ಆ್ಯಪ್ನಗರ

ಜ.25ಕ್ಕೆ ಸಿದ್ಧರಾಮೇಶ್ವರರ ಜಯಂತಿ

shivayogi siddarameshwara

Vijaya Karnataka 25 Jan 2020, 5:00 am
ರಾಯಚೂರು: ಶಿವಯೋಗಿ ಶ್ರೀ ಸಿದ್ಧರಾಮೇಶ್ವರರ 448ನೇ ಜಯಂತ್ಯುತ್ಸವ ಕಾರ್ಯಕ್ರಮ ಜ.25ರಂದು ನಗರದ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಭೋವಿ ವಡ್ಡರ ಸಂಘದ ಜಿಲ್ಲಾಸಮಿತಿಯ ಮುಖಂಡ ಡಿ.ಈರಣ್ಣ ರಾಂಪೂರು ಹೇಳಿದರು.
Vijaya Karnataka Web sri siddarameshwara


ನಗರದ ಪತ್ರಿಕಾ ಭವನದಲ್ಲಿಸೋಮವಾರ ಜರುಗಿದ ಸುದ್ದಿಗೋಷ್ಠಿಯಲ್ಲಿಮಾತನಾಡಿ, ಅಂದು ನಗರದ ಆಶಾಪೂರು ರಸ್ತೆಯಲ್ಲಿರುವ ಸಿದ್ಧರಾಮೇಶ್ವರರ ಪುತ್ಥಳಿಗೆ ಪೂಜೆ ಹಾಗೂ ಗಣ್ಯರಿಂದ ಮಾಲಾರ್ಪಣೆ ನಂತರ ನಗರದಲ್ಲಿಸಕಲ ಕಲಾ ತಂಡಗಳೊಂದಿಗೆ ಮೆರವಣಿಗೆ ಜರುಗಲಿದೆ. ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗುವ ಭಾವಚಿತ್ರ ಮೆರವಣಿಗೆಯು ರಂಗಮಂದಿರ ತಲುಪಲಿದೆ. ನಂತರ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು. ಸಮಾರಂಭದಲ್ಲಿಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದರು.

ಜಿಲ್ಲಾಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಸದರಾದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ನಗರ ಶಾಸಕ ಡಾ.ಶಿವರಾಜ್‌ ಪಾಟೀಲ್‌, ಗ್ರಾಮೀಣ ಶಾಸಕ ದದ್ದಲ್‌ ಬಸನಗೌಡ ದದ್ದಲ್‌, ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌.ಬೋಸರಾಜು ಇತರರು ಭಾಗವಹಿಸಲಿದ್ದಾರೆ ಎಂದರು. ಸಂಘಟನೆಯ ಮುಖಂಡರಾದ ಲಕ್ಷತ್ರ್ಮಣ್‌, ಯಲ್ಲಪ್ಪ, ಈರಣ್ಣ ಎಲ್ಲಂದೊಡ್ಡಿ, ಸಿ.ವಿ.ವೀರೇಶ, ಶಶಿಕಲಾ ಭೀಮರಾಯ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ