ಆ್ಯಪ್ನಗರ

ಜ.19 ರಂದು ಲಿಂ.ಸಿದಗಂಗಾ ಶ್ರೀಗಳ ಪ್ರಥಮ ಪುಣ್ಯ ಸ್ಮರಣೆ

ಸಿದ್ಧಗಂಗಾ ಮಠದ ಲಿಂ.ಡಾ.ಶ್ರೀ ಶಿವಕುಮಾರ ಶ್ರೀಗಳ ಪ್ರಥಮ ವರ್ಷದ ಪುಣ್ಯ ಸ್ಮರಣೋತ್ಸವ ಸಮಾರಂಭವನ್ನು ಶ್ರೀಮಠದಲ್ಲಿಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿಜ.19 ರಂದು ಆಯೋಜಿಸಲಾಗಿದೆ.

Vijaya Karnataka 17 Jan 2020, 3:13 pm
ತುಮಕೂರು: ಸಿದ್ಧಗಂಗಾ ಮಠದ ಲಿಂ.ಡಾ.ಶ್ರೀ ಶಿವಕುಮಾರ ಶ್ರೀಗಳ ಪ್ರಥಮ ವರ್ಷದ ಪುಣ್ಯ ಸ್ಮರಣೋತ್ಸವ ಸಮಾರಂಭವನ್ನು ಶ್ರೀಮಠದಲ್ಲಿಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿಜ.19 ರಂದು ಆಯೋಜಿಸಲಾಗಿದೆ.
Vijaya Karnataka Web Siddaganga


ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶ್ರೀ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಬೆಂಗಳೂರು ಬೇಲಿ ಮಠಾಧ್ಯಕ್ಷ$ಶ್ರೀ ಶಿವರುದ್ರ ಸ್ವಾಮೀಜಿ, ಕನಕಪುರ ದೇಗುಲ ಮಠಾಧ್ಯಕ್ಷ$ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಉಪಸ್ಥಿತರಿರುವರು.

ಲಿಂ.ಡಾ.ಶ್ರೀ ಶಿವಕುಮಾರ ಶ್ರೀಗಳ ಪ್ರಥಮ ವರ್ಷದ ಪುಣ್ಯಸ್ಮರಣೋತ್ಸವ ಸಮಾರಂಭಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬರುವ ನಿರೀಕ್ಷೆಯಿದೆ ಎಂದು ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕ ಎಂ.ಎನ್‌.ಚನ್ನಬಸಪ್ಪ ತಿಳಿಸಿದರು.

ಸಿದ್ಧಗಂಗಾ ಮಠದಲ್ಲಿ ಮಾತನಾಡಿದ ಅವರು, ಜ.19ರಂದು ಶ್ರೀಮಠದಲ್ಲಿಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿಲಿಂಗೈಕ್ಯ ಶ್ರೀಗಳ ಪ್ರಥಮ ಪುಣ್ಯಸ್ಮರಣೋತ್ಸವ ನಡೆಯಲಿದೆ. ಶ್ರೀಗಳ ಸ್ಮರಣೋತ್ಸವಕ್ಕೆ ಎಲ್ಲರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜ.21ರಂದು ಶ್ರೀಮಠದ ವಿದ್ಯಾರ್ಥಿಗಳಿಗೆ ರಜೆ ಇಲ್ಲದ ಕಾರಣ ಜ.19ರಂದು ಪುಣ್ಯಸ್ಮರಣೆ ಆಯೋಜಿಸಲಾಗಿದೆ ಎಂದರು.

ವೆಬ್‌ಸೈಟ್‌ ಬಿಡುಗಡೆ: ಸಮಾರಂಭದಲ್ಲಿಬೆಂಗಳೂರಿನ ಡಾ.ಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್‌ನಿಂದ ಕಾರ್ಯಸೂಚಿ ಕೈಪಿಡಿ ಮತ್ತು ವೆಬ್‌ಸೈಟ್‌ ಬಿಡುಗಡೆ ಮಾಡಲಾಗುತ್ತದೆ. ಸಿ.ಎನ್‌.ಸದಾಶಿವಯ್ಯ ವಿರಚಿತ 'ಶ್ರೀಗುರು ಕರುಣೆ ಮತ್ತು ನಿಷ್ಠೆ' ಕೃತಿ, ಬ್ಯಾಲಕೆರೆ ಶಿವಣ್ಣ ವಿರಚಿತ 'ಯೋಗಾಂಗ ತ್ರಿವಿಧಿ' ಮತ್ತು ಮುದ್ದೇನಹಳ್ಳಿ ನಂಜಯ್ಯ ವಿರಚಿತ 'ಶ್ರೀ ಶಿವಕುಮಾರ ಚರಿತೆ' ಪುಸ್ತಕ ಬಿಡುಗಡೆಗೊಳಿಸಲಾಗುತ್ತದೆ ಎಂದು ಹೇಳಿದರು.

ಏಳು ಕಡೆ ಪ್ರಸಾದ ವ್ಯವಸ್ಥೆ: ಭಕ್ತಾದಿಗಳಿಗಾಗಿ ಶ್ರೀ ಮಠದ ಏಳು ಕಡೆ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದ್ದು, ಒಂದು ಬಾರಿ ಹತ್ತು ಸಾವಿರ ಜನ ಕುಳಿತು ಊಟ ಮಾಡಬಹುದು. ಬೆಳಗ್ಗೆ 7ರಿಂದ 11 ಗಂಟೆಯವರೆಗೆ ತಿಂಡಿ ನೀಡಲಾಗುತ್ತದೆ. ಬೆಳಗ್ಗೆ 11.30 ರಿಂದ ರಾತ್ರಿ 11.30ರವರೆಗೂ ಶ್ರೀಮಠಕ್ಕೆ ಬರುವ ಭಕ್ತರಿಗೆ ಸಿಹಿಯೂಟದ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಶ್ರೀಮಠದ ಕಾರ್ಯಕ್ರಮಕ್ಕೆ ಬರುವ ಯಾವುದೇ ಭಕ್ತರಿಗೆ ಪ್ರಸಾದ ವ್ಯವಸ್ಥೆ ತಪ್ಪದಂತೆ ನೋಡಿಕೊಳ್ಳಲಾಗುತ್ತದೆ. ಇದು ಲಿಂ.ಶ್ರೀಗಳ ಆಸೆ ಎಂದರು.

ಬೆಳ್ಳಿ ಪ್ರತಿಮೆ ಮೆರವಣಿಗೆ:ದಿಲ್ಲಿಮೂಲದ ಕೈಗಾರಿಕೋದ್ಯಮಿ ಹಾಗೂ ಶ್ರೀಮಠದ ಅಭಿಮಾನಿಯಾದ ಮುಖೇಶ್‌ ಗರ್ಗ್‌ ಅವರು 40ರಿಂದ 50 ಕೆಜಿ ಲಿಂ.ಶ್ರೀಗಳ ಬೆಳ್ಳಿ ಪುತ್ಥಳಿಯನ್ನು ಮಾಡಿಸಿ ಶ್ರೀಗಳ ಗದ್ದುಗೆಯಲ್ಲಿಡಲು ವ್ಯವಸ್ಥೆ ಮಾಡಿದ್ದಾರೆ. ಈ ಪ್ರತಿಮೆ ಬಂದರೆ ಗದ್ದುಗೆಯಿಂದ ಕ್ಯಾತ್ಸಂದ್ರ ರೈಲ್ವೆ ಗೇಟ್‌ವರೆಗೆ ಉತ್ಸವ ನಡೆಸಲಾಗುತ್ತದೆ. ಪ್ರತಿಮೆ ಬಾರದೆ ಇದ್ದರೆ ಲಿಂ.ಶ್ರೀಗಳ ಭಾವಚಿತ್ರ ಮೆರವಣಿಗೆ ಮಾಡಲಾಗುತ್ತದೆ. ಎಂದಿನಂತೆ ಶ್ರೀಗಳ ಗದ್ದುಗೆಯಲ್ಲಿಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ನೇತೃತ್ವದಲ್ಲಿನಾನಾ ಪೂಜಾ ಕೈಂಕರ್ಯಗಳು ನಡೆಯಲಿವೆ ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ