ಆ್ಯಪ್ನಗರ

28, 29ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಸಮಾವೇಶ

ಡಿ. 28 ಹಾಗೂ 29ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 1ನೇ ಅಖಿಲ ಕರ್ನಾಟಕ ಬ್ರಾಹ್ಮಣ ಸಮಾವೇಶ ಹಮ್ಮಿಕೊಳ್ಳಲಾಗಿದೆ

Vijaya Karnataka 16 Dec 2019, 4:40 pm
ಗೌರಿಬಿದನೂರು: ಡಿ. 28 ಹಾಗೂ 29ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 1ನೇ ಅಖಿಲ ಕರ್ನಾಟಕ ಬ್ರಾಹ್ಮಣ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಉಪಾಧ್ಯಕ್ಷ ಶಂಕರನಾರಾಯಣ ತಿಳಿಸಿದರು.
Vijaya Karnataka Web bodhi logo

ಶಂಕರಮಠದ ಆವರಣದಲ್ಲಿ ಸ್ಥಳೀಯ ಬ್ರಾಹ್ಮಣ ನಾಯಕರಿಗೆ ಆಮಂತ್ರಣ ಪತ್ರಿಕೆಗಳನ್ನು ನೀಡಿ ಆಹ್ವಾನಿಸಿ ಅವರು ಮಾತನಾಡಿದರು.
ಲಕ್ಷಾಂತರ ಮಂದಿ ವಿಪ್ರರು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ನಾಡಿನ ಮಠಾಧೀಶರು, ವಿದ್ವಾಂಸರು, ವಿಪ್ರ ಸಂಘಟನೆಗಳು ಪಾಲ್ಗೊಳ್ಳಲಿವೆ. ಆಧುನಿಕ ಕಾಲಘಟ್ಟದಲ್ಲಿ ವಿಪ್ರ ಸಮುದಾಯವು ಸ್ವಾವಲಂಬಿಗಳಾಗಿ ಸಾಗಬೇಕಾದ ಆವಶ್ಯಕತೆಯ ಬಗ್ಗೆ ಚರ್ಚೆ ನಡೆಯಲಿದೆ. ಬ್ರಾಹ್ಮಣ ಅಭಿವೃದ್ಧಿ ನಿಗಮದ ಅಧ್ಯಕ್ಷ ರ ನಿಯಾಮಕ, ಬ್ರಾಹ್ಮಣರಿಗೆ ಜಾತಿ, ಆದಾಯ, ಪ್ರಮಾಣ ಪತ್ರ ನೀಡಲು ಸರಕಾರದ ಮೇಲೆ ಒತ್ತಡ ತರಲಾಗುವುದು ಎಂದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಕಾಶಿ ವಿಶ್ವನಾಥ್‌, ತಾಲೂಕು ಅಧ್ಯಕ್ಷ ಅಶ್ವತ್ಥನಾರಾಯಣ ರಾವ್‌, ನಾಗಭೂಷಣ ರಾವ್‌, ಜಿಲ್ಲಾ ಬ್ರಾಹ್ಮಣ ನೌಕರರ ಸಂಘದ ಅಧ್ಯಕ್ಷ ಆದಿಶೇಷರಾವ್‌, ತಾಲೂಕು ಕಾರ್ಯದರ್ಶಿ ಸತ್ಯೇಂದ್ರ, ಅನಂತನಾರಾಯಣ, ಸುಬ್ರಹ್ಮಣ್ಯ, ಸಮಾಜ ಸೇವಕ ಮಂಜುನಾಥ್‌, ರಾಜ್ಯ ಸಂಘಟನಾ ಕಾರ್ಯದರ್ಶಿ ಟಿ.ಎನ್‌. ಮಂಜುನಾಥ್‌ ಮುಂತಾದವರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ