ಬೆಂಗಳೂರು: ದೇವರು ಒಬ್ಬನೇ, ನಾಮ ಹಲವು. ಧರ್ಮ ಒಂದೇ, ತಿರುಳು ಅನೇಕ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
ರಾಮನವಮಿ ಸಮೀಪಿಸುತ್ತಿದ್ದಂತೆ ರಾಜಧಾನಿ ಬೆಂಗಳೂರಿನ ರಾಜಾಜಿನಗರದಲ್ಲಿರುವ ಶ್ರೀರಾಮ ದೇವಸ್ಥಾನದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಸದ್ದಾಂ ಹುಸೇನ್ ಎಂಬ ಮುಸ್ಲಿಂ ಯುವಕ ಈ ದೇವಾಲಯದ ಆವರಣ ಶುಚಿಗೊಳಿಸುವುದು ಸೇರಿದಂತೆ ಎಲ್ಲ ಕೆಲಸಗಳನ್ನು ನೋಡಿಕೊಳ್ಳುತ್ತಿರುವುದು ವಿಶೇಷವಾಗಿದೆ.
ನಾನು 2-3 ವರ್ಷಗಳಿಂದ ಇಲ್ಲಿ ಕೆಲಸ ಮಾಡುತ್ತಿದ್ದೇನೆ. ದೇವಾಲಯ ಶುಚಿಗೊಳಿಸುವ ಕೆಲಸ ಸಾಕಷ್ಟು ಖುಷಿ ತಂದು ಕೊಟ್ಟಿದೆ. ನನ್ನ ಕೆಲಸ ಕಾರ್ಯಗಳಿಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿರುವುದು ಹೆಮ್ಮೆ ಅನಿಸುತ್ತದೆ ಎಂದು ಸದ್ದಾಂ ಹುಸೇನ್ ಹೇಳಿಕೊಂಡಿದ್ದಾರೆ.
ರಾಮನವಮಿ ಸಮೀಪಿಸುತ್ತಿದ್ದಂತೆ ರಾಜಧಾನಿ ಬೆಂಗಳೂರಿನ ರಾಜಾಜಿನಗರದಲ್ಲಿರುವ ಶ್ರೀರಾಮ ದೇವಸ್ಥಾನದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಸದ್ದಾಂ ಹುಸೇನ್ ಎಂಬ ಮುಸ್ಲಿಂ ಯುವಕ ಈ ದೇವಾಲಯದ ಆವರಣ ಶುಚಿಗೊಳಿಸುವುದು ಸೇರಿದಂತೆ ಎಲ್ಲ ಕೆಲಸಗಳನ್ನು ನೋಡಿಕೊಳ್ಳುತ್ತಿರುವುದು ವಿಶೇಷವಾಗಿದೆ.
ನಾನು 2-3 ವರ್ಷಗಳಿಂದ ಇಲ್ಲಿ ಕೆಲಸ ಮಾಡುತ್ತಿದ್ದೇನೆ. ದೇವಾಲಯ ಶುಚಿಗೊಳಿಸುವ ಕೆಲಸ ಸಾಕಷ್ಟು ಖುಷಿ ತಂದು ಕೊಟ್ಟಿದೆ. ನನ್ನ ಕೆಲಸ ಕಾರ್ಯಗಳಿಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿರುವುದು ಹೆಮ್ಮೆ ಅನಿಸುತ್ತದೆ ಎಂದು ಸದ್ದಾಂ ಹುಸೇನ್ ಹೇಳಿಕೊಂಡಿದ್ದಾರೆ.