ಆ್ಯಪ್ನಗರ

ದಿಲ್ಲಿ ನಾಯಕರ ಪ್ರೇರಣೆಯಿಂದಲೇ ಈಶ್ವರಪ್ಪ ಬಂಡಾಯ

ಬಿಜೆಪಿಯ ದಿಲ್ಲಿ ಮಟ್ಟದ ಶಕ್ತಿಯುತ ನಾಯಕರ ಪ್ರೇರಣೆಯಿಂದಲೇ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂಬ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ವಿಕ ಸುದ್ದಿಲೋಕ 29 Apr 2017, 10:38 am

ಹುಬ್ಬಳ್ಳಿ: ಬಿಜೆಪಿಯ ದಿಲ್ಲಿ ಮಟ್ಟದ ಶಕ್ತಿಯುತ ನಾಯಕರ ಪ್ರೇರಣೆಯಿಂದಲೇ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂಬ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ನಗರದ ಇಂದಿರಾ ಗಾಜಿನ ಮನೆಯಲ್ಲಿ ಶುಕ್ರವಾರ ವಾಯುವಿಹಾರ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, 'ಬಿಜೆಪಿಯಲ್ಲಿನ ಭಿನ್ನಮತ ಮತ್ತೊಮ್ಮೆ ಬೆಂಗಳೂರಿನಲ್ಲಿ ಸ್ಫೋಟಗೊಂಡಿದೆ. ರಾಜ್ಯದ ಬೆಳವಣಿಗೆ ದೃಷ್ಟಿಯಿಂದ ಗಮನಿಸಿದರೆ ಅಲ್ಲಿ ದೊಡ್ಡ ಮಟ್ಟದ ಗುಂಪುಗಾರಿಕೆ ನಡೆದಿದ್ದು, ಯಾರಿಂದಲೂ ಸರಿಪಡಿಸಲು ಸಾಧ್ಯವೇ ಇಲ್ಲ,' ಎಂದರು.

ಪ್ರತಿಪಕ್ಷ ಅನಿವಾರ್ಯ

Vijaya Karnataka Web bjps internal affairs and hdk
ದಿಲ್ಲಿ ನಾಯಕರ ಪ್ರೇರಣೆಯಿಂದಲೇ ಈಶ್ವರಪ್ಪ ಬಂಡಾಯ

'ಕಾಂಗ್ರೆಸ್‌ ಮುಕ್ತ ದೇಶ ಮಾಡುತ್ತೇವೆ ಅಂತ ಬಿಜೆಪಿ ಹೇಳ್ತಿರೋದು ಪ್ರಜಾಪ್ರಭುತ್ವ ವಿರೋಧಿ. ಆಳುವ ಸರಕಾರ ಎಚ್ಚರಿಸಲು ವಿರೋಧ ಪಕ್ಷ ಗಳು ಇರಬೇಕು. ಇಲ್ಲವಾದರೆ ಪ್ರಜಾಪ್ರಭುತ್ವ ವ್ಯವಸ್ಥೆ ಎನಿಸಿಕೊಳ್ಳುವುದಿಲ್ಲ,' ಎಂದರು.

ಸಿದ್ದರಾಮಯ್ಯ ನಾಯಕತ್ವ
ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್‌ ಪಕ್ಷ ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.
ಹೊಳೆನರಸೀಪುರ ತಾಲೂಕು ಹಳ್ಳಿ ಮೈಸೂರಿನಲ್ಲಿ ಶುಕ್ರವಾರ ಪೊಲೀಸ್‌ ಠಾಣೆ ಉದ್ಘಾಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ,’ ಎಂದು ಸ್ಪಷ್ಟಪಡಿಸಿದರು.

‘ಮುಂದಿನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಯಾವ ಪಕ್ಷ ದೊಂದಿಗೂ ಮೈತ್ರಿ ಮಾಡಿಕೊಳ್ಳುಧಿವುಧಿದಿಧಿಲ್ಲ. ಎಲ್ಲಾ 224 ಕ್ಷೇತ್ರಗಳಲ್ಲೂ ಚುನಾವಣೆಗೆ ಸ್ಪರ್ಧಿಸಲಿದೆ. ನಮ್ಮ ಶಕ್ತಿಯಿಂದಲೇ ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ,’ ಎಂದರು.
ಮಾಜಿ ಸಂಸದ ಎಚ್‌.ವಿಶ್ವನಾಥ್‌ ಜೆಡಿಎಸ್‌ ಸೇರ್ಪಡೆಯಾಗುತ್ತಾರೆ ಎಂಬ ವರದಿ ಕುರಿತಂತೆ ಪ್ರತಿಕ್ರಿಯಿಸಿ, ‘ಪಕ್ಷ ಬಿಡದಂತೆ ನಾನೂ ವಿಶ್ವನಾಥ್‌ ಅವರನ್ನು ಕೋರಿದ್ದೇನೆ. ಆದರೆ, ಅವರು ಈ ವಿಷಯದಲ್ಲಿ ಇದುವರೆಗೂ ಅವರು ನನ್ನನ್ನು ಸಂಪರ್ಕಿಸಿಲ್ಲ,’ ಎಂದು ತಿಳಿಸಿದರು.

ಬಿಜೆಪಿ ಒಳಜಗಳದಲ್ಲಿ 'ಹಸ್ತ'ಕ್ಷೇಪವಿಲ್ಲ

ಬಿಜೆಪಿ ಒಳಜಗಳಕ್ಕೆ ಕಾಂಗ್ರೆಸ್‌ ಕುಮ್ಮಕ್ಕು ನೀಡಿದೆ ಎಂಬುದು ಸುಳ್ಳು ಆರೋಪ. ಅವರ ಆಂತರಿಕ ಕಲಹದಲ್ಲಿ ನಾವು ಯಾವುದೇ ಹಸ್ತಕ್ಷೇಪ ನಡೆಸಿಲ್ಲ ಎಂದು ಗೃಹ ಸಚಿವರೂ ಆಗಿರುವ ಸ್ಪಷ್ಟಪಡಿಸಿದರು.

'ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನದ್ದು ಆಂತರಿಕ ಕಲಹ. ಇದರಿಂದ ನಮಗೆ ಲಾಭವಾಗುತ್ತದೆ ಎಂದು ನಾವು ಭಾವಿಸುವುದಿಲ್ಲ,' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ