ಆ್ಯಪ್ನಗರ

ಕಡೇಶಿವಾಲಯದಲ್ಲಿ ಮಳೆಗಾಗಿ ಸೀಯಾಳಾಭಿಷೇಕ

ಸಮೃದ್ಧ ಮಳೆಯಾಗಲೆಂದು ಪ್ರಾರ್ಥಿಸಿ ಕಡೇಶಿವಾಲಯದ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹ ದೇವರಿಗೆ ಸಿಯಾಳಾಭಿಷೇಕ ನಡೆಯಿತು.

Vijaya Karnataka 25 Jun 2019, 5:02 pm
ಬಂಟ್ವಾಳ: ಸಮೃದ್ಧ ಮಳೆಯಾಗಲೆಂದು ಪ್ರಾರ್ಥಿಸಿ ಕಡೇಶಿವಾಲಯದ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹ ದೇವರಿಗೆ ಸಿಯಾಳಾಭಿಷೇಕ ನಡೆಯಿತು.
Vijaya Karnataka Web abhisheka

ಮಳೆಯ ಕೃಪೆಗಾಗಿ ಕಡೇಶಿವಾಲಯ ಹಾಗೂ ಆಸುಪಾಸಿನ ಜನರು ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹ ದೇವರ ಮೊರೆಹೋಗಿ ಕಡೇಶಿವಾಲಯ ದೇವಸ್ಥಾನದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ದೇವರಿಗೆ ಸೀಯಾಳ ಅಭಿಷೇಕ ಮಾಡುವ ಮೂಲಕ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ಊರಿನ ಹಾಗೂ ಪರವೂರಿನ ಜನರು ಸೇರಿದಂತೆ ದೇವಸ್ಥಾನದ ಭಕ್ತರು ನೀಡಿದ ಐನೂರಕ್ಕೂ ಅಧಿಕ ಸಿಯಾಳವನ್ನು ದೇವರಿಗೆ ಸಮರ್ಪಿಸಲಾಯಿತು. ನೂರಾರು ಭಕ್ತರು ಈ ಸಂದರ್ಭದಲ್ಲಿ ಶ್ರೀ ದೇವರ ದರ್ಶನ ಪಡೆದು ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ