ಆ್ಯಪ್ನಗರ

ಶ್ರೀ ದತ್ತ ಜಯಂತಿ ಮಹೋತ್ಸವ, ಶ್ರೀ ದತ್ತ ಮಹಾಯಾಗ ಸಪ್ತಾಹ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಡಿ.5 ರಿಂದ 11ರ ತನಕ ಶ್ರೀ ದತ್ತ ಜಯಂತಿ ಮಹೋತ್ಸವ, ಶ್ರೀ ದತ್ತ ಮಹಾಯಾಗ ಸಪ್ತಾಹವು ವಿವಿಧ ವೈದಿಕ,ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

Vijaya Karnataka 29 Nov 2019, 4:56 pm
ಒಡಿಯೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಡಿ.5 ರಿಂದ 11ರ ತನಕ ಶ್ರೀ ದತ್ತ ಜಯಂತಿ ಮಹೋತ್ಸವ, ಶ್ರೀ ದತ್ತ ಮಹಾಯಾಗ ಸಪ್ತಾಹವು ವಿವಿಧ ವೈದಿಕ,ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷ ಗಾನ ಬಯಲಾಟ ಸಪ್ತಾಹವು ಜರಗಲಿದೆ.
Vijaya Karnataka Web bodhi logo


ಪ್ರತಿದಿನ ಶ್ರೀ ಗುರುಚರಿತ್ರೆ ಪಾರಾಯಣ, ವೇದ ಪಾರಾಯಣ, ಶ್ರೀ ಗುರುಚರಿತಾಮೃತ ಪ್ರವಚನ ನಡೆಯಲಿದೆ. ಪ್ರವಚನಕಾರರಾಗಿ ನಿವೃತ್ತ ಪ್ರಿನ್ಸಿಪಾಲ್‌ ಪ್ರೊ.ಚಂದ್ರಪ್ರಭಾ ಹೆಗ್ಡೆ ಶಿರ್ವ, ಶ್ರೀ ಸೂರ್ಯನಾರಾಯಣ ಭಟ್‌ ಕಶೆಕೋಡಿ, ಡಾ. ಭಾಸ್ಕರ ಭಟ್‌ ಸೋಂದಾ, ಉಡುಪಿ, ಡಾ.ಎಂ. ಪ್ರಭಾಕರ ಜೋಶಿ, ಮಂಗಳೂರು, ಡಾ. ಗುರುದಾಸ್‌ ಎಸ್‌.ಪಿ., ಮಂಗಳೂರು, ವಿದ್ವಾನ್‌ ವಿ.ಬಿ. ಹಿರಣ್ಯ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಮಹಾಸಂತರ್ಪಣೆ. ಅಪರಾಹ್ನ 2ರಿಂದ ಯಕ್ಷ ಗಾನ ಬಯಲಾಟ. ರಾತ್ರಿ 7ರಿಂದ ರಂಗಪೂಜೆ, ಬೆಳ್ಳಿ ರಥೋತ್ಸವ, ಪ್ರಸಾದ ವಿತರಣೆ, ಡಿ. 5ರಂದು ಬೆಳಗ್ಗೆ ಶ್ರೀ ಗಣಪತಿ ಹವನ,ನಾಗತಂಬಿಲ ನಡೆಯಲಿದೆ. ಬೆಳಿಗ್ಗೆ 9ರಿಂದ ಶ್ರೀ ದತ್ತ ಮಹಾಯಾಗ ಸಪ್ತಾಹ ಆರಂಭ. ಬಳಿಕ ಗುರುಭಜಕರಿಗೆ ಶ್ರೀಗಳವರಿಂದ ಶ್ರೀದತ್ತ ಮಾಲಾಧಾರಣೆ. ಸಂಜೆ ಶ್ರೀ ದತ್ತಾಂಜನೇಯ ದೇವರ ಪಲ್ಲಕಿ ಉತ್ಸವ ನಡೆಯಲಿದೆ.

ಡಿ.7ರಂದು 11ಗಂಟೆಗೆ ಬೋಳಾರ ನಾರಾಯಣ ಶೆಟ್ಟಿ ಪ್ರಶಸ್ತಿ ಸಮಾರಂಭ ನಡೆಯಲಿದೆ. ಡಿ.11ರಂದು ಬೆಳಗ್ಗೆ 9ಗಂಟೆಗೆ ಶ್ರೀ ದತ್ತಮಾಲಾಧಾರಿಗಳಿಂದ ನಾಮಸಂಕೀರ್ತನಾ ಶೋಭಾಯಾತ್ರೆ, ಬೆಳಗ್ಗೆ 10 ಗಂಟೆಯಿಂದ ಶ್ರೀಗಳ ಹಾಗೂ ಸಾಧ್ವಿ ಶ್ರೀ ಮಾತಾನಂದಮಯೀ ಅವರ ದಿವ್ಯ ಉಪಸ್ಥಿತಿಯಲ್ಲಿ ಧರ್ಮಸಭೆ ನಡೆಯಲಿದೆ. ವಿಶೇಷ ಆಹ್ವಾನಿತರಾಗಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ ಕಾಮತ್‌, ನವಿಮುಂಬಯಿಯ ಘನ್ಸೋಲಿಯ ಶ್ರೀ ಮೂಕಾಂಬಿಕಾ ದೇವಾಲಯದ ಪ್ರಧಾನ ಅರ್ಚಕ ಗುರುಪ್ರಸಾದ್‌ ಭಟ್‌, ವಿಟ್ಲ ವಲಯ ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಭಾಗವಹಿಸಲಿದ್ದಾರೆ.

ಮಧ್ಯಾಹ್ನ ಗಂಟೆ 12 ರಿಂದ ವೇದ ಪಾರಾಯಣ- ಶ್ರೀ ಗುರುಚರಿತ್ರೆ ಪಾರಾಯಣ ಸಮಾಪ್ತಿ. ಶ್ರೀ ದತ್ತ ಮಹಾಯಾಗದ ಪೂರ್ಣಾಹುತಿ. ಕಲ್ಪೋಕ್ತ ಪೂಜೆ, ಮಹಾಪೂಜೆ, ದತ್ತ ಸಂಪ್ರದಾಯದಂತೆ ಮಧುಕರೀ, ಮಂತ್ರಾಕ್ಷ ತೆ. ಮಹಾಸಂತರ್ಪಣೆ. ರಾತ್ರಿ ರಂಗಪೂಜೆ, ಬೆಳ್ಳಿ ರಥೋತ್ಸವ, ಉಯ್ಯಾಲೆ ಸೇವೆ. ರಾತ್ರಿ 9.30ರಿಂದ ಪೆರ್ಡೂರು ಮೇಳದವರಿಂದ ಯಕ್ಷ ಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ