ಆ್ಯಪ್ನಗರ

ದಲೈಲಾಮಾ ಇಂದು ಮಂಗಳೂರಿಗೆ

ಆ. 30ರಂದು ನಗರದ ಫಾದರ್‌ ಮುಲ್ಲರ್‌ ಸಭಾಂಗಣದಲ್ಲಿ ನಡೆಯುವ ಅಖೀಲ ಭಾರತ ಕೆಥೊಲಿಕ್‌ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಅವರು ಭಾಗವಹಿಸುವರು. ಬಳಿಕ ನಗರದಲ್ಲಿ ವಾಸ್ತವ್ಯ ಹೂಡಿ, ಆ.31ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

Vijaya Karnataka 29 Aug 2019, 1:31 pm
ಮಂಗಳೂರು: ಟಿಬೆಟಿಯನ್ನರ ಪರಮ ಗುರು ದಲೈಲಾಮಾ ಅವರು ಆ. 29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.20ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
Vijaya Karnataka Web lama


ಆ. 30ರಂದು ನಗರದ ಫಾದರ್‌ ಮುಲ್ಲರ್‌ ಸಭಾಂಗಣದಲ್ಲಿ ನಡೆಯುವ ಅಖೀಲ ಭಾರತ ಕೆಥೊಲಿಕ್‌ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಅವರು ಭಾಗವಹಿಸುವರು. ಬಳಿಕ ನಗರದಲ್ಲಿ ವಾಸ್ತವ್ಯ ಹೂಡಿ, ಆ.31ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

ದಲೈಲಾಮಾಆಗಮಿಸುವ ಹಿನ್ನೆಲೆಯಲ್ಲಿ ನಗರದಲ್ಲಿ ವ್ಯಾಪಕ ಪೊಲೀಸ್‌ ಭದ್ರತೆ ಒದಗಿಸಲಾಗಿದೆ. ಭದ್ರತಾ ವಿಚಾರಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಅವರ ಅಧ್ಯಕ್ಷ ತೆಯಲ್ಲಿ ಪೂರ್ವಸಿದ್ಧತಾ ಸಭೆ ಇತ್ತೀಚೆಗೆ ನಡೆದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ