ಆ್ಯಪ್ನಗರ

ಕನಕ ಗುರುಪೀಠದ ಸಂಸ್ಥಾಪನಾ ದಿನಾಚರಣೆ

ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ 28ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಹಾಗೂ ನೂತನ ಶಾಖಾ ಮಠದ ಉದ್ಘಾಟನಾ ಸಮಾರಂಭ.

Vijaya Karnataka 8 Feb 2020, 5:00 am
ತುಮಕೂರು: ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ 28ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಹಾಗೂ ನೂತನ ಶಾಖಾ ಮಠದ ಉದ್ಘಾಟನಾ ಸಮಾರಂಭವನ್ನು ಫೆ.9 ಮತ್ತು 10ರಂದು ಕೊರಟಗೆರೆಯ ಸಿದ್ಧರಬೆಟ್ಟದಲ್ಲಿಏರ್ಪಡಿಸಲಾಗಿದೆ ಎಂದು ಈಶ್ವರಾನಂದಪುರಿ ಸ್ವಾಮೀಜಿ ತಿಳಿಸಿದರು.
Vijaya Karnataka Web kanaka


ನಗರದ ಕಾಳಿದಾಸ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭದ ಸಾನ್ನಿಧ್ಯವನ್ನು ಕಾಗಿನೆಲೆಯ ನಿರಂಜನಾನಂದ ಪುರಿ ಸ್ವಾಮೀಜಿ, ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಮಹಾಸ್ವಾಮೀಜಿ, ಸಿದ್ಧರಬೆಟ್ಟದ ರಂಭಾಪುರಿ ಶಾಖಾ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ರಾಮಕೃಷ್ಣಾಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ, ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನದ ಡಾ.ಹನುಮಂತನಾಥ ಸ್ವಾಮೀಜಿ ವಹಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಮಾಜಿ ಸಚಿವ ಎಚ್‌.ಎಂ.ರೇವಣ್ಣ, ಸಂಸದ ಜಿ.ಎಸ್‌. ಬಸವರಾಜು, ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌. ರಾಜಣ್ಣ, ವಿಧಾನಪರಿಷತ್‌ ಸದಸ್ಯ ಕೆ.ತಿಪ್ಪೇಸ್ವಾಮಿ, ಹೊಸದುರ್ಗ ಮಾಜಿ ಶಾಸಕ ಗೋವಿಂದಪ್ಪ, ಸಾವಯವ ಕೃಷಿ ಮಂಡಳಿ ಮಾಜಿ ಅಧ್ಯಕ್ಷ ಸೋಮಶೇಖರ್‌, ಮಾಜಿ ಎಂಎಲ್‌ಸಿ ಡಾ.ಹುಲಿನಾಯ್ಕರ್‌ ಸೇರಿದಂತೆ ವಿವಿಧ ಗಣ್ಯರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ