ಆ್ಯಪ್ನಗರ

ಪ್ರಾದೇಶಿಕ ಪಕ್ಷದ ಉಳಿವಿಗೆ ಕೈಜೋಡಿಸಿ, ಎಚ್‌ಡಿಡಿ ಮನವಿ

ನಾನು‌ ಹುಟ್ಟಿದ್ದು ಗುರುವಾರ, ಇಂದು ಗುರುವಾರ ಆಗಿರೋದು ಸಂತಸ ನೀಡಿದೆ. ಪ್ರತಿ ವರ್ಷದಂತೆ ಕುಟುಂಬ ಸಮೇತರಾಗಿ ತಿರುಪತಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದೆವು.

ವಿಕ ಸುದ್ದಿಲೋಕ 18 May 2017, 5:36 pm
ಬೆಂಗಳೂರು: ಬರ, ರೈತರ ಆತ್ಮಹತ್ಯೆ ಹಿನ್ನೆಲೆಯಲ್ಲಿ ಹುಟ್ಟುಹಬ್ಬವನ್ನು ಅತ್ಯಂತ ಸರಳವಾಗಿ ಆಚರಿಸಲು ಮನವಿ ಮಾಡಿದ್ದೆ. ನಾನು‌ ಹುಟ್ಟಿದ್ದು ಗುರುವಾರ, ಇಂದು ಗುರುವಾರ ಆಗಿರೋದು ಸಂತಸ ನೀಡಿದೆ. ಪ್ರತಿ ವರ್ಷದಂತೆ ಕುಟುಂಬ ಸಮೇತರಾಗಿ ತಿರುಪತಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದೆವು. ಸುಮಾರು 40 ವರ್ಷಗಳಿಂದ ತಿರುಪತಿ ದರ್ಶನ ಮಾಡುತ್ತಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
Vijaya Karnataka Web 85th birthday celebration of hd devegowda
ಪ್ರಾದೇಶಿಕ ಪಕ್ಷದ ಉಳಿವಿಗೆ ಕೈಜೋಡಿಸಿ, ಎಚ್‌ಡಿಡಿ ಮನವಿ


ತಮ್ಮ ಪದ್ಮನಾಭನಗರ ನಿವಾಸದಲ್ಲಿ ಮಾತನಾಡಿದ ದೇವೇಗೌಡ, ಪ್ರಾದೇಶಿಕ ಪಕ್ಷದ ಉಳಿವಿಗೆ ಎಲ್ಲರು ಕೈ ಜೋಡಿಸಬೇಕು. ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಮಾಡ್ತಿದ್ದಾರೆ. ಪಕ್ಷ ಅಧಿಕಾರಕ್ಕೆ ತರಲು ಜನ ಆಶೀರ್ವಾದ ಮಾಡಬೇಕು. ನನ್ನ ಹುಟ್ಟುಹಬ್ಬದಂದು ಸಾಮೂಹಿಕ ಮದುವೆ ಮಾಡಿರೋದು ಖುಷಿ ನೀಡಿದೆ. ಅಧಿಕಾರ ಕಳೆದುಕೊಂಡ ಮೇಲೆಯೂ ಇಷ್ಟು ಪ್ರೀತಿ ನೀಡಿರೋದಕ್ಕೆ ಧನ್ಯವಾದಗಳು ಎಂದರು.

ಸಾಲದ ಬಾಧೆಯಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಎಲ್ಲ ರಾಜ್ಯದಲ್ಲು ಈ ಸಮಸ್ಯೆ ಇದೆ. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಗಮನ ಹರಿಸಬೇಕು. ರಾಜ್ಯದ ಸಮಸ್ಯೆಗಳ ಬಗ್ಗೆ ಪ್ರಧಾನಿ ಜೊತೆ ಮಾತನಾಡಿದ್ದೇನೆ ಎಂದರು.

ಮೇ 18. ಕ್ಕೆ ಮಾತ್ರ ಹುಟ್ಟುಹಬ್ಬ ಆಚರಿಸಿ ಸುಮ್ಮನಾಗಬಾರದು. ಪ್ರಾದೇಶಿಕ ಪಕ್ಷ ಬೆಳೆಸಲು ಕಾರ್ಯಕರ್ತರು ಕೈ ಜೋಡಿಸಬೇಕು. ಪಕ್ಷ‌ ಅಧಿಕಾರಕ್ಕೆ ತರಲು ಕಾರ್ಯಪ್ರವೃತರಾಗಬೇಕು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ದೇವೇಗೌಡ ಅವರ 85ನೇ ಹುಟ್ಟುಹಬ್ಬಕ್ಕೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಶ್ರೀಮತಿ ಸುಮಿತ್ರ ಮಹಾಜನ್ ಶುಭ ಕೋರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ