ಆ್ಯಪ್ನಗರ

ದ್ವಾರಾಳು ಗ್ರಾಮಕ್ಕೆ ಕೆನಡಾ ಸಂಸದರ ಭೇಟಿ ಸಚಿವ ನಾರಾಯಣ ಸ್ವಾಮಿ ಜತೆ ಸಮಾಲೋಚನೆ

ಕೆನಡಾ ಸಂಸತ್ತಿನಲ್ಲಿ ಮಾತೃಭಾಷೆ ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಕನ್ನಡದ ಕಂಪನ್ನು ಕೆನಾಡದಲ್ಲಿ ಪಸರಿಸಿದ್ದ ಕೆನಡಾ ಸಂಸದ ಚಂದ್ರ ಆರ್ಯ ಅವರು ಸೋಮವಾರ ತಮ್ಮ ಹುಟ್ಟೂರಾದ ದ್ವಾರಾಳು ಗ್ರಾಮಕ್ಕೆ ಭೇಟಿ ನೀಡಿದ್ದರು.

Vijaya Karnataka Web 11 Jul 2022, 7:22 pm
ಶಿರಾ : ಕೆನಡಾ ಸಂಸತ್ತಿನಲ್ಲಿ ಮಾತೃಭಾಷೆ ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಕನ್ನಡದ ಕಂಪನ್ನು ಕೆನಾಡದಲ್ಲಿ ಪಸರಿಸಿದ್ದ ಕೆನಡಾ ಸಂಸದ ಚಂದ್ರ ಆರ್ಯ ಅವರು ಸೋಮವಾರ ತಮ್ಮ ಹುಟ್ಟೂರಾದ ದ್ವಾರಾಳು ಗ್ರಾಮಕ್ಕೆ ಭೇಟಿ ನೀಡಿದ್ದರು.
Vijaya Karnataka Web Canadian MP


ನಂತರ ದ್ವಾರಾಳು ಗ್ರಾಮದ ಸಮೀಪವಿರುವ ಗಜ್ಜಿಗರಹಳ್ಳಿ ಲಕ್ಷಿತ್ರ್ಮೕ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕೆಲಕಾಲ ಗ್ರಾಮದ ಹಳೆ ಸ್ನೇಹಿತರೊಂದಿಗೆ ಚರ್ಚೆ ನಡೆಸಿದರು. ಪತ್ನಿಯೊಂದಿಗೆ ಭೇಟಿ ಕೊಟ್ಟ ಚಂದ್ರ ಆರ್ಯ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.

ನಂತರ ಮಾತನಾಡಿದ ಚಂದ್ರ ಆರ್ಯ ಅವರು, ಗಜ್ಜಿಗರಹಳ್ಳಿ ನಮ್ಮ ತಾತನವರ ಊರಾಗಿದ್ದು, ಇಲ್ಲಿಗೆ ಬರುವುದು ಎಂದರೆ ನಮಗೆ ತುಂಬಾ ಸಂತೋಷ. ಕಳೆದ ನಾಲ್ಕೈದು ವರ್ಷದಲ್ಲಿ ಹಲವು ಬಾರಿ ಇಲ್ಲಿಗೆ ಭೇಟಿ ನೀಡಿದ್ದೇನೆ. ಈ ಗ್ರಾಮಕ್ಕೆ ಮೂಲ ಸೌಕರ್ಯ, ರಸ್ತೆ ಆಗಬೇಕು. ಇಲ್ಲಿ ಮೊದಲು ದೇವಸ್ಥಾನ ಇರಲಿಲ್ಲ. ಈಗ ಗ್ರಾಮದವರೇ ಕಟ್ಟಿಸಿದ್ದಾರೆ ಎಂದರು.

ತುಮಕೂರು ವಿವಿ ಅಡಿಯಲ್ಲಿ ತಿಪಟೂರು ಸ್ನಾತಕೋತ್ತರ ಕೇಂದ್ರ “ಕಲ್ಪಸಿರಿ” ನಿರ್ಮಾಣಕ್ಕೆ ಸಿಕ್ತು ಚಾಲನೆ

ಕೇಂದ್ರ ಸಚಿವರೊಂದಿಗೆ ಸಮಾಲೋಚನೆ: ಕೆನಡಾ ಸಂಸದ ಚಂದ್ರ ಆರ್ಯ ಅವರು ತಮ್ಮ ಹುಟ್ಟೂರಾದ ದ್ವಾರಾಳು ಗ್ರಾಮಕ್ಕೆ ಭೇಟಿ ನೀಡಿದ ನಂತರ ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸಿದರು. ಆ ಸಂದರ್ಭದಲ್ಲಿವಿವಿಧ ಕಾರ್ಯಕ್ರಮಗಳಿಗೆ ಶಿರಾ ನಗರಕ್ಕೆ ಆಗಮಿಸಿದ್ದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಎ.ನಾರಾಯಣ ಸ್ವಾಮಿ ಹಾಗೂ ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಅವರು ಚಂದ್ರ ಆರ್ಯ ಅವರನ್ನು ಭೇಟಿ ಮಾಡಿ ಕೆಲ ಕಾಲ ಚರ್ಚೆ ನಡೆಸಿ, ಸನ್ಮಾನಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ.ಪಿ.ಪಾಂಡುರಂಗಯ್ಯ, ಆರ್‌.ಮುದ್ದುರಂಗೇಗೌಡ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷ ಎಂ.ರಂಗನಾಥ್‌, ನಗರಸಭಾ ಸದಸ್ಯರಾದ ರಂಗರಾಜು, ನಗರ ಬಿಜೆಪಿ ಅಧ್ಯಕ್ಷ ವಿಜಯರಾಜ್‌, ಮದಲೂರು ಮೂರ್ತಿ ಮಾಸ್ಟರ್‌, ಡಿ.ಸತೀಶ್‌, ಭೂವನಹಳ್ಳಿ ಲಿಂಗರಾಜು, ಸಕ್ಕರ ನಾಗರಾಜು ಸೇರಿದಂತೆ ಹಲವರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ