗೆ
ಬಾಲರಾಜ್ ತಂತ್ರಿ
ಬಾಲರಾಜ್ ತಂತ್ರಿ ಅವರು ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು ಹನ್ನೆರಡಕ್ಕೂ ಹೆಚ್ಚು ವರ್ಷಗಳಿಂದ ಸಕ್ರಿಯರಾಗಿದ್ದಾರೆ. ರಾಜ್ಯ, ರಾಷ್ಟ್ರೀಯ ಸುದ್ದಿಗಳು, ಮನೋರಂಜನೆ ಇವರ ಪ್ರಮುಖ ಆಸಕ್ತಿಯ ವಿಭಾಗಗಳು. ರಾಜಕೀಯ ಮತ್ತು ಮನೋರಂಜನಾ ಕ್ಷೇತ್ರದ ಹತ್ತು ಹಲವರ ವಿಡಿಯೋ ಸಂದರ್ಶನ ಮಾಡಿದ ಅನುಭವವೂ ಇವರಿಗಿದೆ. ರಾಜ್ಯ ಮತ್ತು ರಾಷ್ಟ್ರ ರಾಜಕೀಯದ ಆಗುಹೋಗುಗಳ ಬಗ್ಗೆ ವಿಶ್ಲೇಷಣೆ/ಬೈಲೈನ್ ಸುದ್ದಿಯನ್ನು ಬರೆಯುವುದರಲ್ಲಿ ಪರಿಣತರು. ಕನ್ನಡ ಸಿನಿಮಾಗಳ ಅಭಿಮಾನಿಯಾಗಿರುವ ಇವರ ಪ್ರಮುಖ ಹವ್ಯಾಸ ಪ್ರವಾಸ, ಕ್ರೀಡೆ, ಹಳೆಯ ಸಿನಿಮಾ ಹಾಡುಗಳನ್ನು ಕೇಳುವುದು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ