ಆ್ಯಪ್ನಗರ

​ಬಿಎಸ್‌ವೈ ತಿಪ್ಪರಲಾಗ ಹಾಕಿದರೂ ಬಿಜೆಪಿ ಬರಲ್ಲ ಎಂದ ಸಿಎಂ

ಯಡಿಯೂರಪ್ಪ ತಿಪ್ಪರಲಾಗ ಹಾಕಿದರೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Vijaya Karnataka Web 20 Sep 2017, 12:57 pm
ಕೋಲಾರ: ಯಡಿಯೂರಪ್ಪ ತಿಪ್ಪರಲಾಗ ಹಾಕಿದರೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Vijaya Karnataka Web bjp will not come to power
​ಬಿಎಸ್‌ವೈ ತಿಪ್ಪರಲಾಗ ಹಾಕಿದರೂ ಬಿಜೆಪಿ ಬರಲ್ಲ ಎಂದ ಸಿಎಂ


150 ಸೀಟುಗಳು ಬರುತ್ತದೆ ಎಂದು ಜೇಬಿನಲ್ಲಿ ಚೀಟಿ ಇಟ್ಟುಕೊಂಡು ರಾಜ್ಯದಲ್ಲಿ ಓಡಾಡುತ್ತ ಇರಲಿ. ಯಡಿಯೂರಪ್ಪ ಅವರ ಮೇಲೆ ಸುಪ್ರೀಂಕೋರ್ಟ್, ಹೈಕೋರ್ಟ್‌ ಸಾಕಷ್ಟು ಕೇಸುಗಳು ಇವೆ.
ನಮ್ಮ ಕುಟುಂಬದವರ ಮೇಲೆ ಏನಂತ ಚಾರ್ಜ್ ಶೀಟ್ ಬಿಡುಗಡೆ ಮಾಡುತ್ತಾರೆ ಎಂದು ಸಿಎಂ ಪ್ರಶ್ನಿಸಿದರು.

ಸುಳ್ಳು ಹೇಳುವುದನ್ನು ಬಿಟ್ಟು ಏನು ಬಿಡುಗಡೆ ಮಾಡುತ್ತಾರೋ ಮಾಡಲಿ. ಅದಕ್ಕಾಗಿಯೇ ನಾನು ಕಾಯುತ್ತಿದ್ದೇನೆ. ಪೋನ್ ಕದ್ದಾಲಿಕೆ ಮಾಡುವುದು ಬಿಜೆಪಿ ಕೆಲಸ, ನಮ್ಮದಲ್ಲ.
ನಮ್ಮ ಮಂತ್ರಿಗಳು, ಅಧಿಕಾರಿಗಳ ಪೋನ್ ಕದ್ದಾಲಿಕೆ ಮಾಡುತ್ತಿರುವುದು ಬಿಜೆಪಿಯವರು. ತಮ್ಮ ಕ್ಷೇತ್ರದ ಮೇಲೆ ನಂಬಿಕೆ ಇಲ್ಲದವರು ಬೇರೆ ಕ್ಷೇತ್ರಗಳಿಗೆ ಹುಡುಕಿಕೊಂಡು ಹೋಗುತ್ತಾರೆ ಎಂದು ಟೀಕಿಸಿದರು.

ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ಮಾಮೂಲಿ ಎಂದ ಅವರು ಕೋಲಾರದಲ್ಲಿ ರೈಲ್ವೆ ಕೋಚ್ ಫ್ಯಾಕ್ಟರಿ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಇಲಾಖೆ ಸಹಕಾರ ಕೊಡುತ್ತಿಲ್ಲ ಎಂದು ದೂರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ