ಆ್ಯಪ್ನಗರ

ಮನೆಗೊಂದು ಬಾಳೆಗಿಡ- ದೇವಿಗೊಂದು ಬಾಳೆಗೊನೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಏಪ್ರಿಲ್‌ನಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ‘ಮನೆಗೊಂದು ಬಾಳೆಗಿಡ- ದೇವಿಗೊಂದು ಬಾಳೆಗೊನೆ’ ಕಾರ‍್ಯಕ್ರಮ ಭಾನುವಾರ ಬೆಳಗ್ಗೆ ದೇವಸ್ಥಾನದ ಚಿನ್ಮಯಿ ಸಭಾಂಗಣದಲ್ಲಿ ನಡೆಯಿತು.

Vijaya Karnataka 12 Nov 2019, 3:19 pm
ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಏಪ್ರಿಲ್‌ನಲ್ಲಿ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ‘ಮನೆಗೊಂದು ಬಾಳೆಗಿಡ- ದೇವಿಗೊಂದು ಬಾಳೆಗೊನೆ’ ಕಾರ‍್ಯಕ್ರಮ ಭಾನುವಾರ ಬೆಳಗ್ಗೆ ದೇವಸ್ಥಾನದ ಚಿನ್ಮಯಿ ಸಭಾಂಗಣದಲ್ಲಿ ನಡೆಯಿತು.
Vijaya Karnataka Web bale

ಬ್ರಹ್ಮಕಲಶೋತ್ಸವ ಕಾರ‍್ಯಕ್ರಮಕ್ಕೆ ಸಾವಿರಾರು ಬಾಳೆಎಲೆ, ಬಾಳೆಹಣ್ಣಿನ ಅಗತ್ಯ ಇರುವುದರಿಂದ ಅವುಗಳನ್ನು ಭಕ್ತರಿಂದಲೇ ಸಂಗ್ರಹಿಸುವ ನಿಟ್ಟಿನಲ್ಲಿ ಈ ವಿಶೇಷ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ‍್ಯಕ್ರವದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಅಶೋಕ್‌ ಕುಮಾರ್‌ ರೈ ಕೆ.ಎಸ್‌., ಕಾರಾರ‍ಯಧ್ಯಕ್ಷ ಸೀತಾರಾಮ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎಂ. ನಿರಂಜನ ರೈ ಮಠಂತಬೆಟ್ಟು ಭಕ್ತಾದಿಗಳಿಗೆ ಬಾಳೆಗಿಡ ವಿತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ