ಆ್ಯಪ್ನಗರ

ಚಂದ್ರಯಾನ-2ಗೆ ವೇದ ಗಣಿತದ ನೆರವು

ಇತ್ತೀಚೆಗಷ್ಟೇ ಯಶಸ್ವಿಯಾಗಿ ಉಡಾವಣೆಯಾದ ಚಂದ್ರಯಾನ-2 ಯೋಜನೆಗೆ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಶ್ರೀಗಳು ವೇದ ಗಣಿತದ ಮೂಲಕ ಗಣನೀಯ ನೆರವು ನೀಡಿದ್ದಾರೆ ಎಂದು ತಿಳಿದು ಬಂದಿದೆ.

Vijaya Karnataka 9 Aug 2019, 3:25 pm
ಪುರಿ: ಇತ್ತೀಚೆಗಷ್ಟೇ ಯಶಸ್ವಿಯಾಗಿ ಉಡಾವಣೆಯಾದ ಚಂದ್ರಯಾನ-2 ಯೋಜನೆಗೆ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಶ್ರೀಗಳು ವೇದ ಗಣಿತದ ಮೂಲಕ ಗಣನೀಯ ನೆರವು ನೀಡಿದ್ದಾರೆ ಎಂದು ತಿಳಿದು ಬಂದಿದೆ.
Vijaya Karnataka Web Chandrayana


ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಶ್ರೀಹರಿಕೋಟದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರಕ್ಕೆ ಶ್ರೀಗಳನ್ನು ಆಹ್ವಾನಿಸಿದ್ದರು ಎಂದು ಹೇಳಲಾಗಿದ್ದು, ಈ ಸಂದರ್ಭದಲ್ಲಿ ವೇದ ಗಣಿತದಲ್ಲಿರುವ ಸಾಕಷ್ಟು ಅಮೂಲ್ಯ ಮಾಹಿತಿಯನ್ನು ಅವರು ವಿಜ್ಞಾನಿಗಳ ಜತೆ ಹಂಚಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ದೃಢಪಡಿಸಿರುವ ಮಠದ ಸಾರ್ವಜನಿಕ ಸಂಪರ್ಕಾಧಿಕಾರಿ ಮನೋಜ್‌ ರಾಥಾ, ಗುರು ನಿಶ್ಚಲಾನಂದರು ಇಸ್ರೋ ವಿಜ್ಞಾನಿಗಳನ್ನು ಭೇಟಿಯಾಗಿ ಪುರಾಣ ಮತ್ತು ಭಗವದ್‌ಗೀತೆಗಳಲ್ಲಿರುವ ವೇದ ಗಣಿತದಲ್ಲಿರುವ ಥಿಯರಂ ಮತ್ತು ಲೆಕ್ಕಾಚಾರಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಭಾರತವು ಗಣಿತ, ಆಸ್ಟ್ರಾನಮಿ, ಕ್ಷಿಪಣಿ ತಂತ್ರಜ್ಞಾನದಲ್ಲಿ ಸಾವಿರಾರು ವರ್ಷಗಳ ಹಿಂದೆಯೇ ಪ್ರಾವಿಣ್ಯತೆ ಸಾಧಿಸಿತ್ತು. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆಗಳನ್ನು ಮಾಡಲು ಸಾಧ್ಯವಿದೆ ಎಂದು ಶ್ರೀಗಳು ಹೇಳಿರುವುದಾಗಿ ವಿವರಿಸಿದರು.

ನಿಶ್ಚಲಾನಂದ ಸರಸ್ವತಿ ಶ್ರೀಗಳು ಕೇವಲ ಅಧ್ಯಾತ್ಮ ಗುರು ಮಾತ್ರವಲ್ಲ ಗಣಿತದಲ್ಲಿ ಅದ್ಭುತ ಪಾಂಡಿತ್ಯ ಹೊಂದಿದ್ದಾರೆ. ಹಲವಾರು ವರ್ಷಗಳ ಸಂಶೋಧನೆಯ ಬಳಿಕ ಶ್ರೀಗಳು ವೇದ ಗಣಿತದ ಕುರಿತು 11 ಪುಸ್ತಕಗಳನ್ನು ಬರೆದಿದ್ದಾರೆ. ಈ ಪುಸ್ತಕಗಳಿಂದ ಜಾಗತಿಕ ಮಟ್ಟದಲ್ಲಿ ಹಲವರು ಸ್ಫೂರ್ತಿ ಪಡೆದುಕೊಂಡಿದ್ದು, ಸ್ವಾಮೀಜಿಯವರ ಸಲಹೆಗಳನ್ನು ಕೇಳುತ್ತಿದ್ದಾರೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ