ಆ್ಯಪ್ನಗರ

ದಿನ ಭವಿಷ್ಯ 27 ಮಾರ್ಚ್‌ 2018

ಮೇಷ:- ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು...

Vijaya Karnataka 27 Mar 2018, 5:00 am
ಮೇಷ:- ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.
Vijaya Karnataka Web astrology march 27th 2018
ದಿನ ಭವಿಷ್ಯ 27 ಮಾರ್ಚ್‌ 2018


ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು ಭ್ರಮೆಗೆ ಒಳಗಾಗುವಿರಿ. ಇದರಿಂದ ನಿಮ್ಮ ಮನಸ್ಸಿಗೆ ಘಾತವಾಗುವುದು. ಮಾತಾ ದುರ್ಗಾದೇವಿಯನ್ನು ಸ್ಮರಿಸಿ.

ಮಿಥುನ:- ಎಲ್ಲಾ ದಿಕ್ಕುಗಳಲ್ಲಿಯೂ ನೀವು ಹಲವು ಒತ್ತಡಗಳನ್ನು ಎದುರಿಸಬೇಕಾಗುವುದು. ಗುರುವಿನ ಅನುಗ್ರಹವಿರುವುದರಿಂದ ಹೆಚ್ಚಿಗೆ ಚಿಂತಿಸುವ ಅಗತ್ಯವಿಲ್ಲ. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವರು.

ಕಟಕ:- ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು ಎನ್ನುವಂತೆ ಆಗಬಾರದು ಎಂದರೆ ಮೈಯೆಲ್ಲಾ ಕಣ್ಣಾಗಿ ಆಗುವ ಕೆಲಸಗಳತ್ತ ಗಮನ ಹರಿಸಬೇಕು. ಇಲ್ಲದೆ ಇದ್ದಲ್ಲಿ ಬಂದ ಮಹತ್ತರ ಅವಕಾಶ ತಪ್ಪಿಹೋಗುವ ಸಾಧ್ಯತೆ ಇರುತ್ತದೆ.

ಸಿಂಹ:- ಹೊಸ, ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಸುಳಿದು ಮಾಯವಾಗುವವು. ಆದರೆ ಅವುಗಳನ್ನು ಕಾರ್ಯ ರೂಪಕ್ಕೆ ತರುವಲ್ಲಿ ಶಿಸ್ತುಬದ್ಧತೆಯನ್ನು ಪ್ರದರ್ಶಿಸಬೇಕಾಗುವುದು. ಸಾಮಾಜಿಕವಾಗಿ ಎಲ್ಲರಿಂದ ಗುರುತಿಸಿಕೊಳ್ಳುವಿರಿ.

ಕನ್ಯಾ:- ನಿಮ್ಮ ಕಾರ್ಯಯೋಜನೆಗಳು ಸಫಲವಾಗುವುದನ್ನು ತಪ್ಪಿಸಲು ಹಲವರು ಹೊಂಚುಹಾಕಿ ಕಾಯುತ್ತಿರುವರು. ಆದರೆ ದೈವಬಲವಿರುವವರಿಗೆ ಯಾರ ಹಂಗೇನು? ನಿಮ್ಮ ಕಾರ್ಯಯೋಜನೆಗಳು ಭಗವಂತನ ದಯೆಯಿಂದ ಸಫಲಗೊಳ್ಳುವವು.

ತುಲಾ:- ಪೂರ್ವಾಪರ ಯೋಚನೆಯನ್ನು ಮಾಡದೆ ದಿಢೀರನೆ ಮಾಡುತ್ತಿರುವ ಉದ್ಯೋಗಕ್ಕೆ ರಾಜೀನಾಮೆ ನೀಡದಿರಿ. ಒಂದು ವೇಳೆ ರಾಜೀನಾಮೆ ನೀಡಿದಲ್ಲಿ ಕಷ್ಟ ಪರಂಪರೆಯನ್ನು ಎದುರಿಸಬೇಕಾಗುವುದು. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ವೃಶ್ಚಿಕ:- ಹಲವು ದಿನಗಳಿಂದ ಕಂಡ ಕನಸು ನನಸಾಗುವ ಸಾಧ್ಯತೆ ಇರುತ್ತದೆ. ಎಲ್ಲಾ ಮೂಲಗಳಿಂದ ಶುಭವಾರ್ತೆಯನ್ನು ಕೇಳುವಿರಿ. ಮನೆಯ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುವುದು.

ಧನಸ್ಸು:- ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಎನ್ನುವಂತೆ ವಿದೇಶದಿಂದ ಬರುವ ಉದ್ಯೋಗದ ವಿಚಾರವಾಗಿ ತೀರ್ಮಾನ ಕೈಗೊಳ್ಳುವಲ್ಲಿ ಹಿರಿಯರ ಆಶೀರ್ವಾದ ಪಡೆಯಿರಿ. ಈ ದಿನಗಳಲ್ಲಿ ವಿದೇಶ ಪ್ರಯಾಣ ನಿಮಗೆ ಲಾಭಕಾರಿಯಾಗುವುದಿಲ್ಲ.

ಮಕರ:- ಸಂಸಾರ ಗುಟ್ಟು ವ್ಯಾದಿ ರಟ್ಟು ಎನ್ನುವಂತೆ ಸಾಂಸಾರಿಕ ಜೀವನದ ಒಳ ತುಮುಲಗಳನ್ನು ಹೊರಗೆ ಹಾಕುವುದು ಸೂಕ್ತವಲ್ಲ. ಮನೆಯೊಳಗಿನ ವಿಚಾರವನ್ನು 4 ಗೋಡೆಗಳ ಮಧ್ಯದಲ್ಲಿಯೇ ಕುಳಿತು ಬಗೆಹರಿಸಿಕೊಳ್ಳಿ.

ಕುಂಭ:- ದೂರದ ಊರಿನ ಪ್ರಯಾಣವು ದಿಢೀರನೆ ನಿರ್ಣಯವಾಗುವುದು. ಇದರಿಂದ ದಿನನಿತ್ಯದ ಕಾರ್ಯಗಳಿಗೆ ಹಿಂಚಲನೆ ಉಂಟಾಗುವುದು. ಆದಾಗ್ಯೂ ಗುರು, ಹಿರಿಯರ ಆಶೀರ್ವಾದದಿಂದ ನೀವು ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ.

ಮೀನ:- ಮಹತ್ತರ ಕಾರ್ಯವನ್ನು ಹಮ್ಮಿಕೊಳ್ಳಲು ಯೋಚಿಸಿರುವಿರಿ. ಆದರೆ ಅದನ್ನು ಆರಂಭಿಸಲು ಸೂಕ್ತಕಾಲವಲ್ಲ. ಸ್ವತಂತ್ರವಾಗಿ ನಿರ್ಧಾರ ತಳೆಯದೇ ಬಂಧುಮಿತ್ರರ ಸಲಹೆಯನ್ನು ಸ್ವೀಕರಿಸಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ