ಆ್ಯಪ್ನಗರ

ನರಹರಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ದೀಪೋತ್ಸವ

ಪಾಣೆಮಂಗಳೂರು ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ದೀಪೋತ್ಸವ ಸೋಮವಾರ ಸಮಾಪನಗೊಂಡಿತು.

Vijaya Karnataka 27 Nov 2019, 12:41 pm
ಬಂಟ್ವಾಳ: ಪಾಣೆಮಂಗಳೂರು ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ದೀಪೋತ್ಸವ ಹಾಗೂ ತೀರ್ಥಸ್ನಾನ ಉತ್ಸವವು ಸೋಮವಾರ ಸಮಾಪನಗೊಂಡಿತು.
Vijaya Karnataka Web bhnarahari

ನ. 24ರಂದು ಆರಂಭ ಗೊಂಡ ಉತ್ಸವದಲ್ಲಿ ಸಂಜೆ 7ಕ್ಕೆ ಶ್ರೀ ಶರಭೇಶ್ವರ ಭಜನಾ ಮಂಡಳಿ ಮತ್ತು ಶಿವರಂಜನಿ ಕಲಾ ಕೇಂದ್ರ ಬೊಕ್ಕಸ ಅವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಶ್ರೀ ಸದಾಶಿವ ದೇವರಿಗೆ ಏಕಾದಶ ರುದ್ರಾಭಿಷೇಕ, ಶ್ರೀ ಮಹಾಗಣಪತಿಗೆ ಸತ್ಯ ವಿನಾಯಕ ಪೂಜೆ, ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆಯ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಿತು.
ಸೋಮವಾರ ಪ್ರಾತಃಕಾಲ ತೀರ್ಥಸ್ನಾನ ಆರಂಭಗೊಂಡಿತ್ತು. ಬಳಿಕ ಬೆಳಗ್ಗೆ ಶ್ರೀ ದೇವರ ಬಲಿ ಉತ್ಸವ ನಡೆದು ಬಟ್ಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ಮಹಾಪೂಜೆಯ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.
ಎರಡು ದಿನಗಳ ಉತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡು ದೇವರ ದರ್ಶನ ಪಡೆದರು. ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಪ್ರಶಾಂತ್‌ ಮಾರ್ಲ ಹಾಗೂ ಮೊಕ್ತೇಸರರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ. ಆತ್ಮರಂಜನ್‌ ರೈ ಹಾಗೂ ಪದಾಧಿಕಾರಿಗಳು ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ