ಆ್ಯಪ್ನಗರ

ಡಿ.16ರಂದು ಮೌನೇಶ್ವರ ಜಯಂತಿ

ಡಿ.16ರಂದು ಇಲ್ಲಿನ ಶಾಖಾಪುರ ರಸ್ತೆಯ ಕಾಳಿಕಾದೇವಿ ದೇವಾಲಯ ಆವರಣದಲ್ಲಿ ಮೌನೇಶ್ವರ ಜಯಂತಿ ಆಚರಿಸಲು ತಾಲೂಕು ವಿಶ್ವಕರ್ಮ ಸಮಾಜದ ಮುಖಂಡರು ನಿರ್ಣಯ ಕೈಗೊಂಡರು.

Vijaya Karnataka 15 Nov 2019, 5:23 pm
ಕುಷ್ಟಗಿ: ಡಿ.16ರಂದು ಇಲ್ಲಿನ ಶಾಖಾಪುರ ರಸ್ತೆಯ ಕಾಳಿಕಾದೇವಿ ದೇವಾಲಯ ಆವರಣದಲ್ಲಿ ಮೌನೇಶ್ವರ ಜಯಂತಿ ಆಚರಿಸಲು ತಾಲೂಕು ವಿಶ್ವಕರ್ಮ ಸಮಾಜದ ಮುಖಂಡರು ನಿರ್ಣಯ ಕೈಗೊಂಡರು.
Vijaya Karnataka Web bodhi logo

ಇಲ್ಲಿನ ಕಾಳಿಕಾದೇವಿ ದೇವಾಲಯದಲ್ಲಿ ಗುರುವಾರ ತಾಲೂಕು ವಿಶ್ವಕರ್ಮ ಸಮಾಜ ಸಂಘ, ಮಹಿಳಾ ಸಂಘ, ಯುವ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು.
ಮೌನೇಶ್ವರ ಜಯಂತಿ ನಿಮಿತ್ತ ವಿಶ್ವಕರ್ಮ ಸಮಾಜದ ವಟುಗಳಿಗೆ ಉಚಿತವಾಗಿ ಉಪನಯನ ಮಾಡುವ ಕಾರ್ಯ ನಡೆಸಲು ತೀರ್ಮಾನಿಸಲಾಯಿತು. ತಾಲೂಕಿನ ವಿಶ್ವಕರ್ಮ ಸಮಾಜದ ಬಂಧುಗಳು ತಮ್ಮ ಮಕ್ಕಳ ಉಪನಯನ ಮಾಡಿಸಲು ಹೆಸರುಗಳನ್ನು ಸಮಾಜದ ತಾಲೂಕು ಘಟಕದ ಪದಾಧಿಕಾರಿಗಳಲ್ಲಿ ನೋಂದಾಯಿಸಬೇಕು ಎಂದು ಸಮಾಜದ ಪ್ರಧಾನ ಕಾರ್ಯದರ್ಶಿ ಶರಣಪ್ಪ ಎಚ್‌.ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ