ಆ್ಯಪ್ನಗರ

ಕುದ್ಮಾರು: ಬ್ರಹ್ಮಕಲಶೋತ್ಸವ ಸಮಿತಿ ಸಭೆ

ಹ್ಮಕಲಶದ ಸಂದರ್ಭದಲ್ಲಿ 3 ದಿನ ಧಾರ್ಮಿಕ ಸಭಾ ಕಾರ್ಯಕ್ರಮ , 4ದಿನ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

Vijaya Karnataka 20 Nov 2019, 2:55 pm
ಕುದ್ಮಾರು: ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ 2020ರ ಏ.4ರಿಂದ 8ರವರೆಗೆ ನಡೆಯಲಿದ್ದು,ಪೂರ್ವ ಸಿದ್ದತೆ ಹಾಗೂ ಸಮಾಲೋಚನೆ ಸಭೆ ದೇವಸ್ಥಾನದ ಸುಬ್ರಹ್ಮಣ್ಯೇಶ್ವರ ಸಭಾಭವನದಲ್ಲಿ ನಡೆಯಿತು.
Vijaya Karnataka Web subrahmanya

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ ಮಾತನಾಡಿ, ಬ್ರಹ್ಮಕಲಶೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ಎಲ್ಲರ ಸಹಕಾರ ಬೇಕು. ದೇವಸ್ಥಾನಕ್ಕೆ ಸಂಬಂಧಪಟ್ಟ ಮನೆಯಿಂದ ದೇಣಿಗೆ ಸಂಗ್ರಹಿಸಲಾಗುವುದು. ಬ್ರಹ್ಮಕಲಶದ ಸಂದರ್ಭದಲ್ಲಿ 3 ದಿನ ಧಾರ್ಮಿಕ ಸಭಾ ಕಾರ್ಯಕ್ರಮ , 4ದಿನ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್‌ ಕುಮಾರ್‌ ಕೆಡೆಂಜಿ ಅವರು ಬ್ರಹ್ಮಕಲಶೋತ್ಸವದ ಸಿದ್ಧತೆ ಹಾಗೂ ಕಾರ್ಯ ಯೋಜನೆ ಕುರಿತು ವಿವರಿಸಿ, ಅಭಿವೃದ್ಧಿ ಕಾಮಗಾರಿಗಳ ನಕಾಶೆಯ ಮಾಹಿತಿ ನೀಡಿದರು.
ಆಡಳಿತ ಮಂಡಳಿ ಜತೆ ಕಾರ್ಯದರ್ಶಿ ಶೂರಪ್ಪ ಗೌಡ ಪಟ್ಟೆತ್ತಾನ, ಸದಸ್ಯ ಎನ್‌.ಮಹಾಲಿಂಗೇಶ್ವರ ಶರ್ಮ ಕಜೆ, ರಾಮಯ್ಯ ಗೌಡ, ಅರ್ಚಕ ರಮಾನಂದ ಭಟ್‌ ತೋಟಂತಿಲ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ರಾದ ಚಂದ್ರಶೇಖರ್‌ ಬರೆಪ್ಪಾಡಿ, ನರಸಿಂಹ ಪ್ರಸಾದ್‌ ಪಾಂಗಾಣ್ಣಾಯ ಕುವೆತ್ತೋಡಿ, ಜತೆ ಕಾರ್ಯದರ್ಶಿ ಭರತ್‌ ಕುಮಾರ್‌ ನಡುಮನೆ, ಕೋಶಾಧಿಕಾರಿ ಯಶೋಧರ ಕೆಡೆಂಜಿ ಉಪಸ್ಥಿತರಿದ್ದರು.
ಸುರೇಶ್‌ ಕಾಪಿನಕಾಡು, ರಾಜೇಶ್‌ ಕುವೆತ್ತೋಡಿ, ಉಮೇಶ್‌ ಕೆರೆನಾರು, ಭವಾನಿ ಕೆಡೆಂಜಿ, ರಾಮಚಂದ್ರ ಅನ್ಯಾಡಿ, ವಸಂತ ಕಾರ್ಲಾಡಿ, ದೇವಾರಾಜ್‌ ನೂಜಿ, ಕೃಷ್ಣ ಭಟ್‌ ಎನ್‌., ಜತ್ತಪ್ಪ ರೈ ಬರೆಪ್ಪಾಡಿ, ಮಹೇಶ್‌ ನೂಜಿ, ಮಹಾಬಲ ನೂಜಿ, ಐತ್ತಪ್ಪ ಗೌಡ, ಮೇದಪ್ಪ ಗೌಡ ಕೆ., ಜನಾರ್ದನ ಎರ್ಕಮೆ, ಚಂದ್ರ ಗೌಡ ಟಿ., ಲೋಕನಾಥ ವಜ್ರಗಿರಿ, ಜನಾರ್ದನ ಗೌಡ ಕೆ., ಚೆನ್ನಪ್ಪ ಗೌಡ ನೂಜಿ, ಲೋಕೇಶ್‌ ಬಿ.ಎನ್‌., ಪುನೀತ್‌ ಕುಮಾರ್‌, ಉದಯ ಬಿ.ಗೌಡ, ಜೀವನ್‌ ಎ., ಸತೀಶ್‌ ರೈ ಕೆ., ಗೋಪಾಲಕೃಷ್ಣ ಕಾರ್ಲಾಡಿ, ಶ್ರೀಕಾಂತ್‌ ಬಿ.ವಿ., ನೇಮಿರಾಜ್‌, ದಾಮೋದರ್‌ ನಾಕಿರಣ, ಚೆನ್ನಪ್ಪ ಗೌಡ, ಪ್ರವೀಣ್‌, ಯೋಗೀಶ್‌ ಬಿ., ಶ್ರೀನಿವಾಸ್‌ ಗೌಡ, ಪುಷ್ಪಾಲತಾ, ಇಂದಿರಾವತಿ, ಗೀತಾ, ವಿಮಲ, ರಂಜಿತಾ, ರಮ್ಯ, ಉಮಾಪ್ರಸಾದ್‌ ರೈ ನಡುಬೈಲು, ಸುರೇಶ್‌ ರೈ ಸೂಡಿಮುಳ್ಳು, ಸುಧಾಕರ ಆಚಾರ್ಯ ಕಾಣಿಯೂರು, ಪ್ರವೀಣ್‌ ಪಾಲ್ತಾಡಿ ಉಪಸ್ಥಿತರಿದ್ದರು. ಕೆ.ಸೀತಾರಾಮ ರೈ ಸವಣೂರು ಸ್ವಾಗತಿಸಿದರು. ವೆಂಕಟೇಶ್‌ ಭಟ್‌ ಕೊಯಕ್ಕುಡೆ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ