ವಿಜಾಪುರ: ನಗರದಲ್ಲಿ ಬಸ್ ನಿಲ್ದಾಣದಿಂದ ಜೋಡಗುಮ್ಮಟದ ರಸ್ತೆಯ ಮಧ್ಯದ ನ್ಯಾಯಾಧೀಶರ ಮನೆ ಎದುರಿನ ವಿದ್ಯುತ್ ಕಂಬಕ್ಕೆ ಕಟ್ಟಲಾದ ರಾಷ್ಟ್ರ ಧ್ವಜವನ್ನು ವಿರೂಪಗೊಳಿಸಲಾಗಿದೆ ಎಂದು ಶ್ರೀರಾಮಸೇನೆ ಆರೋಪಿಸಿದೆ.
ರಾಷ್ಟ್ರ ಧ್ವಜದ ಧ್ವಜ ಸಂಹಿತೆ ಉಲ್ಲಂಘನೆ ಮಾಡಲಾಗಿದೆ. ಧ್ವಜದಲ್ಲಿ ಕೇಸರಿ, ಬಿಳಿ, ಹಸಿರು ಬಣ್ಣದ ಬಟ್ಟೆಯ ನಡುವೆ ಅಶೋಕ ಚಕ್ರದ ಬದಲಾಗಿ ಅರ್ಧ ಚಂದ್ರ ಹಾಗೂ ನಕ್ಷತ್ರದ ಗುರುತನ್ನು ಚಿತ್ರಿಸಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಲಾಗಿದ್ದನ್ನು ಸೇನೆಯ ಪದಾಧಿಕಾರಿಗಳು ಖಂಡಿಸಿದ್ದಾರೆ.
ಧ್ವಜ ಸಂಹಿತೆ ಉಲ್ಲಂಘನೆ, ರಾಷ್ಟ್ರ ಧ್ವಜ ದುರ್ಬಳಕೆ ಮಾಡಿದ ದ್ರೋಹಿಗಳನ್ನು ತಕ್ಷಣ ಬಂಧಿಸಿ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೇನೆಯ ರಾಜ್ಯ ಕಾರ್ಯದರ್ಶಿ ನೀಲಕಂಠ ಕಂದಗಲ್ ಜಿಲ್ಲಾಡಳಿತ ಹಾಗೂ ಎಸ್ಪಿ ಅವರಿಗೆ ಒತ್ತಾಯಿಸಿದ್ದಾರೆ.
ರಾಷ್ಟ್ರ ಧ್ವಜ ವಿರೂಪ ಹಾಗೂ ಧ್ವಜ ಸಂಹಿತೆ ಉಲ್ಲಂಘಿಸಿದ್ದನ್ನು ವಿರೋಧಿಸಿ ಜ.15ರಂದು ಹಿಂದೂಪರ ಸಂಘಟನೆಗಳು ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ಮನವಿ ಸಲ್ಲಿಸಲಿವೆ ಎಂದವರು ತಿಳಿಸಿದ್ದಾರೆ.
ರಾಷ್ಟ್ರ ಧ್ವಜದ ಧ್ವಜ ಸಂಹಿತೆ ಉಲ್ಲಂಘನೆ ಮಾಡಲಾಗಿದೆ. ಧ್ವಜದಲ್ಲಿ ಕೇಸರಿ, ಬಿಳಿ, ಹಸಿರು ಬಣ್ಣದ ಬಟ್ಟೆಯ ನಡುವೆ ಅಶೋಕ ಚಕ್ರದ ಬದಲಾಗಿ ಅರ್ಧ ಚಂದ್ರ ಹಾಗೂ ನಕ್ಷತ್ರದ ಗುರುತನ್ನು ಚಿತ್ರಿಸಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಲಾಗಿದ್ದನ್ನು ಸೇನೆಯ ಪದಾಧಿಕಾರಿಗಳು ಖಂಡಿಸಿದ್ದಾರೆ.
ಧ್ವಜ ಸಂಹಿತೆ ಉಲ್ಲಂಘನೆ, ರಾಷ್ಟ್ರ ಧ್ವಜ ದುರ್ಬಳಕೆ ಮಾಡಿದ ದ್ರೋಹಿಗಳನ್ನು ತಕ್ಷಣ ಬಂಧಿಸಿ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೇನೆಯ ರಾಜ್ಯ ಕಾರ್ಯದರ್ಶಿ ನೀಲಕಂಠ ಕಂದಗಲ್ ಜಿಲ್ಲಾಡಳಿತ ಹಾಗೂ ಎಸ್ಪಿ ಅವರಿಗೆ ಒತ್ತಾಯಿಸಿದ್ದಾರೆ.
ರಾಷ್ಟ್ರ ಧ್ವಜ ವಿರೂಪ ಹಾಗೂ ಧ್ವಜ ಸಂಹಿತೆ ಉಲ್ಲಂಘಿಸಿದ್ದನ್ನು ವಿರೋಧಿಸಿ ಜ.15ರಂದು ಹಿಂದೂಪರ ಸಂಘಟನೆಗಳು ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ಮನವಿ ಸಲ್ಲಿಸಲಿವೆ ಎಂದವರು ತಿಳಿಸಿದ್ದಾರೆ.