ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯರಿಗೆ ಜಕಣಾಚಾರಿ ಪ್ರಶಸ್ತಿ
ಕೋಟೇಶ್ವರದ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2018ನೇ ಸಾಲಿನ ಜಕಣಾಚಾರಿ ಪ್ರಶಸ್ತಿ.
Vijaya Karnataka 15 Nov 2019, 4:02 pm
ಕೋಟೇಶ್ವರ: ಶಿಲ್ಪಕಲಾ ಕ್ಷೇತ್ರದಲ್ಲಿ ಅಪೂರ್ವ ಸೇವೆ ಸಲ್ಲಿಸಿದ ಕೋಟೇಶ್ವರದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2018ನೇ ಸಾಲಿನ ಜಕಣಾಚಾರಿ ಪ್ರಶಸ್ತಿಯನ್ನು ಬುಧವಾರ ಬೆಂಗಳೂರಿನ ಕನ್ನಡ ಭವನದ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ. ರವಿ ಮತ್ತಿತರರು ಉಪಸ್ಥಿತರಿದ್ದರು.